23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ಬಿಸಿಎ ವಿಭಾಗದಿಂದ ಎನಿಗ್ಮಾ- 2024

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಕಾಲೇಜು ಮಡಂತ್ಯಾರು ಬಿಸಿಎ ವಿಭಾಗದಿಂದ ಎನಿಗ್ಮಾ- 2024 ಅನ್ನು ಕಾರ್ಯಕ್ರಮವು ಎ.23 ರಂದು ನಡೆಯಿತು.

ಮುಖ್ಯ ಅತಿಥಿಯಾಗಿ ವಾಣಿ ಪಿಯು ಕಾಲೇಜಿನ ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥರು ಹಾಗೂ ಜೆಸಿಐ ವಲಯ ತರಬೇತುದಾರ ಸುಧೀರ್ ಕೆ.ಎನ್ ರವರು ಕಂಪ್ಯೂಟರ್ ಅಪ್ಲಿಕೇಶನ್ ಪ್ರಪಂಚದ ಹೊಸ ಪ್ರವೃತ್ತಿಗಳ ಕುರಿತು ಮಾತನಾಡಿದರು ಮತ್ತು ಹೊಸ ತಾಂತ್ರಿಕ ಜಗತ್ತನ್ನು ಅನ್ವೇಷಿಸಲು ವಿದ್ಯಾರ್ಥಿಗಳನ್ನು ಪ್ರೇರೇಪಿಸಿದರು.

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನ ಪ್ರಾಂಶುಪಾಲರು ಪ್ರೊ| ಅಲೆಕ್ಸ್ ಐವನ್ ಸಿಕ್ವೇರಾ, ಅವರು ತಮ್ಮ ಭಾಷಣದಲ್ಲಿ ನಾವೀನ್ಯತೆಯ ಮಹತ್ವವನ್ನು ಎತ್ತಿ ತೋರಿಸಿದರು.

ಕುಮಾರಿ ಸ್ವೀಡಲ್ ರೋಡ್ರಿಗಸ್ ಉಪನ್ಯಾಸಕಿ ಕಾರ್ಯಕ್ರಮದ ಪ್ರಾಮುಖ್ಯತೆಯನ್ನು ತಿಳಿಸಿದರು.
ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ಎನಿಗ್ಮಾ – 2024 ಗೆ ನೀಡಿದ ಕೊಡುಗೆಗಳಿಗಾಗಿ ಮುಖ್ಯ ಅತಿಥಿಗಳಿಂದ ಗೌರವಿಸಲಾಯಿತು.

ವೇದಿಕೆಯಲ್ಲಿ ಬಿಸಿಎ ವಿಭಾಗದ ಮುಖ್ಯಸ್ಥರು ಜನಾರ್ಧನ ರಾವ್ ಡಿ, IT-FORUMನ ಸಂಯೋಜಕಿ ಉಪನ್ಯಾಸಕಿ ಕುಮಾರಿ ವಿಯೋಲ ಸೆರಾವೊ, ವಿದ್ಯಾರ್ಥಿ ಸಂಯೋಜಕ ಯುನಿತ್ ಕೆ ಉಪಸ್ಥಿತರಿದ್ದರು.

ಅಂತಿಮ ವರ್ಷದ ಬಿಸಿಎ ದೀಕ್ಷಿತಾ ಮತ್ತು ತಂಡದವರಿಂದ ಪ್ರಾರ್ಥಿಸಿ, ಕುಮಾರಿ ವಿಯೋಲ ಸೆರಾವೊ ಸ್ವಾಗತಿಸಿದರು. ಕಾರ್ಯಕ್ರಮವನ್ನು ಬಿಸಿಎ ಅಂತಿಮ ವರ್ಷದ ವಿದ್ಯಾರ್ಥಿಗಳಾದ ಹೀಬಾ ಮತ್ತು ಸೃಜನ್ ನಿರ್ವಹಿಸಿದರು. ರಾಬಿನ್ ಆಗಸ್ಟಿನ್ ಅವರು ಧನ್ಯವಾದವಿತ್ತರು.

ಎನಿಗ್ಮಾ 2024 ಸೇಕ್ರೆಡ್ ಹಾರ್ಟ್ ಕಾಲೇಜಿನ ನಾವೀನ್ಯತೆ ಮತ್ತು ಸಹಯೋಗಕ್ಕೆ ಸಮರ್ಪಣೆಯನ್ನು ಪ್ರದರ್ಶಿಸಿತು, ಇದು ಎಲ್ಲರ ಮೇಲೆ ಶಾಶ್ವತವಾದ ಪರಿಣಾಮವನ್ನು ಬೀರಿದೆ.

Related posts

ಕರಿಮಣೇಲು: ರಾಮಣ್ಣ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಉಡುಪಿ, ದ.ಕ ಸಾಧನೆಗೆ ಕ್ಯಾಪ್ಟನ್ ಬ್ರಿಜೇಶ್ ಚೌಟ ಶ್ಲಾಘನೆ

Suddi Udaya

ಹೊಟ್ಟೆ ನೋವಿನಿಂದ ಬಳಲಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Suddi Udaya

ಗುಂಡೂರಿ: ಮಂಜಪ್ಪ ದೇವಾಡಿಗರಿಗೆ ನುಡಿನಮನ ಕಾರ್ಯಕ್ರಮ

Suddi Udaya

ಗುಡ್ಡ ಕುಸಿತದಂಥ ಪ್ರಕರಣ ಮತ್ತು ತಜ್ಞರ ಅಧ್ಯಯನ ವರದಿಗಳು ಭೂಕುಸಿತದ ಘೋರ ಪರಿಣಾಮಗಳನ್ನು ಜನರ ಮುಂದಿಟ್ಟಿದ್ದು ಯೋಜನೆಯನ್ನು ಮತ್ತೊಮ್ಮೆ ಪರಿಶೀಲಿಸುವಂತೆ ವಿ.ಪ.ಸದಸ್ಯ ಪ್ರತಾಪಸಿಂಹ ನಾಯಕ್ ರವರಿಂದ ಸಭಾಪತಿಗಳಿಗೆ ಮನವಿ

Suddi Udaya

ಬೆಳಾಲು : ಹಲವು ಮಂದಿ ಕಾಂಗ್ರೆಸ್‌ ಪ್ರಮುಖರು ಬಿಜೆಪಿ ‌ಸೇರ್ಪಡೆ

Suddi Udaya
error: Content is protected !!