September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುತ್ರೋಟ್ಟು ನಿವಾಸಿ ಫಯಾಜ್ ಸ್ಥಳೀಯ ಮಹಿಳೆ ಜೊತೆ ನಾಪತ್ತೆ ಶಂಕೆ: ಫಯಾಜ್ ನ ಪತ್ನಿಯಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು -ಪ್ರಕರಣ ದಾಖಲು

ನಡ ಗ್ರಾಮದ ಕುತ್ರೊಟ್ಟು ನಿವಾಸಿ ಫಯಾಜ್ , ಲಾಯಿಲ ಕಕ್ಕೇನದ ಮಹಿಳೆಯೊಂದಿಗೆ ನಾಪತ್ತೆಯಾಗಿದ್ದಾರೆ ಎಂದು ಶಂಕೆ ವ್ಯಕ್ತಪಡಿಸಿ, ಫಯಾಜ್ ನ ಪತ್ನಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ಎ.23 ರಂದು ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

ನಡ ಗ್ರಾಮದ ಕುತ್ರೊಟ್ಟು ನಿವಾಸಿ ಶ್ರೀಮತಿ ಮರಿಯಮ್ಮ ರವರು ನೀಡಿದ ದೂರಿನಂತೆ ಮರಿಯಮ್ಮ ರವರ ಪತಿ ಫಯಾಜ್ ಎ. 22 ರಂದು ಬೆಳ್ಳಿಗ್ಗೆ 6.30 ಗಂಟೆಗೆ ಮನೆಯಿಂದ ರಿಕ್ಷಾದಲ್ಲಿ ಬಾಡಿಗೆಗೆ ಎಂದು ಹೋದವರು, ಲಾಯಿಲದ ಕಕ್ಕೇನಕ್ಕೆ ಹೋಗಿ
ರಿಕ್ಷಾದಲ್ಲಿ ಮಹಿಳೆಯನ್ನು ಕರೆದುಕೊಂಡು ಹೋಗಿದ್ದಾರೆ. ಈಗ ಇಬ್ಬರ ಮೊಬೈಲ್‌ ಸ್ವೀಚ್‌ ಆಫ್‌ ಆಗಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ. ಅವರು ಬರಬಹುದು ಎಂದು ಈ ತನಕ ಕಾದು ತಡವಾಗಿ ದೂರು ನೀಡುತ್ತಿದ್ದು ಲಾಯಿಲ ಕಕ್ಕೇನದ ಮಹಿಳೆಯ ಜೊತೆ ಕಾಣೆಯಾಗಿರುವ ಫಯಾಜ್‌ ಪತ್ತೆ ಹಚ್ಚಿ ಕೊಡಬೇಕಾಗಿ ದೂರಿನಲ್ಲಿ ವಿನಂತಿಸಿದ್ದಾರೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

ಬಳಂಜ: ನಾರಾವಿ ವಲಯ ಕ್ರೀಡಾ ಕೂಟ ಉದ್ಘಾಟನೆ

Suddi Udaya

ನೀತಿ ಸಂಹಿತೆ ಜಾರಿ: ಸೆ.21-25 ರೊಳಗೆ ಮಹಾಸಭೆ ನಡೆಸುವವರು ಚುನಾವಣಾಧಿಕಾರಿಯಿಂದ ಅನುಮತಿ ಪಡೆಯುವಂತೆ ವಿನಂತಿ

Suddi Udaya

ಮಡಂತ್ಯಾರು : ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಇಂದಬೆಟ್ಟು : ಮಾತೃಶ್ರೀ ಮುಗೇರ ಸೇವಾ ಸಂಘದಿಂದ ಪುಸ್ತಕ ವಿತರಣೆ

Suddi Udaya

ಅಂಡಿಂಜೆ ಗ್ರಾ.ಪಂ. ಕಾರ್ಯದರ್ಶಿ ಶ್ರೀಮತಿ ಚಂಪಾ ನಿಧನ

Suddi Udaya

ಗಣೇಶೋತ್ಸವಕ್ಕೆಂದು ಹೋದ ವ್ಯಕ್ತಿಯಮೃತ ದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

Suddi Udaya
error: Content is protected !!