25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬೆಳ್ತಂಗಡಿ : ವಿಕಲಚೇತನ ವ್ಯಕ್ತಿಯನ್ನು ಮನೆಯವರು ಎತ್ತಿಕೊಂಡು ಮತಗಟ್ಟೆಗೆ ಹೋಗಿ ಮತ ಚಲಾವಣೆ

ಬೆಳ್ತಂಗಡಿ; ಚುನಾವಣಾ ಆಯೋಗ ಸರಕಾರ ವಿಕಲಚೇತನರಿಗೆ ಮನೆಯಲ್ಲಿಯೇ ಮತದಾನ ಮಾಡುವ ಅವಕಾಶ ನೀಡಿದೆ ಆದರೆ ಅಧಿಕಾರಿಗಳ ಬೇಜವಾಬ್ದಾರಿಯಿಂದಾಗಿ ಬೆಳ್ತಂಗಡಿ ನಗರದಲ್ಲಿ ವಿಕಲಚೇತನ ವ್ಯಕ್ತಿಯನ್ನು ಮನೆಯವರು ಎತ್ತಿಕೊಂಡು ಮತಗಟ್ಟೆಗೆ ಹೋಗಿ ಮತ ಚಲಾಯಿಸಬೇಕಾಗಿ ಬಂತು.


ಬೆಳ್ತಂಗಡಿ ನಗರದ ನಿವಾಸಿ ಬಿ.ಎ ಮೊಹಮ್ಮದ್ ಅವರು ಎಂಡೋ ಸಲ್ಫಾನ್ ಸಂತ್ರಸ್ತರು, ಎದ್ದು ನಡೆಯಲು ಶಕ್ತಿಯಿಲ್ಲದ 30ವರ್ಷ ಪ್ರಾಯದ ಇವರು ಚಾಪೆಹಿಡಿದು ಮಲಗಿದ್ದಲ್ಲಿಯೇ ಇದ್ದಾರೆ. ಹಿಂದೆಲ್ಲ ಇವರನ್ನು ಅವರ ತಂದೆಯೇವರೇ ಎತ್ತಿಕೊಂಡು ಹೋಗಿ ಮತಚಲಾಯಿಸುತ್ತಿದ್ದರು. ಅವರಿಗೆ ಒಂದೂವರೆ ವರ್ಷದ ಹಿಂದೆ ನಡೆದ ಅಪಘಾತದ ಬಳಿಕ ಅವರಿಗೇ ನಡೆಯಲು ಕಷ್ಟವಾಗಿದೆ. ಎಂಡೋ ಪೀಡಿತರಾಗಿರುವ ಇವರ ಹೆಸರನ್ನು ವಿಕಲಚೇತನರ ಪಟ್ಟಿಯಲ್ಲಿ ಸೇರಿಸಿ ಮನೆಯಲ್ಲಿಯೇ ಮತದಾನಕ್ಕೆ ಅವಕಾಶ ನೀಡಬೇಕು ಎಂದು ಪಟ್ಟಣ ಪಂಚಾಯತಿನ ವಿಕಲಚೇತನರ ಪುನರ್ವಸತಿ ವಿಭಾಗದಿಂದ ಕಂದಾಯ ಇಲಾಖೆಗೆ ಪಟ್ಟಿ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಆದರೆ ಕಂದಾಯ ಇಲಾಖೆ ಈ ಬಗ್ಗೆ ಗಮನಹರಿಸಿಲ್ಲ. ಆ ಕಾರಣಕ್ಕಾಗಿ ಈ ಬಾರಿಯ ಚುನಾವಣೆಯಲ್ಲೂ ಅವರ ಹೆಸರು ವಿಕಲಚೇತನ ಮತದಾದರರ ಪಟ್ಟಿಯಲ್ಲಿ(ಪಿಡಬ್ಕ್ಯುಡಿ) ನಾಪತ್ತೆಯಾಗಿದೆ. ಈ ಬಗ್ಗೆ ಪಟ್ಟಣ ಪಂಚಾಯತಿನಲ್ಲಿ ವಿಚಾರಿಸಿದರೆ ನಾವು ಕಳುಹಿಸಿದ್ದೇವೆ ಆದರೆ ಎಂಟ್ರಿ ಆಗಿಲ್ಲ ಎಂಬ ಉತ್ತರ ಬರುತ್ತಿದೆ.
ಇಂದು ಬಿ.ಎ.ಮೊಹಮ್ಮದ್ ಅವರನ್ನು ಅವರ ಸಂಬಂಧಿಕರೇ ಎತ್ತಿಕೊಂಡು ಬೆಳ್ತಂಗಡಿ ಮಾದರಿ ಶಾಲೆಯ ಮತಗಟ್ಟೆಗೆ ತೆರಳಿ ಮತ ಚಲಾಯಿಸಿದರು. ಅಧಿಕಾರಿಗಳ ನಿರ್ಲಕ್ಷ್ಯದ ನಡುವೆಯೂ ವಿಕಲ ಚೇತನರಾಗಿರುವ ಇವರು ತಮ್ಮ ಮತದಾನದ ಹಕ್ಕನ್ನು ಸಮರ್ಪಕ ವಾಗಿ ಚಲಾಯಿಸಿದ್ದಾರೆ.

Related posts

ಎಸ್.ಡಿ.ಎಂ ಕಾಲೇಜಿನ ಸ್ಥಾಪಕ ಪ್ರಾಂಶುಪಾಲರು, ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಪ್ರೊ.ಎಸ್ ಪ್ರಭಾಕರ್ ವಿಧಿವಶ

Suddi Udaya

ಜೆಸಿಐ ವಲಯ ಮಧ್ಯಂತರ ಸಮ್ಮೇಳನ: ಭಾಷಣ ಸ್ಪರ್ಧೆಯಲ್ಲಿ ಚಂದ್ರಹಾಸ ಬಳಂಜರಿಗೆ ಪ್ರಶಸ್ತಿ

Suddi Udaya

ಬೆಳಾಲು: ಮರದಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಆಟೋ ಚಾಲಕ ವಿಶ್ವನಾಥ್ ಗೌಡ ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಕನಕದಾಸ ಜಯಂತಿ ಆಚರಣೆ

Suddi Udaya

ಭಾಜಪ ಬೆಳ್ತಂಗಡಿ ಮಂಡಲದ ವಿಶೇಷ ಕಾರ್ಯಕಾರಿಣಿ ಸಭೆ

Suddi Udaya

ಫೆ.23: ಕಲ್ಮಂಜ ದ.ಕ.ಜಿ.ಪ. ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya
error: Content is protected !!