23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಶಿಲ: ಶಿವಕೀರ್ತಿ ನಿಲಯದಲ್ಲಿ‌ “ಹನುಮ‌ ಜಯಂತಿ” ಆಚರಣೆ

ಶಿಶಿಲ : ರಾಮ ಹನುಮ ಈ ಭೂಮಿಯಲ್ಲಿ ಚಿರಕಾಲ ಇದ್ದಾರೆ. ಎಲ್ಲಿ ಭಕ್ತಿಯಿಂದ ಭಜಿಸುವವರಿರುತ್ತಾರೊ ಅಲ್ಲಿ ರಾಮ ಹನುಮನಿರುತ್ತಾರೆ. ಭಜನೆ ಸಂಸ್ಕಾರ ಬೆಳೆಸುತ್ತದೆ. ಅಳುಕನ್ನು ದೂರ ಮಾಡುತ್ತದೆ. ನಮ್ಮ ಧರ್ಮ ನಂಬಿಕೆ ಇರುವಲ್ಲಿ ಹನುಮ ರಾಮನಿರುತ್ತಾರೆ. ನಾವು ಇರುವಲ್ಲಿಯವರೆಗೆ ಅವರೂ ಇರುತ್ತಾರೆ. ಅವರು ಇರುವಲ್ಲಿಯವರೆಗೆ ನಾವೂ ಇರುತ್ತೆವೆ. ಎಂದು ಸಾಹಿತಿ, ಬರಹಗಾರ, ನಿವೃತ್ತ ಪ್ರಾಂಶುಪಾಲರಾದ ಉಂಡೆಮನೆ ವಿಶ್ವೇಶ್ವರ ಭಟ್ ತಿಳಿಸಿದರು.


ಅವರು ಶಿಶಿಲ ಶಿವಕೀರ್ತಿ ನಿಲಯದಲ್ಲಿ‌ ನಡೆದ ” ಹನುಮ‌ ಜಯಂತಿ ” ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ್ದರು.
ಕಾರ್ಯಕ್ರಮವನ್ನು ಅರಿಕೆಗುಡ್ದೆ ದೇವಾಲಯದ ಪ್ರಕಾಶ್ ಪಿಲಿಕಬೆ ಉದ್ಘಾಟನೆ ಮಾಡಿ ಹನೂಮಂತ ರಾಮಾಯಣದ ರತ್ನ, ಭಕ್ತಿಗೆ ಮತ್ತು ಆದರ್ಶಕ್ಕೆ ಹನುಮ ನಮಗೆಲ್ಲಾ ಮಾದರಿ . ಹನುಮನ ಭಜಿಸಿದವರಿಗೆ ಎಲ್ಲಾ ಪುಣ್ಯ ಕಾರ್ಯಗಳೂ ಜೀವನದಲ್ಲಿ ಲಭಿಸಲಿ ಎಂದು ಶುಭ ಹಾರೈಸಿದರು.


ಕಾರ್ಯಕ್ರಮದಲ್ಲಿ ವಿವಿಧ ಭಜನಾ ಮಂಡಳಿಯಿಂದ ಕುಣಿತ ಭಜನೆ, ಭಜನಾ ಪಟುಗಳಿಗೆ ಅಭಿನಂದನೆ, ರಾಮಾಯಣ ಹಕ್ಕಿ ನೋಟ ಪುಸ್ತಕ ವಿತರಣೆ ಮುಂತಾದ ಕಾರ್ಯಕ್ರಮ ಜರಗಿತ್ತು.
ಭಜನಾ ಕಾರ್ಯಕ್ರಮವನ್ನು ಸುಂದರ ಬಿಳಿನೆಲೆ ಮತ್ತು ತಂಡದವರು ನಿರ್ವಹಿಸಿದ್ದರು.
ಕಾರ್ಯಕ್ರಮದಲ್ಲಿ ರಾಘವೇಂದ್ರ ಕಿಗ್ಗ, ಉದಯಶಂಕರ ಅರಸಿನಮಕ್ಕಿ, ಪುತ್ತೂರು ರವೀಂದ್ರ ಕುದ್ದಣ್ನಾಯ, ಭಾಸ್ಕರ ರಾವ್ ಮುಂಡ್ರುಪ್ಪಾಡಿ , ರವಿ ಕಾಸರಗೋಡು, ವಿಶು ಕುಮಾರ್ ಪೆರೆಡೆಲು, ಪ್ರೇಮಚಂದ್ರ ಪೆರ್ಲ, ಮೋಹನ ನೆಲ್ಲಿತ್ತಾಯ, ಶಿವರಾಮ ನೆಲ್ಲಿತ್ತಾಯ, ಶ್ರೀಪತಿ ಶಿಶಿಲ, ಪ್ರಕಾಶ ನೆಲ್ಲಿತ್ತಾಯ ಮುಂತಾದವರು ಭಾಗವಹಿಸಿದ್ದರು.

Related posts

ತಾಲೂಕು ಮಟ್ಟದ ಚೆಸ್ ಪಂದ್ಯಾಟ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ವಿಶ್ವ ಬೆನ್ನುಹುರಿ ಅಪಘಾತ ದಿನಾಚರಣೆಯ ಪ್ರಯುಕ್ತ:ಸೌತಡ್ಕ ದಿವ್ಯಾಂಗರ ಪುನಶ್ಚೇತನ ಕೇಂದ್ರದಿಂದ ಹತ್ತಿಯಿಂದ ಬತ್ತಿ ಮಾಡುವ ಯಂತ್ರ ವಿತರಣೆ

Suddi Udaya

ಶ್ರೀ ಧ.ಮಂ. ಶಿಕ್ಷಣ ಸಂಸ್ಥೆಯ ನಿವೃತ್ತ ಮುಖ್ಯ ಶಿಕ್ಷಕ ಬಿ. ಸೋಮಶೇಖರ ಶೆಟ್ಟಿ ರವರಿಗೆ ಸ್ನೇಹ ಕೂಟ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಕಳೆದು ಹೋದಂತಹ ಚಿನ್ನದ ಬ್ರೇಸ್ಲೆಟ್ ನ್ನು ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಮಂಜೊಟ್ಟಿಯ ಶ್ರೀಧರ್ ಶೆಟ್ಟಿ

Suddi Udaya

ಬೆದ್ರಬೆಟ್ಟು ಮರಿಯಾoಬಿಕ ಆಂ.ಮಾ. ಶಾಲೆಯಲ್ಲಿ ವಾರ್ಷಿಕ ಕ್ರೀಡೋತ್ಸವ ಸ್ಪಾರ್ಕ್ -2024

Suddi Udaya

ಉಜಿರೆ: ಧ.ಮಂ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!