23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಶಿಲ: ಶಿವಕೀರ್ತಿ ನಿಲಯದಲ್ಲಿ‌ “ಹನುಮ‌ ಜಯಂತಿ” ಆಚರಣೆ

ಶಿಶಿಲ : ರಾಮ ಹನುಮ ಈ ಭೂಮಿಯಲ್ಲಿ ಚಿರಕಾಲ ಇದ್ದಾರೆ. ಎಲ್ಲಿ ಭಕ್ತಿಯಿಂದ ಭಜಿಸುವವರಿರುತ್ತಾರೊ ಅಲ್ಲಿ ರಾಮ ಹನುಮನಿರುತ್ತಾರೆ. ಭಜನೆ ಸಂಸ್ಕಾರ ಬೆಳೆಸುತ್ತದೆ. ಅಳುಕನ್ನು ದೂರ ಮಾಡುತ್ತದೆ. ನಮ್ಮ ಧರ್ಮ ನಂಬಿಕೆ ಇರುವಲ್ಲಿ ಹನುಮ ರಾಮನಿರುತ್ತಾರೆ. ನಾವು ಇರುವಲ್ಲಿಯವರೆಗೆ ಅವರೂ ಇರುತ್ತಾರೆ. ಅವರು ಇರುವಲ್ಲಿಯವರೆಗೆ ನಾವೂ ಇರುತ್ತೆವೆ. ಎಂದು ಸಾಹಿತಿ, ಬರಹಗಾರ, ನಿವೃತ್ತ ಪ್ರಾಂಶುಪಾಲರಾದ ಉಂಡೆಮನೆ ವಿಶ್ವೇಶ್ವರ ಭಟ್ ತಿಳಿಸಿದರು.


ಅವರು ಶಿಶಿಲ ಶಿವಕೀರ್ತಿ ನಿಲಯದಲ್ಲಿ‌ ನಡೆದ ” ಹನುಮ‌ ಜಯಂತಿ ” ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ್ದರು.
ಕಾರ್ಯಕ್ರಮವನ್ನು ಅರಿಕೆಗುಡ್ದೆ ದೇವಾಲಯದ ಪ್ರಕಾಶ್ ಪಿಲಿಕಬೆ ಉದ್ಘಾಟನೆ ಮಾಡಿ ಹನೂಮಂತ ರಾಮಾಯಣದ ರತ್ನ, ಭಕ್ತಿಗೆ ಮತ್ತು ಆದರ್ಶಕ್ಕೆ ಹನುಮ ನಮಗೆಲ್ಲಾ ಮಾದರಿ . ಹನುಮನ ಭಜಿಸಿದವರಿಗೆ ಎಲ್ಲಾ ಪುಣ್ಯ ಕಾರ್ಯಗಳೂ ಜೀವನದಲ್ಲಿ ಲಭಿಸಲಿ ಎಂದು ಶುಭ ಹಾರೈಸಿದರು.


ಕಾರ್ಯಕ್ರಮದಲ್ಲಿ ವಿವಿಧ ಭಜನಾ ಮಂಡಳಿಯಿಂದ ಕುಣಿತ ಭಜನೆ, ಭಜನಾ ಪಟುಗಳಿಗೆ ಅಭಿನಂದನೆ, ರಾಮಾಯಣ ಹಕ್ಕಿ ನೋಟ ಪುಸ್ತಕ ವಿತರಣೆ ಮುಂತಾದ ಕಾರ್ಯಕ್ರಮ ಜರಗಿತ್ತು.
ಭಜನಾ ಕಾರ್ಯಕ್ರಮವನ್ನು ಸುಂದರ ಬಿಳಿನೆಲೆ ಮತ್ತು ತಂಡದವರು ನಿರ್ವಹಿಸಿದ್ದರು.
ಕಾರ್ಯಕ್ರಮದಲ್ಲಿ ರಾಘವೇಂದ್ರ ಕಿಗ್ಗ, ಉದಯಶಂಕರ ಅರಸಿನಮಕ್ಕಿ, ಪುತ್ತೂರು ರವೀಂದ್ರ ಕುದ್ದಣ್ನಾಯ, ಭಾಸ್ಕರ ರಾವ್ ಮುಂಡ್ರುಪ್ಪಾಡಿ , ರವಿ ಕಾಸರಗೋಡು, ವಿಶು ಕುಮಾರ್ ಪೆರೆಡೆಲು, ಪ್ರೇಮಚಂದ್ರ ಪೆರ್ಲ, ಮೋಹನ ನೆಲ್ಲಿತ್ತಾಯ, ಶಿವರಾಮ ನೆಲ್ಲಿತ್ತಾಯ, ಶ್ರೀಪತಿ ಶಿಶಿಲ, ಪ್ರಕಾಶ ನೆಲ್ಲಿತ್ತಾಯ ಮುಂತಾದವರು ಭಾಗವಹಿಸಿದ್ದರು.

Related posts

ಭಾರಿ ಬಿರುಗಾಳಿ ಮಳೆ: ನಾರ್ಯ ಅರಿಕೋಡಿ ವಿಮಲಾಕ್ಷ ಗೌಡರ ಮನೆಯ ಮೇಲ್ಛಾವಣಿ ಶೀಟ್ ಗಾಳಿಗೆ ಹಾರಿ ರೂ. 1 ಲಕ್ಷ ನಷ್ಟ

Suddi Udaya

ಉಜಿರೆ ಬ್ರಹ್ಮಕಲಶೋತ್ಸವ ಬೆಂಗಳೂರು ಸಮಿತಿ ಸಭೆ

Suddi Udaya

ಬೆಳ್ತಂಗಡಿ ವರ್ತಕರ ಸಂಘದಿಂದ ರಸ್ತೆ ನಿರ್ಮಾಣದ ಬಗ್ಗೆ ಚರ್ಚಿಸಲು ಡಾ. ಡಿ ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಕನ್ಯಾಡಿ-2 ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಲಾಯಿಲ: ಬಜಕ್ರೆಸಾಲು ಸೇತುವೆ ಅಡಿ ಎರಡು ಕಾಣಿಕೆ ಡಬ್ಬಗಳು ಒಡೆದ ರೀತಿಯಲ್ಲಿ ಪತ್ತೆ: ಡಬ್ಬಗಳನ್ನು ಒಡೆದು ಹಣ ಕಳವು ಗೈದಿರುವ ಶಂಕೆ

Suddi Udaya

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ‘ಮಹಿಳಾ ಆರೋಗ್ಯ ಮತ್ತು ಸುರಕ್ಷಾ ಕ್ರಮ ಹಾಗೂ ಯೋಗದ ಪ್ರಾಮುಖ್ಯ’ ಕಾರ್ಯಾಗಾರ

Suddi Udaya
error: Content is protected !!