September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಖಾಸಗಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಯುವತಿಗೆ ಸಹಪ್ರಯಾಣಿಕನಿಂದ ಲೈಂಗಿಕ ಕಿರುಕುಳ: ಆರೋಪಿ ಬೆಳ್ತಂಗಡಿ ಮೂಲದ ಅಝೀಮ್ ಬಂಧನ

ಬೆಳ್ತಂಗಡಿ: ಬೆಂಗಳೂರಿನಿಂದ ಮಂಗಳೂರಿಗೆ ಪ್ರಯಾಣಿಸುತ್ತಿದ್ದ ಯುವತಿಯೊಂದಿಗೆ ಸಹಪ್ರಯಾಣಿಕನೋರ್ವ ಅನುಚಿತವಾಗಿ ವರ್ತಿಸಿದ ಘಟನೆ ಎ.23ರಂದು ನಡೆದಿದೆ.

ಮೂಲತಃ ಬಂಟ್ವಾಳ ತಾಲೂಕಿನ ನಿವಾಸಿಯಾಗಿರುವ ವಿದ್ಯಾರ್ಥಿನಿ ಬೆಂಗಳೂರಿನಲ್ಲಿ ಫ್ಯಾಶನ್ ಡಿಸೈನರ್ ಕಲಿಯುತ್ತಿದ್ದು ಮಂಗಳವಾರ ರಾತ್ರಿ ಖಾಸಗಿ ಬಸ್ಸಿನಲ್ಲಿ ಊರಿಗೆ ಪ್ರಯಾಣಿಸಿದ್ದರು. ಬಸ್‌ ಸಕಲೇಶಪುರ ಕಳೆದು ಮುಂದಕ್ಕೆ ಸಾಗುತ್ತಿದ್ದಂತೆಯೇ ಮಲಗಿದ್ದ ವಿದ್ಯಾರ್ಥಿನಿಯ ಮೈಮೇಲೆ ಸಹಪ್ರಯಾಣಿಕ ಕೈ ಮಾಡಿರುವುದು ಕಂಡು ಬಂತು. ಬಳಿಕ ಮತ್ತೊಮ್ಮೆ ಇದೇ ಯತ್ನ ನಡೆದಾಗ ಕೃತ್ಯವನ್ನು ಬಸ್ಸಿನ ಚಾಲಕನ ಗಮನಕ್ಕೆ ತಂದರು. ಆದರೆ ಚಾಲಕನಿಂದ ಯಾವುದೇ ಸ್ಪಂದನೆ ದೊರೆಯದಿದ್ದಾಗ, ಬಸ್ಸಿನಲ್ಲಿದ್ದ ಕೆಲವು ಸಹ ಪ್ರಯಾಣಿಕರು ನೆರವಿಗೆ ಧಾವಿಸಿ ಆತನನ್ನು ವಿಚಾರಿಸಿದಾಗ ಬೆಳ್ತಂಗಡಿಯ ಲಾಯಿಲ ಗ್ರಾಮದ ಮಹಮ್ಮದ್ ಅಝೀಮ್ ಎಂದು ತಿಳಿಸಿದ್ದ. ಮುಂದಕ್ಕೆ ದಾರಿ ಮಧ್ಯೆ ಸಿಗುವ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸುವ ಎಂದು ಆಕೆ ಹೇಳಿದ ಬಳಿಕ ಆರೋಪಿ ಬಸ್ಸಿನ ಕಿಟಕಿಯಿಂದ ಹೊರಗೆ ಹಾರಿ ಪರಾರಿಯಾಗಿದ್ದಾನೆಂದು ದೂರಿನಲ್ಲಿ ತಿಳಿಸಲಾಗಿದೆ.

ಪ್ರಕರಣವನ್ನು ದಾಖಲಿಸಿಕೊಂಡಿರುವ ಪೊಲೀಸರು ಲಭ್ಯ ಮಾಹಿತಿಗಳನ್ನಾಧರಿಸಿ ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

Related posts

ನೇಣು ಬಿಗಿದು ವಿದ್ಯಾರ್ಥಿ ಆತ್ಮಹತ್ಯೆ

Suddi Udaya

ಕರಿಮಣಿ ಸರ ಸಹಿತ ಅಗತ್ಯ ವಸ್ತುಗಳು ಕಳೆದು ಹೋಗಿದೆ: ಸಿಕ್ಕಿದವರು ಸಂಪರ್ಕಿಸುವಂತೆ ಮನವಿ

Suddi Udaya

ಗುರುವಾಯನಕೆರೆ: ಶ್ರೀ ಶಿವಂ ಟೆಕ್ಸ್‌ಟೈಲ್ಸ್ ಮತ್ತು ರೆಡಿಮೇಡ್ಸ್‌ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಸ್ಪೆಷಲ್ ಡಿಸ್ಕೌಂಟ್ ಆಫರ್

Suddi Udaya

ಪಡ್ಡಂದಡ್ಕ ಮಂಜುಶ್ರಿ ಭಜನಾ ಮಂಡಳಿಯಲ್ಲಿ ಮಹಿಳಾ ದಿನಾಚರಣೆ

Suddi Udaya

ಗುರುವಾಯನಕೆರೆ ಅಯ್ಯಪ್ಪ ದೇವಸ್ಥಾನದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಕೊಕ್ಕಡ: ವಾಮನ ನಾಯ್ಕ ಹೃದಯಾಘಾತದಿಂದ ನಿಧನ

Suddi Udaya
error: Content is protected !!