24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ಬಿಸಿಎ ವಿಭಾಗದಿಂದ ಎನಿಗ್ಮಾ- 2024

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಕಾಲೇಜು ಮಡಂತ್ಯಾರು ಬಿಸಿಎ ವಿಭಾಗದಿಂದ ಎನಿಗ್ಮಾ- 2024 ಅನ್ನು ಕಾರ್ಯಕ್ರಮವು ಎ.23 ರಂದು ನಡೆಯಿತು.

ಮುಖ್ಯ ಅತಿಥಿಯಾಗಿ ವಾಣಿ ಪಿಯು ಕಾಲೇಜಿನ ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥರು ಹಾಗೂ ಜೆಸಿಐ ವಲಯ ತರಬೇತುದಾರ ಸುಧೀರ್ ಕೆ.ಎನ್ ರವರು ಕಂಪ್ಯೂಟರ್ ಅಪ್ಲಿಕೇಶನ್ ಪ್ರಪಂಚದ ಹೊಸ ಪ್ರವೃತ್ತಿಗಳ ಕುರಿತು ಮಾತನಾಡಿದರು ಮತ್ತು ಹೊಸ ತಾಂತ್ರಿಕ ಜಗತ್ತನ್ನು ಅನ್ವೇಷಿಸಲು ವಿದ್ಯಾರ್ಥಿಗಳನ್ನು ಪ್ರೇರೇಪಿಸಿದರು.

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನ ಪ್ರಾಂಶುಪಾಲರು ಪ್ರೊ| ಅಲೆಕ್ಸ್ ಐವನ್ ಸಿಕ್ವೇರಾ, ಅವರು ತಮ್ಮ ಭಾಷಣದಲ್ಲಿ ನಾವೀನ್ಯತೆಯ ಮಹತ್ವವನ್ನು ಎತ್ತಿ ತೋರಿಸಿದರು.

ಕುಮಾರಿ ಸ್ವೀಡಲ್ ರೋಡ್ರಿಗಸ್ ಉಪನ್ಯಾಸಕಿ ಕಾರ್ಯಕ್ರಮದ ಪ್ರಾಮುಖ್ಯತೆಯನ್ನು ತಿಳಿಸಿದರು.
ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ಎನಿಗ್ಮಾ – 2024 ಗೆ ನೀಡಿದ ಕೊಡುಗೆಗಳಿಗಾಗಿ ಮುಖ್ಯ ಅತಿಥಿಗಳಿಂದ ಗೌರವಿಸಲಾಯಿತು.

ವೇದಿಕೆಯಲ್ಲಿ ಬಿಸಿಎ ವಿಭಾಗದ ಮುಖ್ಯಸ್ಥರು ಜನಾರ್ಧನ ರಾವ್ ಡಿ, IT-FORUMನ ಸಂಯೋಜಕಿ ಉಪನ್ಯಾಸಕಿ ಕುಮಾರಿ ವಿಯೋಲ ಸೆರಾವೊ, ವಿದ್ಯಾರ್ಥಿ ಸಂಯೋಜಕ ಯುನಿತ್ ಕೆ ಉಪಸ್ಥಿತರಿದ್ದರು.

ಅಂತಿಮ ವರ್ಷದ ಬಿಸಿಎ ದೀಕ್ಷಿತಾ ಮತ್ತು ತಂಡದವರಿಂದ ಪ್ರಾರ್ಥಿಸಿ, ಕುಮಾರಿ ವಿಯೋಲ ಸೆರಾವೊ ಸ್ವಾಗತಿಸಿದರು. ಕಾರ್ಯಕ್ರಮವನ್ನು ಬಿಸಿಎ ಅಂತಿಮ ವರ್ಷದ ವಿದ್ಯಾರ್ಥಿಗಳಾದ ಹೀಬಾ ಮತ್ತು ಸೃಜನ್ ನಿರ್ವಹಿಸಿದರು. ರಾಬಿನ್ ಆಗಸ್ಟಿನ್ ಅವರು ಧನ್ಯವಾದವಿತ್ತರು.

ಎನಿಗ್ಮಾ 2024 ಸೇಕ್ರೆಡ್ ಹಾರ್ಟ್ ಕಾಲೇಜಿನ ನಾವೀನ್ಯತೆ ಮತ್ತು ಸಹಯೋಗಕ್ಕೆ ಸಮರ್ಪಣೆಯನ್ನು ಪ್ರದರ್ಶಿಸಿತು, ಇದು ಎಲ್ಲರ ಮೇಲೆ ಶಾಶ್ವತವಾದ ಪರಿಣಾಮವನ್ನು ಬೀರಿದೆ.

Related posts

ಮದ್ದಡ್ಕತಾಯಿ ಪಿಲಿ ಚಾಮುಂಡಿ ದೈವದ ವರ್ಷವಾದಿ ನೇವೋತ್ಸವ

Suddi Udaya

ಅರಸಿನಮಕ್ಕಿ: ಅರಿಕೆಗುಡ್ಡೆ ವನದುರ್ಗ ದೇವಿ ಕ್ಷೇತ್ರದಲ್ಲಿ ನವರಾತ್ರಿ ಪೂರ್ವಭಾವಿ ಸಭೆ

Suddi Udaya

ರಾತ್ರಿ ಬೆಳ್ತಂಗಡಿ ಠಾಣೆಗೆ ಬಂದು ಹೇಳಿಕೆ ನೀಡಿದ ಶಾಸಕ ಹರೀಶ್ ಪೂಂಜ

Suddi Udaya

ಬೆಳಾಲು ನಿವೃತ್ತ ಶಿಕ್ಷಕನ ಬರ್ಬರ ಕೊಲೆ ಪ್ರಕರಣ: ಸ್ಥಳಕ್ಕೆ ಎಸ್ಪಿ ಸೇರಿದಂತೆ ವಿವಿಧ ತಂಡದಿಂದ ತನಿಖೆ

Suddi Udaya

ಪುದುವೆಟ್ಟು : ಸ್ವರಾಜ್ ನೇಣುಬಿಗಿದು ಆತ್ಮಹತ್ಯೆ

Suddi Udaya

ನಾಲ್ಕೂರು: ರಾಮನಗರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಮಾಸಾಚರಣೆ ಕಾರ್ಯಕ್ರಮ

Suddi Udaya
error: Content is protected !!