37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಖಾಸಗಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಯುವತಿಗೆ ಸಹಪ್ರಯಾಣಿಕನಿಂದ ಲೈಂಗಿಕ ಕಿರುಕುಳ: ಆರೋಪಿ ಬೆಳ್ತಂಗಡಿ ಮೂಲದ ಅಝೀಮ್ ಬಂಧನ

ಬೆಳ್ತಂಗಡಿ: ಬೆಂಗಳೂರಿನಿಂದ ಮಂಗಳೂರಿಗೆ ಪ್ರಯಾಣಿಸುತ್ತಿದ್ದ ಯುವತಿಯೊಂದಿಗೆ ಸಹಪ್ರಯಾಣಿಕನೋರ್ವ ಅನುಚಿತವಾಗಿ ವರ್ತಿಸಿದ ಘಟನೆ ಎ.23ರಂದು ನಡೆದಿದೆ.

ಮೂಲತಃ ಬಂಟ್ವಾಳ ತಾಲೂಕಿನ ನಿವಾಸಿಯಾಗಿರುವ ವಿದ್ಯಾರ್ಥಿನಿ ಬೆಂಗಳೂರಿನಲ್ಲಿ ಫ್ಯಾಶನ್ ಡಿಸೈನರ್ ಕಲಿಯುತ್ತಿದ್ದು ಮಂಗಳವಾರ ರಾತ್ರಿ ಖಾಸಗಿ ಬಸ್ಸಿನಲ್ಲಿ ಊರಿಗೆ ಪ್ರಯಾಣಿಸಿದ್ದರು. ಬಸ್‌ ಸಕಲೇಶಪುರ ಕಳೆದು ಮುಂದಕ್ಕೆ ಸಾಗುತ್ತಿದ್ದಂತೆಯೇ ಮಲಗಿದ್ದ ವಿದ್ಯಾರ್ಥಿನಿಯ ಮೈಮೇಲೆ ಸಹಪ್ರಯಾಣಿಕ ಕೈ ಮಾಡಿರುವುದು ಕಂಡು ಬಂತು. ಬಳಿಕ ಮತ್ತೊಮ್ಮೆ ಇದೇ ಯತ್ನ ನಡೆದಾಗ ಕೃತ್ಯವನ್ನು ಬಸ್ಸಿನ ಚಾಲಕನ ಗಮನಕ್ಕೆ ತಂದರು. ಆದರೆ ಚಾಲಕನಿಂದ ಯಾವುದೇ ಸ್ಪಂದನೆ ದೊರೆಯದಿದ್ದಾಗ, ಬಸ್ಸಿನಲ್ಲಿದ್ದ ಕೆಲವು ಸಹ ಪ್ರಯಾಣಿಕರು ನೆರವಿಗೆ ಧಾವಿಸಿ ಆತನನ್ನು ವಿಚಾರಿಸಿದಾಗ ಬೆಳ್ತಂಗಡಿಯ ಲಾಯಿಲ ಗ್ರಾಮದ ಮಹಮ್ಮದ್ ಅಝೀಮ್ ಎಂದು ತಿಳಿಸಿದ್ದ. ಮುಂದಕ್ಕೆ ದಾರಿ ಮಧ್ಯೆ ಸಿಗುವ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸುವ ಎಂದು ಆಕೆ ಹೇಳಿದ ಬಳಿಕ ಆರೋಪಿ ಬಸ್ಸಿನ ಕಿಟಕಿಯಿಂದ ಹೊರಗೆ ಹಾರಿ ಪರಾರಿಯಾಗಿದ್ದಾನೆಂದು ದೂರಿನಲ್ಲಿ ತಿಳಿಸಲಾಗಿದೆ.

ಪ್ರಕರಣವನ್ನು ದಾಖಲಿಸಿಕೊಂಡಿರುವ ಪೊಲೀಸರು ಲಭ್ಯ ಮಾಹಿತಿಗಳನ್ನಾಧರಿಸಿ ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

Related posts

ಲಾಯಿಲ: ವಿಶ್ವಮಟ್ಟದ ಸ್ಥಾನಿಕ ಬ್ರಾಹ್ಮಣರ ಸಮಾವೇಶ

Suddi Udaya

ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ: ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯ ಬಾಲಕರ ತಂಡ ಪ್ರಥಮ ಸ್ಥಾನ

Suddi Udaya

ಕುಕ್ಕೇಡಿ ಗ್ರಾಮ‌ ಪಂಚಾಯತ್ ಗೆ ಸ್ವಚ್ಚ ಸರ್ವೇಕ್ಷಣ ಗ್ರಾಮೀಣ ಪ್ರಶಸ್ತಿ

Suddi Udaya

ತಾಲೂಕು ಮಟ್ಟದ ಕ್ರೀಡಾಕೂಟ : ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಗೆ ಹಲವು ಪ್ರಶಸ್ತಿ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿಯ ಶವ ಪತ್ತೆ

Suddi Udaya

ಬೆಳ್ತಂಗಡಿ ಪಶು ಆಸ್ಪತ್ರೆಯಲ್ಲಿ ಹಸುಗಳಲ್ಲಿ ಹಾಲು ಕರೆಯುವ ಸ್ಪರ್ಧೆ – ಮಾಹಿತಿ ಶಿಬಿರ

Suddi Udaya
error: Content is protected !!