July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಖಾಸಗಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಯುವತಿಗೆ ಸಹಪ್ರಯಾಣಿಕನಿಂದ ಲೈಂಗಿಕ ಕಿರುಕುಳ: ಆರೋಪಿ ಬೆಳ್ತಂಗಡಿ ಮೂಲದ ಅಝೀಮ್ ಬಂಧನ

ಬೆಳ್ತಂಗಡಿ: ಬೆಂಗಳೂರಿನಿಂದ ಮಂಗಳೂರಿಗೆ ಪ್ರಯಾಣಿಸುತ್ತಿದ್ದ ಯುವತಿಯೊಂದಿಗೆ ಸಹಪ್ರಯಾಣಿಕನೋರ್ವ ಅನುಚಿತವಾಗಿ ವರ್ತಿಸಿದ ಘಟನೆ ಎ.23ರಂದು ನಡೆದಿದೆ.

ಮೂಲತಃ ಬಂಟ್ವಾಳ ತಾಲೂಕಿನ ನಿವಾಸಿಯಾಗಿರುವ ವಿದ್ಯಾರ್ಥಿನಿ ಬೆಂಗಳೂರಿನಲ್ಲಿ ಫ್ಯಾಶನ್ ಡಿಸೈನರ್ ಕಲಿಯುತ್ತಿದ್ದು ಮಂಗಳವಾರ ರಾತ್ರಿ ಖಾಸಗಿ ಬಸ್ಸಿನಲ್ಲಿ ಊರಿಗೆ ಪ್ರಯಾಣಿಸಿದ್ದರು. ಬಸ್‌ ಸಕಲೇಶಪುರ ಕಳೆದು ಮುಂದಕ್ಕೆ ಸಾಗುತ್ತಿದ್ದಂತೆಯೇ ಮಲಗಿದ್ದ ವಿದ್ಯಾರ್ಥಿನಿಯ ಮೈಮೇಲೆ ಸಹಪ್ರಯಾಣಿಕ ಕೈ ಮಾಡಿರುವುದು ಕಂಡು ಬಂತು. ಬಳಿಕ ಮತ್ತೊಮ್ಮೆ ಇದೇ ಯತ್ನ ನಡೆದಾಗ ಕೃತ್ಯವನ್ನು ಬಸ್ಸಿನ ಚಾಲಕನ ಗಮನಕ್ಕೆ ತಂದರು. ಆದರೆ ಚಾಲಕನಿಂದ ಯಾವುದೇ ಸ್ಪಂದನೆ ದೊರೆಯದಿದ್ದಾಗ, ಬಸ್ಸಿನಲ್ಲಿದ್ದ ಕೆಲವು ಸಹ ಪ್ರಯಾಣಿಕರು ನೆರವಿಗೆ ಧಾವಿಸಿ ಆತನನ್ನು ವಿಚಾರಿಸಿದಾಗ ಬೆಳ್ತಂಗಡಿಯ ಲಾಯಿಲ ಗ್ರಾಮದ ಮಹಮ್ಮದ್ ಅಝೀಮ್ ಎಂದು ತಿಳಿಸಿದ್ದ. ಮುಂದಕ್ಕೆ ದಾರಿ ಮಧ್ಯೆ ಸಿಗುವ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸುವ ಎಂದು ಆಕೆ ಹೇಳಿದ ಬಳಿಕ ಆರೋಪಿ ಬಸ್ಸಿನ ಕಿಟಕಿಯಿಂದ ಹೊರಗೆ ಹಾರಿ ಪರಾರಿಯಾಗಿದ್ದಾನೆಂದು ದೂರಿನಲ್ಲಿ ತಿಳಿಸಲಾಗಿದೆ.

ಪ್ರಕರಣವನ್ನು ದಾಖಲಿಸಿಕೊಂಡಿರುವ ಪೊಲೀಸರು ಲಭ್ಯ ಮಾಹಿತಿಗಳನ್ನಾಧರಿಸಿ ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

Related posts

ಶ್ರೀ.ಧ.ಮಂ. ಆಂಗ್ಲ ಮಾಧ್ಯಮ ಶಾಲೆ ಸಿಬಿಎಸ್ಸಿ ಉಜಿರೆಗೆ ಎಸ್.ಎಸ್.ಎಲ್.ಸಿ ಯಲ್ಲಿ ಶೇ. 100 ಫಲಿತಾಂಶ

Suddi Udaya

ಹೊಸಂಗಡಿ ಫ್ರೆಂಡ್ಸ್ ಕ್ಲಬ್ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

‘ಸರ್ಕಾರದ ನಡೆ ಕಾರ್ಯಕರ್ತರ ಕಡೆ’ ಕಾಂಗ್ರೆಸ್ ಸಮಾವೇಶದ ಬಗ್ಗೆ ಮಚ್ಚಿನ ಕಾಂಗ್ರೆಸ್ ಗ್ರಾಮ ಸಮಿತಿ ಸಭೆ

Suddi Udaya

ಗುರುವಾಯನಕೆರೆ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ, ಶ್ರೀ ಪಾಂಡುರಂಗ ಶಾಖೆಯ ವಾರ್ಷಿಕೋತ್ಸವ ವೈಭವ

Suddi Udaya

ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಕಟ್ಟಡಕ್ಕೆ ಶಿಲಾನ್ಯಾಸ

Suddi Udaya

ಬೆಳ್ತಂಗಡಿ ವಿಮೆನ್ ಇಂಡಿಯಾ ಮೂವ್ಮೆಂಟ್ ವಿಧಾನ ಸಭಾ ಕ್ಷೇತ್ರ ಸಮಿತಿಯಿಂದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

Suddi Udaya
error: Content is protected !!