23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಶಿಲ: ಶಿವಕೀರ್ತಿ ನಿಲಯದಲ್ಲಿ‌ “ಹನುಮ‌ ಜಯಂತಿ” ಆಚರಣೆ

ಶಿಶಿಲ : ರಾಮ ಹನುಮ ಈ ಭೂಮಿಯಲ್ಲಿ ಚಿರಕಾಲ ಇದ್ದಾರೆ. ಎಲ್ಲಿ ಭಕ್ತಿಯಿಂದ ಭಜಿಸುವವರಿರುತ್ತಾರೊ ಅಲ್ಲಿ ರಾಮ ಹನುಮನಿರುತ್ತಾರೆ. ಭಜನೆ ಸಂಸ್ಕಾರ ಬೆಳೆಸುತ್ತದೆ. ಅಳುಕನ್ನು ದೂರ ಮಾಡುತ್ತದೆ. ನಮ್ಮ ಧರ್ಮ ನಂಬಿಕೆ ಇರುವಲ್ಲಿ ಹನುಮ ರಾಮನಿರುತ್ತಾರೆ. ನಾವು ಇರುವಲ್ಲಿಯವರೆಗೆ ಅವರೂ ಇರುತ್ತಾರೆ. ಅವರು ಇರುವಲ್ಲಿಯವರೆಗೆ ನಾವೂ ಇರುತ್ತೆವೆ. ಎಂದು ಸಾಹಿತಿ, ಬರಹಗಾರ, ನಿವೃತ್ತ ಪ್ರಾಂಶುಪಾಲರಾದ ಉಂಡೆಮನೆ ವಿಶ್ವೇಶ್ವರ ಭಟ್ ತಿಳಿಸಿದರು.


ಅವರು ಶಿಶಿಲ ಶಿವಕೀರ್ತಿ ನಿಲಯದಲ್ಲಿ‌ ನಡೆದ ” ಹನುಮ‌ ಜಯಂತಿ ” ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ್ದರು.
ಕಾರ್ಯಕ್ರಮವನ್ನು ಅರಿಕೆಗುಡ್ದೆ ದೇವಾಲಯದ ಪ್ರಕಾಶ್ ಪಿಲಿಕಬೆ ಉದ್ಘಾಟನೆ ಮಾಡಿ ಹನೂಮಂತ ರಾಮಾಯಣದ ರತ್ನ, ಭಕ್ತಿಗೆ ಮತ್ತು ಆದರ್ಶಕ್ಕೆ ಹನುಮ ನಮಗೆಲ್ಲಾ ಮಾದರಿ . ಹನುಮನ ಭಜಿಸಿದವರಿಗೆ ಎಲ್ಲಾ ಪುಣ್ಯ ಕಾರ್ಯಗಳೂ ಜೀವನದಲ್ಲಿ ಲಭಿಸಲಿ ಎಂದು ಶುಭ ಹಾರೈಸಿದರು.


ಕಾರ್ಯಕ್ರಮದಲ್ಲಿ ವಿವಿಧ ಭಜನಾ ಮಂಡಳಿಯಿಂದ ಕುಣಿತ ಭಜನೆ, ಭಜನಾ ಪಟುಗಳಿಗೆ ಅಭಿನಂದನೆ, ರಾಮಾಯಣ ಹಕ್ಕಿ ನೋಟ ಪುಸ್ತಕ ವಿತರಣೆ ಮುಂತಾದ ಕಾರ್ಯಕ್ರಮ ಜರಗಿತ್ತು.
ಭಜನಾ ಕಾರ್ಯಕ್ರಮವನ್ನು ಸುಂದರ ಬಿಳಿನೆಲೆ ಮತ್ತು ತಂಡದವರು ನಿರ್ವಹಿಸಿದ್ದರು.
ಕಾರ್ಯಕ್ರಮದಲ್ಲಿ ರಾಘವೇಂದ್ರ ಕಿಗ್ಗ, ಉದಯಶಂಕರ ಅರಸಿನಮಕ್ಕಿ, ಪುತ್ತೂರು ರವೀಂದ್ರ ಕುದ್ದಣ್ನಾಯ, ಭಾಸ್ಕರ ರಾವ್ ಮುಂಡ್ರುಪ್ಪಾಡಿ , ರವಿ ಕಾಸರಗೋಡು, ವಿಶು ಕುಮಾರ್ ಪೆರೆಡೆಲು, ಪ್ರೇಮಚಂದ್ರ ಪೆರ್ಲ, ಮೋಹನ ನೆಲ್ಲಿತ್ತಾಯ, ಶಿವರಾಮ ನೆಲ್ಲಿತ್ತಾಯ, ಶ್ರೀಪತಿ ಶಿಶಿಲ, ಪ್ರಕಾಶ ನೆಲ್ಲಿತ್ತಾಯ ಮುಂತಾದವರು ಭಾಗವಹಿಸಿದ್ದರು.

Related posts

ಬಿಎಂಎಸ್ ರಿಕ್ಷಾ ಚಾಲಕರ ಸಂಘ ಕ್ಷೇಮ ನಿಧಿ ಯೋಜನೆಯ 31ನೇ ಸಹಾಯಧನ ಹಸ್ತಾಂತರ

Suddi Udaya

ಮುಂಡಾಜೆ: ಕಾಯರ್ತೋಡಿಯಲ್ಲಿ ಬೃಹತ್ ಗಾತ್ರದ ಕಾಳಿಂಗ ಸರ್ಪ ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಧರ್ಮಸ್ಥಳದ ಸ್ನೇಕ್ ಪ್ರಕಾಶ್

Suddi Udaya

ಪ್ರಸಿದ್ದ ಪುಣ್ಯಕ್ಷೇತ್ರ ಶಿರ್ಡಿ ಸಾಯಿಬಾಬಾ ಕ್ಷೇತ್ರಕ್ಕೆ ತೀರ್ಥಯಾತ್ರೆ ಕೈಗೊಂಡ ಬೆಳ್ತಂಗಡಿಯ ನೂರಾರು ಭಕ್ತರು

Suddi Udaya

ಕಿಲ್ಲೂರಿನಲ್ಲಿ ಗ್ರಾಮೀಣ ಆಟಗಳ ಸಂಗಮ

Suddi Udaya

ಲಾಯಿಲ ಗ್ರಾ.ಪಂ. ಸದಸ್ಯ ಮಹೇಶ್ ಕುಲಾಲ್ ರವರ ಮನೆಗೆ ವಿ.ಪ. ಸದಸ್ಯ ಕಿಶೋರ್ ಕುಮಾರ್ ಭೇಟಿ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ : 3781 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya
error: Content is protected !!