ಬಸ್ಸ್ ರಿವರ್ಸ್ ತೆಗೆಯುವ ವೇಳೆ ಮಹಿಳೆಯೋರ್ವರು ಬಸ್ಸಿನಡಿಗೆ ಸಿಲುಕಿ ದಾರುಣ ಸಾವು

Suddi Udaya

ಧರ್ಮಸ್ಥಳ: ಧರ್ಮಸ್ಥಳ ಬಸ್ ನಿಲ್ದಾಣದಲ್ಲಿ ಸುಬ್ರಹ್ಮಣ್ಯಕ್ಕೆ ಹೋಗುವ ಕೆ.ಎಸ್.ಆರ್.ಟಿ.ಸಿ ಬಸ್ಸು ರಿವರ್ಸ್ ತೆಗೆಯುವ ವೇಳೆ ಮಹಿಳೆಯೊಬ್ಬರು ಬಸ್ ನಡಿಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ಇಂದು (ಏ. 24) ಮಧ್ಯಾಹ್ನ ನಡೆದಿದೆ.

ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದಿರುವ ಮಹಿಳೆ ಟಯರ್ ನಡಿಗೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಹಿಳೆಯ ಗುರುತು ಇನ್ನಷ್ಟೇ ಪತ್ತೆ ಹಚ್ಚಬೇಕಿದ್ದು, ಶವವನ್ನು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇಡಲಾಗಿದೆ. ಸ್ಥಳೀಯ ಪೊಲೀಸರು ಸ್ಥಳಕ್ಕೆ ಭೇಟಿ ತನಿಖೆ ನಡೆಸುತ್ತಿದ್ದಾರೆ.

Leave a Comment

error: Content is protected !!