22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಖಾಸಗಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಯುವತಿಗೆ ಸಹಪ್ರಯಾಣಿಕನಿಂದ ಲೈಂಗಿಕ ಕಿರುಕುಳ: ಆರೋಪಿ ಬೆಳ್ತಂಗಡಿ ಮೂಲದ ಅಝೀಮ್ ಬಂಧನ

ಬೆಳ್ತಂಗಡಿ: ಬೆಂಗಳೂರಿನಿಂದ ಮಂಗಳೂರಿಗೆ ಪ್ರಯಾಣಿಸುತ್ತಿದ್ದ ಯುವತಿಯೊಂದಿಗೆ ಸಹಪ್ರಯಾಣಿಕನೋರ್ವ ಅನುಚಿತವಾಗಿ ವರ್ತಿಸಿದ ಘಟನೆ ಎ.23ರಂದು ನಡೆದಿದೆ.

ಮೂಲತಃ ಬಂಟ್ವಾಳ ತಾಲೂಕಿನ ನಿವಾಸಿಯಾಗಿರುವ ವಿದ್ಯಾರ್ಥಿನಿ ಬೆಂಗಳೂರಿನಲ್ಲಿ ಫ್ಯಾಶನ್ ಡಿಸೈನರ್ ಕಲಿಯುತ್ತಿದ್ದು ಮಂಗಳವಾರ ರಾತ್ರಿ ಖಾಸಗಿ ಬಸ್ಸಿನಲ್ಲಿ ಊರಿಗೆ ಪ್ರಯಾಣಿಸಿದ್ದರು. ಬಸ್‌ ಸಕಲೇಶಪುರ ಕಳೆದು ಮುಂದಕ್ಕೆ ಸಾಗುತ್ತಿದ್ದಂತೆಯೇ ಮಲಗಿದ್ದ ವಿದ್ಯಾರ್ಥಿನಿಯ ಮೈಮೇಲೆ ಸಹಪ್ರಯಾಣಿಕ ಕೈ ಮಾಡಿರುವುದು ಕಂಡು ಬಂತು. ಬಳಿಕ ಮತ್ತೊಮ್ಮೆ ಇದೇ ಯತ್ನ ನಡೆದಾಗ ಕೃತ್ಯವನ್ನು ಬಸ್ಸಿನ ಚಾಲಕನ ಗಮನಕ್ಕೆ ತಂದರು. ಆದರೆ ಚಾಲಕನಿಂದ ಯಾವುದೇ ಸ್ಪಂದನೆ ದೊರೆಯದಿದ್ದಾಗ, ಬಸ್ಸಿನಲ್ಲಿದ್ದ ಕೆಲವು ಸಹ ಪ್ರಯಾಣಿಕರು ನೆರವಿಗೆ ಧಾವಿಸಿ ಆತನನ್ನು ವಿಚಾರಿಸಿದಾಗ ಬೆಳ್ತಂಗಡಿಯ ಲಾಯಿಲ ಗ್ರಾಮದ ಮಹಮ್ಮದ್ ಅಝೀಮ್ ಎಂದು ತಿಳಿಸಿದ್ದ. ಮುಂದಕ್ಕೆ ದಾರಿ ಮಧ್ಯೆ ಸಿಗುವ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸುವ ಎಂದು ಆಕೆ ಹೇಳಿದ ಬಳಿಕ ಆರೋಪಿ ಬಸ್ಸಿನ ಕಿಟಕಿಯಿಂದ ಹೊರಗೆ ಹಾರಿ ಪರಾರಿಯಾಗಿದ್ದಾನೆಂದು ದೂರಿನಲ್ಲಿ ತಿಳಿಸಲಾಗಿದೆ.

ಪ್ರಕರಣವನ್ನು ದಾಖಲಿಸಿಕೊಂಡಿರುವ ಪೊಲೀಸರು ಲಭ್ಯ ಮಾಹಿತಿಗಳನ್ನಾಧರಿಸಿ ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

Related posts

ಮಚ್ಚಿನದಲ್ಲಿ ಪಿಕಪ್ ಹಾಗೂ ದ್ವಿಚಕ್ರ ವಾಹನದ ನಡುವೆ ಭೀಕರ ಅಪಘಾತ ದ್ವಿಚಕ್ರ ಸವಾರರಿಬ್ಬರು ಮೃತ್ಯು

Suddi Udaya

ಬೆಳ್ತಂಗಡಿ ತಾಲೂಕು ಪರಿಶಿಷ್ಟ ವರ್ಗದ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ಸಾಧಕರಿಗೆ ಸನ್ಮಾನ

Suddi Udaya

ಓಡಿಲ್ನಾಳ ಸ. ಉ ಪ್ರಾ. ಶಾಲಾ ಸಂಸತ್ತು ಚುನಾವಣೆ

Suddi Udaya

ನಾರಾವಿ ಬ್ರಹ್ಮ ಶ್ರೀ ನಾರಾಯಣ ಗುರು ಸೇವಾ ಸಂಘ ಹಾಗೂ ಬೆಸ್ಟ್ ಫೌಂಡೇಶನ್ ಜಂಟಿ ಆಶ್ರಯದಲ್ಲಿ ಉಚಿತ ಪುಸ್ತಕ ವಿತರಣೆ

Suddi Udaya

ಮುಕ್ಕ ಶ್ರೀನಿವಾಸ್ ಯೂನಿವರ್ಸಿಟಿ ಇನ್‌ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯಲ್ಲಿ ‘ಟೆಕ್ ಯುವ – 25’

Suddi Udaya

ಜು.3: ನಾರಾವಿಯಲ್ಲಿ ಗಾಯತ್ರಿ ಮೆಡಿಕಲ್ಸ್ ಶುಭಾರಂಭ ; ಎಲ್ಲ ರೀತಿಯ ಔಷಧಿಗಳು ಒಂದೇ ಸೂರಿನಡಿ ಲಭ್ಯ

Suddi Udaya
error: Content is protected !!