September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬೆಳ್ತಂಗಡಿ : ವಿಕಲಚೇತನ ವ್ಯಕ್ತಿಯನ್ನು ಮನೆಯವರು ಎತ್ತಿಕೊಂಡು ಮತಗಟ್ಟೆಗೆ ಹೋಗಿ ಮತ ಚಲಾವಣೆ

ಬೆಳ್ತಂಗಡಿ; ಚುನಾವಣಾ ಆಯೋಗ ಸರಕಾರ ವಿಕಲಚೇತನರಿಗೆ ಮನೆಯಲ್ಲಿಯೇ ಮತದಾನ ಮಾಡುವ ಅವಕಾಶ ನೀಡಿದೆ ಆದರೆ ಅಧಿಕಾರಿಗಳ ಬೇಜವಾಬ್ದಾರಿಯಿಂದಾಗಿ ಬೆಳ್ತಂಗಡಿ ನಗರದಲ್ಲಿ ವಿಕಲಚೇತನ ವ್ಯಕ್ತಿಯನ್ನು ಮನೆಯವರು ಎತ್ತಿಕೊಂಡು ಮತಗಟ್ಟೆಗೆ ಹೋಗಿ ಮತ ಚಲಾಯಿಸಬೇಕಾಗಿ ಬಂತು.


ಬೆಳ್ತಂಗಡಿ ನಗರದ ನಿವಾಸಿ ಬಿ.ಎ ಮೊಹಮ್ಮದ್ ಅವರು ಎಂಡೋ ಸಲ್ಫಾನ್ ಸಂತ್ರಸ್ತರು, ಎದ್ದು ನಡೆಯಲು ಶಕ್ತಿಯಿಲ್ಲದ 30ವರ್ಷ ಪ್ರಾಯದ ಇವರು ಚಾಪೆಹಿಡಿದು ಮಲಗಿದ್ದಲ್ಲಿಯೇ ಇದ್ದಾರೆ. ಹಿಂದೆಲ್ಲ ಇವರನ್ನು ಅವರ ತಂದೆಯೇವರೇ ಎತ್ತಿಕೊಂಡು ಹೋಗಿ ಮತಚಲಾಯಿಸುತ್ತಿದ್ದರು. ಅವರಿಗೆ ಒಂದೂವರೆ ವರ್ಷದ ಹಿಂದೆ ನಡೆದ ಅಪಘಾತದ ಬಳಿಕ ಅವರಿಗೇ ನಡೆಯಲು ಕಷ್ಟವಾಗಿದೆ. ಎಂಡೋ ಪೀಡಿತರಾಗಿರುವ ಇವರ ಹೆಸರನ್ನು ವಿಕಲಚೇತನರ ಪಟ್ಟಿಯಲ್ಲಿ ಸೇರಿಸಿ ಮನೆಯಲ್ಲಿಯೇ ಮತದಾನಕ್ಕೆ ಅವಕಾಶ ನೀಡಬೇಕು ಎಂದು ಪಟ್ಟಣ ಪಂಚಾಯತಿನ ವಿಕಲಚೇತನರ ಪುನರ್ವಸತಿ ವಿಭಾಗದಿಂದ ಕಂದಾಯ ಇಲಾಖೆಗೆ ಪಟ್ಟಿ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಆದರೆ ಕಂದಾಯ ಇಲಾಖೆ ಈ ಬಗ್ಗೆ ಗಮನಹರಿಸಿಲ್ಲ. ಆ ಕಾರಣಕ್ಕಾಗಿ ಈ ಬಾರಿಯ ಚುನಾವಣೆಯಲ್ಲೂ ಅವರ ಹೆಸರು ವಿಕಲಚೇತನ ಮತದಾದರರ ಪಟ್ಟಿಯಲ್ಲಿ(ಪಿಡಬ್ಕ್ಯುಡಿ) ನಾಪತ್ತೆಯಾಗಿದೆ. ಈ ಬಗ್ಗೆ ಪಟ್ಟಣ ಪಂಚಾಯತಿನಲ್ಲಿ ವಿಚಾರಿಸಿದರೆ ನಾವು ಕಳುಹಿಸಿದ್ದೇವೆ ಆದರೆ ಎಂಟ್ರಿ ಆಗಿಲ್ಲ ಎಂಬ ಉತ್ತರ ಬರುತ್ತಿದೆ.
ಇಂದು ಬಿ.ಎ.ಮೊಹಮ್ಮದ್ ಅವರನ್ನು ಅವರ ಸಂಬಂಧಿಕರೇ ಎತ್ತಿಕೊಂಡು ಬೆಳ್ತಂಗಡಿ ಮಾದರಿ ಶಾಲೆಯ ಮತಗಟ್ಟೆಗೆ ತೆರಳಿ ಮತ ಚಲಾಯಿಸಿದರು. ಅಧಿಕಾರಿಗಳ ನಿರ್ಲಕ್ಷ್ಯದ ನಡುವೆಯೂ ವಿಕಲ ಚೇತನರಾಗಿರುವ ಇವರು ತಮ್ಮ ಮತದಾನದ ಹಕ್ಕನ್ನು ಸಮರ್ಪಕ ವಾಗಿ ಚಲಾಯಿಸಿದ್ದಾರೆ.

Related posts

ನಿವೃತ್ತ ಜಲಾನಯನ ಅಧಿಕಾರಿ ದಯಾನಂದ ಹೆಚ್. ಕುಕ್ಕೇಡಿ ನಿಧನ

Suddi Udaya

ಗುರುವಾಯನಕೆರೆ ಸಮೀಪ ಬದ್ಯಾರುವಿನಲ್ಲಿ ಕಾರು- ಬೈಕ್ ನಡುವೆ ಭೀಕರ ರಸ್ತೆ ಅಪಘಾತ, ಬೈಕ್ ಸವಾರ ಗಂಭೀರ

Suddi Udaya

ಉಜಿರೆ ಎಸ್.ಡಿ.ಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜು : 37ನೇ ಶಿಶ್ಯೋಪನಯನ ಕಾರ್ಯಕ್ರಮ: 150 ನೂತನ ವಿದ್ಯಾರ್ಥಿಗಳಿಂದ ದೀಕ್ಷೆ ಸ್ವೀಕಾರ

Suddi Udaya

ಡಿ. 23-24: ಗುರುವಾಯನಕೆರೆ ಎಕ್ಸೆಲ್ ಪಿ ಯು ಕಾಲೇಜಿನಲ್ಲಿ “ಎಕ್ಸೆಲ್ ಪರ್ಬ”

Suddi Udaya

ಆನೆಗಳ ಹಾವಳಿ ನಿಯಂತ್ರಣಕ್ಕೆ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಅರಣ್ಯ ಇಲಾಖೆಯಿಂದ ರಂಗಪೂಜೆ

Suddi Udaya

ಗೇರುಕಟ್ಟೆ: ಗಣೇಶ್ ಕ್ಲಿನಿಕಲ್ ಲ್ಯಾಬೋರೇಟರಿ ಮತ್ತು ಪಾಲಿ ಕ್ಲಿನಿಕ್ ಉದ್ಘಾಟನೆ

Suddi Udaya
error: Content is protected !!