25.5 C
ಪುತ್ತೂರು, ಬೆಳ್ತಂಗಡಿ
June 8, 2026
ಚುನಾವಣೆ

ಚಾರ್ಮಾಡಿ ಮತಗಟ್ಟೆಗೆ ಆಗಮಿಸಿದ ಅಧಿಕಾರಿಗಳಿಗೆ ಪೂರ್ಣಕುಂಭದ ಸ್ವಾಗತ

ಚಾರ್ಮಾಡಿ: ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ನಾಳೆ ಎ.೨೬ರಂದು ನಡೆಯಲಿರುವ ಮತದಾನಕ್ಕಾಗಿ ಚಾರ್ಮಾಡಿ ಮಾದರಿ ಮತಗಟ್ಟೆ ೨೪ ರಾಜೀವ ಗಾಂಧಿ ಸೇವಾ ಕೇಂದ್ರದ ಮತಗಟ್ಟೆಗೆ ಇಂದು ಆಗಮಿಸಿದ ಮತಗಟ್ಟೆ ಅಧಿಕಾರಿಗಳನ್ನು ಬಿ.ಎಲ್.ಒ ಮತ್ತು ಪಂಚಾಯತು ಸಿಬ್ಬಂದಿಗಳು ತುಳುನಾಡ ಸಾಂಪ್ರಾದಾಯದಂತೆ ಪೂರ್ಣಕುಂಬದೊಂದಿಗೆ ಸ್ವಾಗತಿಸಿದರು.

ಮತಗಟ್ಟೆಯಲ್ಲಿ ಯಶಸ್ವಿಯಾಗಿ ಮತದಾನ ನಡೆಯಲಿ ಎಂದು ಹಾರೈಕೆಯೊಂದಿಗೆ, ಮತಗಟ್ಟೆಗೆ ಅಧಿಕಾರಿ ಹಾಗೂ ಸಿಬ್ಬಂದಿಗಳು ಆಗಮಿಸಿದಾಗ ಮತಗಟ್ಟೆಯಲ್ಲಿ ದೀಪಬೆಳಗಿಸಿ ಬಳಿಕ ಕಳಸೆಯಲ್ಲಿ ತೆಂಗಿನ ಹಿಂಗಾರ ಅರಳಿಸಿ

ಸ್ವಾಗತಿಸಲಾಯಿತು. ಬೆಳ್ತಂಗಡಿ ತಾಲೂಕಿನಲ್ಲಿ ಚುನಾವಣೆಗೆ ಮತಗಟ್ಟೆಗೆ ಆಗಮಿಸುವ ಅಧಿಕಾರಿಗಳಿಗೆ ಈ ರೀತಿಯ ಸ್ವಾಗತ ದೊರೆತಿರುವುದು ಇದು ಪ್ರಥಮವಾಗಿದೆ. ಇದನ್ನು ಚಾರ್ಮಾಡಿಯ ಬಿಎಲ್‌ಒ ಮತ್ತು ಪಂಚಾಯತು ಸಿಬ್ಬಂದಿಗಳು ಮಾಡಿ ಎಲ್ಲರಿಗೂ ಮಾದರಿಯಾಗಿದ್ದಾರೆ.

Related posts

ಶಿಬಾಜೆ: ಕಾಂಗ್ರೆಸ್ ಪ್ರಮುಖರು ಬಿಜೆಪಿಗೆ ಸೇರ್ಪಡೆ

Suddi Udaya

ಕನ್ಯಾಡಿ 32 ಮತ್ತು 33 ಬೂತ್‌ಗೆ ಕೆಪಿಸಿಸಿ ಪ್ರ. ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಭೇಟಿ

Suddi Udaya

ಬಿಜೆಪಿಯಿಂದ 241 ಬೂತ್‌ಗಳಲ್ಲಿ ನೂರಾರು ಸಂಖ್ಯೆಯ ಕಾರ್ಯಕರ್ತರಿಂದ ಮನೆ ಮನೆ ಪ್ರಚಾರ ಅಭಿಯಾನ

Suddi Udaya

ಕಳೆಂಜ : ಬಿಜೆಪಿ ಕಾರ್ಯಕರ್ತರಿಂದ ಬೈಕ್ ಜಾಥಾ

Suddi Udaya

ಜೂ.16: ಗ್ರಾಮ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷ ಎರಡನೇ ಅವಧಿಗೆ ಮೀಸಲಾತಿ ನಿಗದಿ

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: 12 ಸ್ಥಾನಗಳಲ್ಲೂ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳ ಜಯಭೇರಿ: ನ್ಯಾಯಾಲಯದ ಆದೇಶದಂತೆ ಫಲಿತಾಂಶ ಘೋಷಣೆಗೆ ತಡೆ

Suddi Udaya
error: Content is protected !!