23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬೆಳ್ತಂಗಡಿ : ವಿಕಲಚೇತನ ವ್ಯಕ್ತಿಯನ್ನು ಮನೆಯವರು ಎತ್ತಿಕೊಂಡು ಮತಗಟ್ಟೆಗೆ ಹೋಗಿ ಮತ ಚಲಾವಣೆ

ಬೆಳ್ತಂಗಡಿ; ಚುನಾವಣಾ ಆಯೋಗ ಸರಕಾರ ವಿಕಲಚೇತನರಿಗೆ ಮನೆಯಲ್ಲಿಯೇ ಮತದಾನ ಮಾಡುವ ಅವಕಾಶ ನೀಡಿದೆ ಆದರೆ ಅಧಿಕಾರಿಗಳ ಬೇಜವಾಬ್ದಾರಿಯಿಂದಾಗಿ ಬೆಳ್ತಂಗಡಿ ನಗರದಲ್ಲಿ ವಿಕಲಚೇತನ ವ್ಯಕ್ತಿಯನ್ನು ಮನೆಯವರು ಎತ್ತಿಕೊಂಡು ಮತಗಟ್ಟೆಗೆ ಹೋಗಿ ಮತ ಚಲಾಯಿಸಬೇಕಾಗಿ ಬಂತು.


ಬೆಳ್ತಂಗಡಿ ನಗರದ ನಿವಾಸಿ ಬಿ.ಎ ಮೊಹಮ್ಮದ್ ಅವರು ಎಂಡೋ ಸಲ್ಫಾನ್ ಸಂತ್ರಸ್ತರು, ಎದ್ದು ನಡೆಯಲು ಶಕ್ತಿಯಿಲ್ಲದ 30ವರ್ಷ ಪ್ರಾಯದ ಇವರು ಚಾಪೆಹಿಡಿದು ಮಲಗಿದ್ದಲ್ಲಿಯೇ ಇದ್ದಾರೆ. ಹಿಂದೆಲ್ಲ ಇವರನ್ನು ಅವರ ತಂದೆಯೇವರೇ ಎತ್ತಿಕೊಂಡು ಹೋಗಿ ಮತಚಲಾಯಿಸುತ್ತಿದ್ದರು. ಅವರಿಗೆ ಒಂದೂವರೆ ವರ್ಷದ ಹಿಂದೆ ನಡೆದ ಅಪಘಾತದ ಬಳಿಕ ಅವರಿಗೇ ನಡೆಯಲು ಕಷ್ಟವಾಗಿದೆ. ಎಂಡೋ ಪೀಡಿತರಾಗಿರುವ ಇವರ ಹೆಸರನ್ನು ವಿಕಲಚೇತನರ ಪಟ್ಟಿಯಲ್ಲಿ ಸೇರಿಸಿ ಮನೆಯಲ್ಲಿಯೇ ಮತದಾನಕ್ಕೆ ಅವಕಾಶ ನೀಡಬೇಕು ಎಂದು ಪಟ್ಟಣ ಪಂಚಾಯತಿನ ವಿಕಲಚೇತನರ ಪುನರ್ವಸತಿ ವಿಭಾಗದಿಂದ ಕಂದಾಯ ಇಲಾಖೆಗೆ ಪಟ್ಟಿ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಆದರೆ ಕಂದಾಯ ಇಲಾಖೆ ಈ ಬಗ್ಗೆ ಗಮನಹರಿಸಿಲ್ಲ. ಆ ಕಾರಣಕ್ಕಾಗಿ ಈ ಬಾರಿಯ ಚುನಾವಣೆಯಲ್ಲೂ ಅವರ ಹೆಸರು ವಿಕಲಚೇತನ ಮತದಾದರರ ಪಟ್ಟಿಯಲ್ಲಿ(ಪಿಡಬ್ಕ್ಯುಡಿ) ನಾಪತ್ತೆಯಾಗಿದೆ. ಈ ಬಗ್ಗೆ ಪಟ್ಟಣ ಪಂಚಾಯತಿನಲ್ಲಿ ವಿಚಾರಿಸಿದರೆ ನಾವು ಕಳುಹಿಸಿದ್ದೇವೆ ಆದರೆ ಎಂಟ್ರಿ ಆಗಿಲ್ಲ ಎಂಬ ಉತ್ತರ ಬರುತ್ತಿದೆ.
ಇಂದು ಬಿ.ಎ.ಮೊಹಮ್ಮದ್ ಅವರನ್ನು ಅವರ ಸಂಬಂಧಿಕರೇ ಎತ್ತಿಕೊಂಡು ಬೆಳ್ತಂಗಡಿ ಮಾದರಿ ಶಾಲೆಯ ಮತಗಟ್ಟೆಗೆ ತೆರಳಿ ಮತ ಚಲಾಯಿಸಿದರು. ಅಧಿಕಾರಿಗಳ ನಿರ್ಲಕ್ಷ್ಯದ ನಡುವೆಯೂ ವಿಕಲ ಚೇತನರಾಗಿರುವ ಇವರು ತಮ್ಮ ಮತದಾನದ ಹಕ್ಕನ್ನು ಸಮರ್ಪಕ ವಾಗಿ ಚಲಾಯಿಸಿದ್ದಾರೆ.

Related posts

ಉಜಿರೆ ಎಸ್ ಡಿ.ಎಂ.ಕಾಲೇಜು ಎನ್.ಎಸ್.ಎಸ್. ಘಟಕಕ್ಕೆ ರಾಜ್ಯ ಪ್ರಶಸ್ತಿ

Suddi Udaya

ಹಾಸನ ಜಿಲ್ಲಾ ರಾಷ್ಟ್ರೀಯ ಹೆದ್ದಾರಿ ವಿಭಾಗದ ಕಾರ್ಯಪಾಲಕ ಅಭಿಯಂತರರಾಗಿ ಶಿವಪ್ರಸಾದ್ ಅಜಿಲರಿಗೆ ಹೆಚ್ಚುವರಿ ಜವಾಬ್ದಾರಿ: ಇಂದು ಅಧಿಕಾರ ಸ್ವೀಕಾರ

Suddi Udaya

ಉಜಿರೆ: ಗುರಿಪಳ್ಳ ನಿವಾಸಿ ಶ್ರದ್ಧಾ ಶೆಟ್ಟಿ ನಿಧನ

Suddi Udaya

ಉಜಿರೆ ಶ್ರೀ ಧ.ಮಂ. ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ಘಟಕದ ಪ್ರಮುಖ 2025: ಜಿಲ್ಲಾಮಟ್ಟದ ವಸ್ತುಪ್ರದರ್ಶನ ಹಾಗೂ ಅಂತರ ಕಾಲೇಜು ಉತ್ಸವ

Suddi Udaya

ಎಂ ನಾರಾಯಣ ಬೇಗೂರ್ ರವರಿಗೆ ಶ್ರೀ ರಾಘವೇಂದ್ರ ಮಠದಲ್ಲಿ ಅಭಿನಂದನೆ

Suddi Udaya

ಕಳೆಂಜ: ನಡುಜಾರು ಸ.ಕಿ.ಪ್ರಾ. ಶಾಲೆಗೆ ಉದ್ಯಮಿ ಪ್ರಜಿತ್ ಜೈನ್ ರಿಂದ ಸ್ಟ್ಯಾಂಡ್ ಫ್ಯಾನ್ ನ್ನು ಕೊಡುಗೆ

Suddi Udaya
error: Content is protected !!