July 23, 2026
ಚುನಾವಣೆ

ಚಾರ್ಮಾಡಿ ಮತಗಟ್ಟೆಗೆ ಆಗಮಿಸಿದ ಅಧಿಕಾರಿಗಳಿಗೆ ಪೂರ್ಣಕುಂಭದ ಸ್ವಾಗತ

ಚಾರ್ಮಾಡಿ: ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ನಾಳೆ ಎ.೨೬ರಂದು ನಡೆಯಲಿರುವ ಮತದಾನಕ್ಕಾಗಿ ಚಾರ್ಮಾಡಿ ಮಾದರಿ ಮತಗಟ್ಟೆ ೨೪ ರಾಜೀವ ಗಾಂಧಿ ಸೇವಾ ಕೇಂದ್ರದ ಮತಗಟ್ಟೆಗೆ ಇಂದು ಆಗಮಿಸಿದ ಮತಗಟ್ಟೆ ಅಧಿಕಾರಿಗಳನ್ನು ಬಿ.ಎಲ್.ಒ ಮತ್ತು ಪಂಚಾಯತು ಸಿಬ್ಬಂದಿಗಳು ತುಳುನಾಡ ಸಾಂಪ್ರಾದಾಯದಂತೆ ಪೂರ್ಣಕುಂಬದೊಂದಿಗೆ ಸ್ವಾಗತಿಸಿದರು.

ಮತಗಟ್ಟೆಯಲ್ಲಿ ಯಶಸ್ವಿಯಾಗಿ ಮತದಾನ ನಡೆಯಲಿ ಎಂದು ಹಾರೈಕೆಯೊಂದಿಗೆ, ಮತಗಟ್ಟೆಗೆ ಅಧಿಕಾರಿ ಹಾಗೂ ಸಿಬ್ಬಂದಿಗಳು ಆಗಮಿಸಿದಾಗ ಮತಗಟ್ಟೆಯಲ್ಲಿ ದೀಪಬೆಳಗಿಸಿ ಬಳಿಕ ಕಳಸೆಯಲ್ಲಿ ತೆಂಗಿನ ಹಿಂಗಾರ ಅರಳಿಸಿ

ಸ್ವಾಗತಿಸಲಾಯಿತು. ಬೆಳ್ತಂಗಡಿ ತಾಲೂಕಿನಲ್ಲಿ ಚುನಾವಣೆಗೆ ಮತಗಟ್ಟೆಗೆ ಆಗಮಿಸುವ ಅಧಿಕಾರಿಗಳಿಗೆ ಈ ರೀತಿಯ ಸ್ವಾಗತ ದೊರೆತಿರುವುದು ಇದು ಪ್ರಥಮವಾಗಿದೆ. ಇದನ್ನು ಚಾರ್ಮಾಡಿಯ ಬಿಎಲ್‌ಒ ಮತ್ತು ಪಂಚಾಯತು ಸಿಬ್ಬಂದಿಗಳು ಮಾಡಿ ಎಲ್ಲರಿಗೂ ಮಾದರಿಯಾಗಿದ್ದಾರೆ.

Related posts

ಬಿಜೆಪಿ ಪಕ್ಷ ತೊರೆದು ಕಾಂಗ್ರೆಸ್ ಪಕ್ಷ ಸೇರಿ ರಕ್ಷಿತ್ ಶಿವರಾಂ ಕೈ ಬಲ ಪಡಿಸಿದ ಮಚ್ಚಿನ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ

Suddi Udaya

ಸುಲ್ಕೇರಿ ಗ್ರಾ.ಪಂ. ಅಧ್ಯಕ್ಷರಾಗಿ ಗಿರಿಜಾ ನಾವರ, ಉಪಾಧ್ಯಕ್ಷರಾಗಿ ಶುಭಕರ ಪೂಜಾರಿ

Suddi Udaya

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯ ಅಧ್ಯಕ್ಷರಾಗಿ ಅಜಿತ್ ಕುಮಾರ್, ಉಪಾಧ್ಯಕ್ಷರಾಗಿ ಜಯಂತ ಶೆಟ್ಟಿ ಆಯ್ಕೆ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ :ಹದಿಮೂರನೇ ಸುತ್ತಿನಲ್ಲಿ 13162 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಅಭಿವೃದ್ಧಿ ಆಧಾರಿತ ರಾಜಕಾರಣಕ್ಕೆ ಮನಸೋತು ಬಿಜೆಪಿ ಸೇರಿದ ಕಾಂಗ್ರೆಸ್ ಮುಖಂಡರು

Suddi Udaya

ಧರ್ಮಸ್ಥಳ ಶತಾಯಿಷಿ ಮತದಾರರಿಗೆ ಚುನಾವಣಾ ಆಯೋಗದಿಂದ ಗೌರವಪೂರ್ವಕ ಸನ್ಮಾನ ಹಾಗೂ ಪ್ರಮಾಣ ಪತ್ರ ವಿತರಣೆ

Suddi Udaya
error: Content is protected !!