September 6, 2026
ಚುನಾವಣೆ

ಚಾರ್ಮಾಡಿ ಮತಗಟ್ಟೆಗೆ ಆಗಮಿಸಿದ ಅಧಿಕಾರಿಗಳಿಗೆ ಪೂರ್ಣಕುಂಭದ ಸ್ವಾಗತ

ಚಾರ್ಮಾಡಿ: ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ನಾಳೆ ಎ.೨೬ರಂದು ನಡೆಯಲಿರುವ ಮತದಾನಕ್ಕಾಗಿ ಚಾರ್ಮಾಡಿ ಮಾದರಿ ಮತಗಟ್ಟೆ ೨೪ ರಾಜೀವ ಗಾಂಧಿ ಸೇವಾ ಕೇಂದ್ರದ ಮತಗಟ್ಟೆಗೆ ಇಂದು ಆಗಮಿಸಿದ ಮತಗಟ್ಟೆ ಅಧಿಕಾರಿಗಳನ್ನು ಬಿ.ಎಲ್.ಒ ಮತ್ತು ಪಂಚಾಯತು ಸಿಬ್ಬಂದಿಗಳು ತುಳುನಾಡ ಸಾಂಪ್ರಾದಾಯದಂತೆ ಪೂರ್ಣಕುಂಬದೊಂದಿಗೆ ಸ್ವಾಗತಿಸಿದರು.

ಮತಗಟ್ಟೆಯಲ್ಲಿ ಯಶಸ್ವಿಯಾಗಿ ಮತದಾನ ನಡೆಯಲಿ ಎಂದು ಹಾರೈಕೆಯೊಂದಿಗೆ, ಮತಗಟ್ಟೆಗೆ ಅಧಿಕಾರಿ ಹಾಗೂ ಸಿಬ್ಬಂದಿಗಳು ಆಗಮಿಸಿದಾಗ ಮತಗಟ್ಟೆಯಲ್ಲಿ ದೀಪಬೆಳಗಿಸಿ ಬಳಿಕ ಕಳಸೆಯಲ್ಲಿ ತೆಂಗಿನ ಹಿಂಗಾರ ಅರಳಿಸಿ

ಸ್ವಾಗತಿಸಲಾಯಿತು. ಬೆಳ್ತಂಗಡಿ ತಾಲೂಕಿನಲ್ಲಿ ಚುನಾವಣೆಗೆ ಮತಗಟ್ಟೆಗೆ ಆಗಮಿಸುವ ಅಧಿಕಾರಿಗಳಿಗೆ ಈ ರೀತಿಯ ಸ್ವಾಗತ ದೊರೆತಿರುವುದು ಇದು ಪ್ರಥಮವಾಗಿದೆ. ಇದನ್ನು ಚಾರ್ಮಾಡಿಯ ಬಿಎಲ್‌ಒ ಮತ್ತು ಪಂಚಾಯತು ಸಿಬ್ಬಂದಿಗಳು ಮಾಡಿ ಎಲ್ಲರಿಗೂ ಮಾದರಿಯಾಗಿದ್ದಾರೆ.

Related posts

ಇಂದಿನಿಂದ ದ.ಕ ಜಿಲ್ಲೆಯಲ್ಲಿ ವಿಧಾನಸಭೆ ಚುನಾವಣೆಗೆ ನಾಮಪತ್ರಗಳ ಸ್ವೀಕಾರ ಆರಂಭ: ಜಿಲ್ಲಾಧಿಕಾರಿ

Suddi Udaya

ಲಾಯಿಲ ಗ್ರಾ.ಪಂ. ಅಧ್ಯಕ್ಷರಾಗಿ ಜಯಂತಿ ಎಂ.ಕೆ. ಉಪಾಧ್ಯಕ್ಷರಾಗಿ ಸುಗಂಧಿ ಜಗನ್ನಾಥ್ ಆಯ್ಕೆ

Suddi Udaya

ಮಡಂತ್ಯಾರು ಸಹಕಾರಿ ಸಂಘದ ಚುನಾವಣೆ: ಹೈಕೋರ್ಟು ತೀರ್ಪು ಪ್ರಕಟ ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ನಿರ್ದೇಶಕ ಸ್ಥಾನ 7 ರಿಂದ 9 ಕ್ಕೆ ಏರಿಕೆ

Suddi Udaya

ಚಾರ್ಮಾಡಿ ಗ್ರಾ.ಪಂ. ಅಧ್ಯಕ್ಷರಾಗಿ ಶಾರದಾ ಎ., ಉಪಾಧ್ಯಕ್ಷರಾಗಿ ನೀಲು

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ :ಹನ್ನೆರಡನೇ ಸುತ್ತಿನಲ್ಲಿ 11360 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಮೇ 5: ‘ನನ್ನ ಬೂತ್ ನನ್ನ ಜವಾಬ್ದಾರಿ’ ಎಂಬ ಧ್ಯೇಯದೊಂದಿಗೆ ಪ್ರಚಾರ ಕಾರ್ಯ ಮಾಡುವಂತೆ ಕರೆ ನೀಡಿದ ಮಾಜಿ ಶಾಸಕ ವಸಂತ ಬಂಗೇರ

Suddi Udaya
error: Content is protected !!