September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುತ್ರೋಟ್ಟು ನಿವಾಸಿ ಫಯಾಜ್ ಸ್ಥಳೀಯ ಮಹಿಳೆ ಜೊತೆ ನಾಪತ್ತೆ ಶಂಕೆ: ಫಯಾಜ್ ನ ಪತ್ನಿಯಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು -ಪ್ರಕರಣ ದಾಖಲು

ನಡ ಗ್ರಾಮದ ಕುತ್ರೊಟ್ಟು ನಿವಾಸಿ ಫಯಾಜ್ , ಲಾಯಿಲ ಕಕ್ಕೇನದ ಮಹಿಳೆಯೊಂದಿಗೆ ನಾಪತ್ತೆಯಾಗಿದ್ದಾರೆ ಎಂದು ಶಂಕೆ ವ್ಯಕ್ತಪಡಿಸಿ, ಫಯಾಜ್ ನ ಪತ್ನಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ಎ.23 ರಂದು ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

ನಡ ಗ್ರಾಮದ ಕುತ್ರೊಟ್ಟು ನಿವಾಸಿ ಶ್ರೀಮತಿ ಮರಿಯಮ್ಮ ರವರು ನೀಡಿದ ದೂರಿನಂತೆ ಮರಿಯಮ್ಮ ರವರ ಪತಿ ಫಯಾಜ್ ಎ. 22 ರಂದು ಬೆಳ್ಳಿಗ್ಗೆ 6.30 ಗಂಟೆಗೆ ಮನೆಯಿಂದ ರಿಕ್ಷಾದಲ್ಲಿ ಬಾಡಿಗೆಗೆ ಎಂದು ಹೋದವರು, ಲಾಯಿಲದ ಕಕ್ಕೇನಕ್ಕೆ ಹೋಗಿ
ರಿಕ್ಷಾದಲ್ಲಿ ಮಹಿಳೆಯನ್ನು ಕರೆದುಕೊಂಡು ಹೋಗಿದ್ದಾರೆ. ಈಗ ಇಬ್ಬರ ಮೊಬೈಲ್‌ ಸ್ವೀಚ್‌ ಆಫ್‌ ಆಗಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ. ಅವರು ಬರಬಹುದು ಎಂದು ಈ ತನಕ ಕಾದು ತಡವಾಗಿ ದೂರು ನೀಡುತ್ತಿದ್ದು ಲಾಯಿಲ ಕಕ್ಕೇನದ ಮಹಿಳೆಯ ಜೊತೆ ಕಾಣೆಯಾಗಿರುವ ಫಯಾಜ್‌ ಪತ್ತೆ ಹಚ್ಚಿ ಕೊಡಬೇಕಾಗಿ ದೂರಿನಲ್ಲಿ ವಿನಂತಿಸಿದ್ದಾರೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಅಧ್ಯಕ್ಷರಾಗಿ ಜಯಾನಂದ ಕಲ್ಲಾಪು, ಉಪಾಧ್ಯಕ್ಷರಾಗಿ ಸುನಿಲ್ ಅಣವು

Suddi Udaya

ಸಹಕಾರಿ ಕ್ಷೇತ್ರದ ಅಪ್ರತಿಮ ಸಾಧಕ ಪೆರಾಡಿ ಸೊಸೈಟಿ ಅಧ್ಯಕ್ಷ ಸತೀಶ್ ಕೆ ಕಾಶಿಪಟ್ಣರವರಿಗೆ ಈ ವರ್ಷದ ರಾಜ್ಯ “ಸಹಕಾರಿ ರತ್ನ” ಪ್ರಶಸ್ತಿ ಪ್ರದಾನ

Suddi Udaya

ಬೆಳ್ತಂಗಡಿ ಜೈನಪೇಟೆಯಲ್ಲಿರುವ ರತ್ನತ್ರಯ ತೀರ್ಥಕ್ಷೇತ್ರದಲ್ಲಿ ದಿ| ಉದಯಕುಮಾರ್ ಸ್ಮರಣಾರ್ಥ “ಸೂರ್ಯೋದಯ” ಕೃತಿ ಬಿಡುಗಡೆ

Suddi Udaya

ಪಿಲಾತಬೆಟ್ಟು: ಸಂತ ಜೋಸೆಫರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕ-ರಕ್ಷಕ ಸಭೆ

Suddi Udaya

ಸುಲ್ಕೇರಿಮೊಗ್ರು ಹೊಸಮನೆ ನಿವಾಸಿ ನೀಲಮ್ಮ ನಿಧನ

Suddi Udaya

ಬೆಳಾಲು: ಹೈ ಟೆನ್ಶನ್ ವಿದ್ಯುತ್ ತಂತಿಗೆ ಅಲ್ಯುಮೀನಿಯಂ ಏಣಿ ತಗುಲಿ ವ್ಯಕ್ತಿ ಸಾವು

Suddi Udaya
error: Content is protected !!