23.5 C
ಪುತ್ತೂರು, ಬೆಳ್ತಂಗಡಿ
March 7, 2026
ಚುನಾವಣೆ

ಚಾರ್ಮಾಡಿ ಮತಗಟ್ಟೆಗೆ ಆಗಮಿಸಿದ ಅಧಿಕಾರಿಗಳಿಗೆ ಪೂರ್ಣಕುಂಭದ ಸ್ವಾಗತ

ಚಾರ್ಮಾಡಿ: ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ನಾಳೆ ಎ.೨೬ರಂದು ನಡೆಯಲಿರುವ ಮತದಾನಕ್ಕಾಗಿ ಚಾರ್ಮಾಡಿ ಮಾದರಿ ಮತಗಟ್ಟೆ ೨೪ ರಾಜೀವ ಗಾಂಧಿ ಸೇವಾ ಕೇಂದ್ರದ ಮತಗಟ್ಟೆಗೆ ಇಂದು ಆಗಮಿಸಿದ ಮತಗಟ್ಟೆ ಅಧಿಕಾರಿಗಳನ್ನು ಬಿ.ಎಲ್.ಒ ಮತ್ತು ಪಂಚಾಯತು ಸಿಬ್ಬಂದಿಗಳು ತುಳುನಾಡ ಸಾಂಪ್ರಾದಾಯದಂತೆ ಪೂರ್ಣಕುಂಬದೊಂದಿಗೆ ಸ್ವಾಗತಿಸಿದರು.

ಮತಗಟ್ಟೆಯಲ್ಲಿ ಯಶಸ್ವಿಯಾಗಿ ಮತದಾನ ನಡೆಯಲಿ ಎಂದು ಹಾರೈಕೆಯೊಂದಿಗೆ, ಮತಗಟ್ಟೆಗೆ ಅಧಿಕಾರಿ ಹಾಗೂ ಸಿಬ್ಬಂದಿಗಳು ಆಗಮಿಸಿದಾಗ ಮತಗಟ್ಟೆಯಲ್ಲಿ ದೀಪಬೆಳಗಿಸಿ ಬಳಿಕ ಕಳಸೆಯಲ್ಲಿ ತೆಂಗಿನ ಹಿಂಗಾರ ಅರಳಿಸಿ

ಸ್ವಾಗತಿಸಲಾಯಿತು. ಬೆಳ್ತಂಗಡಿ ತಾಲೂಕಿನಲ್ಲಿ ಚುನಾವಣೆಗೆ ಮತಗಟ್ಟೆಗೆ ಆಗಮಿಸುವ ಅಧಿಕಾರಿಗಳಿಗೆ ಈ ರೀತಿಯ ಸ್ವಾಗತ ದೊರೆತಿರುವುದು ಇದು ಪ್ರಥಮವಾಗಿದೆ. ಇದನ್ನು ಚಾರ್ಮಾಡಿಯ ಬಿಎಲ್‌ಒ ಮತ್ತು ಪಂಚಾಯತು ಸಿಬ್ಬಂದಿಗಳು ಮಾಡಿ ಎಲ್ಲರಿಗೂ ಮಾದರಿಯಾಗಿದ್ದಾರೆ.

Related posts

ಬೆಳ್ತಂಗಡಿ: ವಿಧಾನ ಪರಿಷತ್ ಉಪಚುನಾವಣೆ, ಬೆಳ್ತಂಗಡಿಯಲ್ಲಿ 676 ಮತದಾರರು ಬೆಳ್ತಂಗಡಿಯ 49 ಮತಗಟ್ಟೆಯ 100 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಪತ್ರಿಕಾಗೋಷ್ಠಿಯಲ್ಲಿ ತಹಿಶೀಲ್ದಾರ್ ಪೃಥ್ವಿ ಸಾನಿಕಾಮ್ ಮಾಹಿತಿ

Suddi Udaya

ಕೊಕ್ಕಡ: ಸರಕಾರಿ ಹಿ.ಪ್ರಾ. ಶಾಲೆಯಲ್ಲಿ ಬಿರುಸಿನ ಮತದಾನ

Suddi Udaya

ಲಾಯಿಲ ಗ್ರಾ.ಪಂ. ಅಧ್ಯಕ್ಷರಾಗಿ ಜಯಂತಿ ಎಂ.ಕೆ. ಉಪಾಧ್ಯಕ್ಷರಾಗಿ ಸುಗಂಧಿ ಜಗನ್ನಾಥ್ ಆಯ್ಕೆ

Suddi Udaya

ಮದ್ದಡ್ಕ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಅಭ್ಯರ್ಥಿಗಳ ಅವಿರೋಧ ಆಯ್ಕೆ

Suddi Udaya

ಮೇ. 6: ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ರವರ ಚುನಾವಣಾ ಪ್ರಚಾರದ ಅಂಗವಾಗಿ ಬೃಹತ್ ರೋಡ್ ಶೋ

Suddi Udaya

ಮದರಂಗಿ ಶಾಸ್ತ್ರದ ನಡುವೆ ಮತಚಲಾಯಿಸಿದ ಮದುಮಗಳು: ಮಲವಂತಿಗೆ ಗ್ರಾಮದ ಮೋಹಿನಿಯವರು ಮತಚಲಾಯಿಸಿ ಎಲ್ಲರ ಗಮನ ಸೆಳೆದರು

Suddi Udaya
error: Content is protected !!