22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉರುವಾಲು ಹಲೇಜಿ ತನ್ನೋಜಿ ಶ್ರೀ ಮಹಾಲಿಂಗೇಶ್ವರ ದೇವರ ಪ್ರತಿಷ್ಠಾ ವಾರ್ಷಿಕೋತ್ಸವ

ಉರುವಾಲು: ಹಲೇಜಿ ತನ್ನೋಜಿ ಶ್ರೀ ಮಹಾಲಿಂಗೇಶ್ವರ ದೇವರ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ದೈವದ ನೇಮೋತ್ಸವವು ಎ.24ರಿಂದ ಪ್ರಾರಂಭಗೊಂಡು 25ರವರೆಗೆ ನಡೆಯಲಿದೆ.

ಇಂದು ಬೆಳಗ್ಗೆ ಪ್ರಾರ್ಥನೆ, ತೋರಣಮೂಹೂರ್ತ, ಸ್ವಸ್ತಿ ಪುಣ್ಯಾಹ, ಗಣಯಾಗ, ಪಂಚಾಮೃತ ಅಭಿಷೇಕ, ಏಕಾದಶ ರುದ್ರಪಾರಾಯಣ ಸಹಿತ ಅಭಿಷೇಕ, ನವಕ ಕಲಶಾಭಿಷೇಕ ಪ್ರಧಾನ ಹೋಮ, ಮಹಾಪೂಜೆ, ಪ್ರಸಾದ ವಿತರಣೆ, ಹಾಗೂ ದೇವಸ್ಥಾನದ ಬಳಿ ಹೊರೆಕಾಣಿಕೆ ಸ್ವೀಕಾರ, ಅನ್ನಸಂತರ್ಪಣೆ ನಡೆಯಿತು.

ಸೂರ್ಯೋದಯದಿಂದ ಸೂರ್ಯಾಸ್ತದ ತನಕ ಅರ್ಧ ಏಕಾಹಃ ಭಜನಾ ಕಾರ್ಯಕ್ರಮ ನಡೆಯಲಿದ್ದು ಇದರ ಉದ್ಘಾಟನೆಯನ್ನು ಮಾರುತಿಪುರ ರೈತ ಬಂಧು ಮಾಲಕರು ಶಿವಶಂಕರ ನಾಯಕ್ ನೆರವೇರಿಸಿದರು.. ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು ಹಾಗೂ ಊರವರು ಉಪಸ್ಥಿತರಿದ್ದರು.

ರಾತ್ರಿ ಗಂಟೆ 6-00 ರಿಂದ ಶ್ರೀ ರಂಗಪೂಜೆ, ಪ್ರಾರ್ಥನೆ, ದೈವಕ್ಕೆ ಪರ್ವ ಸೇವೆ, ರಾತ್ರಿ 8-00 ರಿಂದ ದೇವರ ಬಲಿ ಉತ್ಸವ, ಕಟ್ಟೆಪೂಜೆ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ, ಮಂತ್ರಾಕ್ಷತೆ., ಅನ್ನಸಂತರ್ಪಣೆ, ರಾತ್ರಿ ಗಂಟೆ 10-00ಕ್ಕೆ ಶ್ರೀ ವ್ಯಾಘ್ರಚಾಮುಂಡಿ ದೈವದ ನೇಮೋತ್ಸವ ನಡೆಯಲಿದೆ.

Related posts

ಎಕ್ಸಲೆಂಟ್ ಪ್ರೌಢಶಾಲೆಯ ವಿದ್ಯಾರ್ಥಿಗಳು ಹೊಸಂಗಡಿ ಗ್ರಾಮ ಪಂಚಾಯತಿಗೆ ಭೇಟಿ

Suddi Udaya

ರಾಜ್ಯಮಟ್ಟದ ಮುಕ್ತ ಕರಾಟೆ ಚಾಂಪಿಯನ್ಶಿಪ್ ಸ್ಪರ್ಧೆ: ಶಿಹಾನ್ ಅಬ್ದುಲ್ ರೆಹಮಾನ್ ರವರ ನೇತೃತ್ವದ ಉಜಿರೆ ಹಾಗೂ ಬೆಳ್ತಂಗಡಿ ಕರಾಟೆ ತರಬೇತಿ ಕೇಂದ್ರದ ಮಕ್ಕಳಿಗೆ ಹಲವು ಪ್ರಶಸ್ತಿ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥಾಪಕರ ಹಾಗೂ ಚಿಂತನಾ ದಿನಾಚರಣೆ

Suddi Udaya

ನಾಳೆ (ಮೇ 16): ಕಕ್ಕಿಂಜೆಯಲ್ಲಿ ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಸ್ಥಳಾಂತರಿತ ಶಾಖೆಯ ಉದ್ಘಾಟನಾ ಸಮಾರಂಭ

Suddi Udaya

ಪಡುಬಿದ್ರೆಯಲ್ಲಿ ಭೀಕರ ರಸ್ತೆ ಅಪಘಾತ: ಅರಸಿನಮಕ್ಕಿ ಪುರುಷೋತ್ತಮ್ ಅಭ್ಯಂಕರ್ ರವರ ಪತ್ನಿ ಶ್ರೀಮತಿ ಸುಮಂಗಳ ಮೃತ್ಯು

Suddi Udaya

ಉಜಿರೆ ಶ್ರೀ ಧ.ಮಂ ಪ.ಪೂ ಕಾಲೇಜಿನಲ್ಲಿ ಸಂಸ್ಕೃತೋತ್ಸವ ಕಾರ್ಯಕ್ರಮ

Suddi Udaya
error: Content is protected !!