25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೇ 22: ಎಕ್ಸೆಲ್ ಅಕ್ಷರೋತ್ಸವ; ರಾಜ್ಯಮಟ್ಟದ ಕವಿಗೋಷ್ಠಿಗೆ ಆಹ್ವಾನ

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ರಾಜ್ಯಮಟ್ಟದ ‘ಅಕ್ಷರೋತ್ಸವ’ ಸಾಹಿತ್ಯ ಸಮ್ಮೇಳನ ಮೇ 22 ರಂದು ನಡೆಯಲಿದ್ದು, ಆಯ್ದ ಕವಿತೆಗಳಿಗೆ ರಾಗ ಸಂಯೋಜಿಸಿ ಹಾಡುವ “ಕವನ ವಾಚನ ಗಾಯನ -ನೃತ್ಯ ಕುಂಚ ಕಾರ್‍ಯಕ್ರಮ ನಡೆಯಲಿದೆ.

ಆಯ್ಕೆಯಾದ ಕವಿಗಳಿಗೆ ಸ್ಮರಣಿಕೆ ಪ್ರಮಾಣಪತ್ರ ಗ್ರಂಥ ಗೌರವ ನೀಡುವುದರೊಂದಿಗೆ ಪ್ರಯಾಣ ವೆಚ್ಚವನ್ನು ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗಳಿಗೆ ಶಾಂತಿರಾಜ್ ಜೈನ್ ಕ್ಯಾಂಪಸ್ ಮೆನೇಜರ್ (9900626441), ಕನ್ನಡ ಉಪನ್ಯಾಸಕರಾದ ರಂಜಿತ್ (7204208355) ಹಾಗೂ ಮುನೀರ್ (7022559969) ಈ ನಂಬರಿಗೆ ಕರೆ ಮಾಡಿ ವಿಚಾರಿಸಬಹುದೆಂದು ಎಕ್ಸೆಲ್ ವಿದ್ಯಾಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಸಕ್ತ ಕವಿಗಳು ತಮ್ಮ ಕವಿತೆಗಳನ್ನು ಕಳುಹಿಸಬೇಕಾದ ವಿಳಾಸ: ಅಧ್ಯಕ್ಷರು, ಆಡಳಿತ ಮಂಡಳಿ, ಎಕ್ಸೆಲ್ ಪದವಿ ಪೂರ್ವ ಕಾಲೇಜು ವಿದ್ಯಾಸಾಗರ ಕ್ಯಾಂಪಸ್ ಗುರುವಾಯನಕೆರೆ, ಕುವೆಟ್ಟು ಗ್ರಾಮ, .ಬೆಳ್ತಂಗಡಿ ದ.ಕ. -574217, ಇಲ್ಲವೇ ಇಮೇಲ್: [email protected] ವಿಳಾಸಕ್ಕೆ ಕವಿತೆಗಳನ್ನು ಕಳುಹಿಸಕೊಡಬಹುದು. ಕವರಿನ ಮೇಲೆ ಅಕ್ಷರೋತ್ಸವ-2024 ಎಂದು ಬರೆದು ಮೇ 10ರ ಒಳಗಾಗಿ ತಲುಪುವಂತೆ ತಮ್ಮ ಕವನಗಳನ್ನು ಈ ಮೇಲಿನ ವಿಳಾಸಕ್ಕೆ ಕಳುಹಿಸಿಕೊಡಬಹುದಾಗಿದೆ.

Related posts

ಕರಾಟೆ ಪಂದ್ಯಾಟ: ಹೋಲಿ ರಿಡೀಮರ್ ಶಾಲೆಯ ವಿದ್ಯಾರ್ಥಿ ಶಮಂತ್ ತೃತೀಯ

Suddi Udaya

ಧರ್ಮಸ್ಥಳ: ಶ್ರೀ ಮಂ.ಅ. ಪ್ರೌಢಶಾಲೆಯಲ್ಲಿ ಕರ್ನಾಟಕ ರಾಜ್ಯೋತ್ಸವ ಅಭಿಯಾನ ಹಾಗೂ ಕನಕದಾಸ ಜಯಂತಿ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಲಕ್ಷದೀಪೋತ್ಸವ: 13ನೇ ವರ್ಷದ ಪಾದಯಾತ್ರೆ ಸಂಪನ್ನ ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ ಶೀಘ್ರದಲ್ಲೇ ನಸಿ೯ಂಗ್‌ ಕಾಲೇಜು ಹಾಗೂ ಕೃಷಿ ಕಾಲೇಜು ಆರಂಭಿಸಲು ಯೋಜನೆ: ಡಾ.ಹೆಗ್ಗಡೆ

Suddi Udaya

ಎಕ್ಸೆಲ್ ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ ರಿಂದ ರೋಟರಿ ಕುಟುಂಬದ ಶಿಕ್ಷಕ ಸದಸ್ಯರ ಸನ್ಮಾನ

Suddi Udaya

ಬದ್ಯಾರು: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

Suddi Udaya

ಲೋಕಸಭಾ ಚುನಾವಣೆ ದಿನಾಂಕ ಪ್ರಕಟ: ಇಂದಿನಿಂದ ನೀತಿ ಸಂಹಿತೆ ಜಾರಿ: ದ.ಕ. ಲೋಕಸಭಾ ಕ್ಷೇತ್ರದಲ್ಲಿ ಎ. 26ರಂದು ಮತದಾನ

Suddi Udaya
error: Content is protected !!