25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಶಿಲ: ಶಿವಕೀರ್ತಿ ನಿಲಯದಲ್ಲಿ‌ “ಹನುಮ‌ ಜಯಂತಿ” ಆಚರಣೆ

ಶಿಶಿಲ : ರಾಮ ಹನುಮ ಈ ಭೂಮಿಯಲ್ಲಿ ಚಿರಕಾಲ ಇದ್ದಾರೆ. ಎಲ್ಲಿ ಭಕ್ತಿಯಿಂದ ಭಜಿಸುವವರಿರುತ್ತಾರೊ ಅಲ್ಲಿ ರಾಮ ಹನುಮನಿರುತ್ತಾರೆ. ಭಜನೆ ಸಂಸ್ಕಾರ ಬೆಳೆಸುತ್ತದೆ. ಅಳುಕನ್ನು ದೂರ ಮಾಡುತ್ತದೆ. ನಮ್ಮ ಧರ್ಮ ನಂಬಿಕೆ ಇರುವಲ್ಲಿ ಹನುಮ ರಾಮನಿರುತ್ತಾರೆ. ನಾವು ಇರುವಲ್ಲಿಯವರೆಗೆ ಅವರೂ ಇರುತ್ತಾರೆ. ಅವರು ಇರುವಲ್ಲಿಯವರೆಗೆ ನಾವೂ ಇರುತ್ತೆವೆ. ಎಂದು ಸಾಹಿತಿ, ಬರಹಗಾರ, ನಿವೃತ್ತ ಪ್ರಾಂಶುಪಾಲರಾದ ಉಂಡೆಮನೆ ವಿಶ್ವೇಶ್ವರ ಭಟ್ ತಿಳಿಸಿದರು.


ಅವರು ಶಿಶಿಲ ಶಿವಕೀರ್ತಿ ನಿಲಯದಲ್ಲಿ‌ ನಡೆದ ” ಹನುಮ‌ ಜಯಂತಿ ” ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ್ದರು.
ಕಾರ್ಯಕ್ರಮವನ್ನು ಅರಿಕೆಗುಡ್ದೆ ದೇವಾಲಯದ ಪ್ರಕಾಶ್ ಪಿಲಿಕಬೆ ಉದ್ಘಾಟನೆ ಮಾಡಿ ಹನೂಮಂತ ರಾಮಾಯಣದ ರತ್ನ, ಭಕ್ತಿಗೆ ಮತ್ತು ಆದರ್ಶಕ್ಕೆ ಹನುಮ ನಮಗೆಲ್ಲಾ ಮಾದರಿ . ಹನುಮನ ಭಜಿಸಿದವರಿಗೆ ಎಲ್ಲಾ ಪುಣ್ಯ ಕಾರ್ಯಗಳೂ ಜೀವನದಲ್ಲಿ ಲಭಿಸಲಿ ಎಂದು ಶುಭ ಹಾರೈಸಿದರು.


ಕಾರ್ಯಕ್ರಮದಲ್ಲಿ ವಿವಿಧ ಭಜನಾ ಮಂಡಳಿಯಿಂದ ಕುಣಿತ ಭಜನೆ, ಭಜನಾ ಪಟುಗಳಿಗೆ ಅಭಿನಂದನೆ, ರಾಮಾಯಣ ಹಕ್ಕಿ ನೋಟ ಪುಸ್ತಕ ವಿತರಣೆ ಮುಂತಾದ ಕಾರ್ಯಕ್ರಮ ಜರಗಿತ್ತು.
ಭಜನಾ ಕಾರ್ಯಕ್ರಮವನ್ನು ಸುಂದರ ಬಿಳಿನೆಲೆ ಮತ್ತು ತಂಡದವರು ನಿರ್ವಹಿಸಿದ್ದರು.
ಕಾರ್ಯಕ್ರಮದಲ್ಲಿ ರಾಘವೇಂದ್ರ ಕಿಗ್ಗ, ಉದಯಶಂಕರ ಅರಸಿನಮಕ್ಕಿ, ಪುತ್ತೂರು ರವೀಂದ್ರ ಕುದ್ದಣ್ನಾಯ, ಭಾಸ್ಕರ ರಾವ್ ಮುಂಡ್ರುಪ್ಪಾಡಿ , ರವಿ ಕಾಸರಗೋಡು, ವಿಶು ಕುಮಾರ್ ಪೆರೆಡೆಲು, ಪ್ರೇಮಚಂದ್ರ ಪೆರ್ಲ, ಮೋಹನ ನೆಲ್ಲಿತ್ತಾಯ, ಶಿವರಾಮ ನೆಲ್ಲಿತ್ತಾಯ, ಶ್ರೀಪತಿ ಶಿಶಿಲ, ಪ್ರಕಾಶ ನೆಲ್ಲಿತ್ತಾಯ ಮುಂತಾದವರು ಭಾಗವಹಿಸಿದ್ದರು.

Related posts

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಶ್ರೀ  ಗಣೇಶ ಚತುರ್ಥಿ ಪ್ರಯುಕ್ತ 108 ತೆಂಗಿನ ಕಾಯಿ ಗಣಹೋಮ ಹಾಗೂ ರಂಗಪೂಜೆ

Suddi Udaya

ಶ್ರೀ ರಾಮ ಕ್ಷೇತ್ರಕ್ಕೆ ಮಾಜಿ ಸಚಿವರುಗಳಾದ ರಮಾನಾಥ ರೈ, ವಿನಯ ಕುಮಾರ್ ಸೊರಕೆ ಭೇಟಿ

Suddi Udaya

ರಕ್ತಕ್ಕೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿರುವ ಎರಡು ವರ್ಷದ ಮಗುವಿನ ಚಿಕಿತ್ಸೆಗೆ ನೆರವಾಗಿ

Suddi Udaya

ಮಡಂತ್ಯಾರು: ಬಂಗೇರಕಟ್ಟೆ ನೆತ್ತರ ರಸ್ತೆಯ ದುರಸ್ತಿಯ ಬಗ್ಗೆ ಕಾಲ್ನಡಿಗೆಯಲ್ಲಿ ಪ್ರತಿಭಟನೆ

Suddi Udaya

ಭಾರತೀಯ ಜೈನ್ ಮಿಲನ್ ನ ಕೆನಡಾ ಘಟಕವನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ವೆಬಿನಾರ್ ಮೂಲಕ ಉದ್ಘಾಟನೆ

Suddi Udaya

ಬೂಡುಮುಗೇರು ಶ್ರೀದುರ್ಗಾಪರಮೇಶ್ವರಿದೇವರಬ್ರಹ್ಮಕಲಶಾಭಿಷೇಕ

Suddi Udaya
error: Content is protected !!