25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬೆಳ್ತಂಗಡಿ : ವಿಕಲಚೇತನ ವ್ಯಕ್ತಿಯನ್ನು ಮನೆಯವರು ಎತ್ತಿಕೊಂಡು ಮತಗಟ್ಟೆಗೆ ಹೋಗಿ ಮತ ಚಲಾವಣೆ

ಬೆಳ್ತಂಗಡಿ; ಚುನಾವಣಾ ಆಯೋಗ ಸರಕಾರ ವಿಕಲಚೇತನರಿಗೆ ಮನೆಯಲ್ಲಿಯೇ ಮತದಾನ ಮಾಡುವ ಅವಕಾಶ ನೀಡಿದೆ ಆದರೆ ಅಧಿಕಾರಿಗಳ ಬೇಜವಾಬ್ದಾರಿಯಿಂದಾಗಿ ಬೆಳ್ತಂಗಡಿ ನಗರದಲ್ಲಿ ವಿಕಲಚೇತನ ವ್ಯಕ್ತಿಯನ್ನು ಮನೆಯವರು ಎತ್ತಿಕೊಂಡು ಮತಗಟ್ಟೆಗೆ ಹೋಗಿ ಮತ ಚಲಾಯಿಸಬೇಕಾಗಿ ಬಂತು.


ಬೆಳ್ತಂಗಡಿ ನಗರದ ನಿವಾಸಿ ಬಿ.ಎ ಮೊಹಮ್ಮದ್ ಅವರು ಎಂಡೋ ಸಲ್ಫಾನ್ ಸಂತ್ರಸ್ತರು, ಎದ್ದು ನಡೆಯಲು ಶಕ್ತಿಯಿಲ್ಲದ 30ವರ್ಷ ಪ್ರಾಯದ ಇವರು ಚಾಪೆಹಿಡಿದು ಮಲಗಿದ್ದಲ್ಲಿಯೇ ಇದ್ದಾರೆ. ಹಿಂದೆಲ್ಲ ಇವರನ್ನು ಅವರ ತಂದೆಯೇವರೇ ಎತ್ತಿಕೊಂಡು ಹೋಗಿ ಮತಚಲಾಯಿಸುತ್ತಿದ್ದರು. ಅವರಿಗೆ ಒಂದೂವರೆ ವರ್ಷದ ಹಿಂದೆ ನಡೆದ ಅಪಘಾತದ ಬಳಿಕ ಅವರಿಗೇ ನಡೆಯಲು ಕಷ್ಟವಾಗಿದೆ. ಎಂಡೋ ಪೀಡಿತರಾಗಿರುವ ಇವರ ಹೆಸರನ್ನು ವಿಕಲಚೇತನರ ಪಟ್ಟಿಯಲ್ಲಿ ಸೇರಿಸಿ ಮನೆಯಲ್ಲಿಯೇ ಮತದಾನಕ್ಕೆ ಅವಕಾಶ ನೀಡಬೇಕು ಎಂದು ಪಟ್ಟಣ ಪಂಚಾಯತಿನ ವಿಕಲಚೇತನರ ಪುನರ್ವಸತಿ ವಿಭಾಗದಿಂದ ಕಂದಾಯ ಇಲಾಖೆಗೆ ಪಟ್ಟಿ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಆದರೆ ಕಂದಾಯ ಇಲಾಖೆ ಈ ಬಗ್ಗೆ ಗಮನಹರಿಸಿಲ್ಲ. ಆ ಕಾರಣಕ್ಕಾಗಿ ಈ ಬಾರಿಯ ಚುನಾವಣೆಯಲ್ಲೂ ಅವರ ಹೆಸರು ವಿಕಲಚೇತನ ಮತದಾದರರ ಪಟ್ಟಿಯಲ್ಲಿ(ಪಿಡಬ್ಕ್ಯುಡಿ) ನಾಪತ್ತೆಯಾಗಿದೆ. ಈ ಬಗ್ಗೆ ಪಟ್ಟಣ ಪಂಚಾಯತಿನಲ್ಲಿ ವಿಚಾರಿಸಿದರೆ ನಾವು ಕಳುಹಿಸಿದ್ದೇವೆ ಆದರೆ ಎಂಟ್ರಿ ಆಗಿಲ್ಲ ಎಂಬ ಉತ್ತರ ಬರುತ್ತಿದೆ.
ಇಂದು ಬಿ.ಎ.ಮೊಹಮ್ಮದ್ ಅವರನ್ನು ಅವರ ಸಂಬಂಧಿಕರೇ ಎತ್ತಿಕೊಂಡು ಬೆಳ್ತಂಗಡಿ ಮಾದರಿ ಶಾಲೆಯ ಮತಗಟ್ಟೆಗೆ ತೆರಳಿ ಮತ ಚಲಾಯಿಸಿದರು. ಅಧಿಕಾರಿಗಳ ನಿರ್ಲಕ್ಷ್ಯದ ನಡುವೆಯೂ ವಿಕಲ ಚೇತನರಾಗಿರುವ ಇವರು ತಮ್ಮ ಮತದಾನದ ಹಕ್ಕನ್ನು ಸಮರ್ಪಕ ವಾಗಿ ಚಲಾಯಿಸಿದ್ದಾರೆ.

Related posts

ಧರ್ಮಸ್ಥಳ ಗ್ರಾ.ಪಂ. ನಲ್ಲಿ ಆಯುಷ್ಮಾನ್ ಭವ ಆರೋಗ್ಯ ಸೇವೆಗೆ ಚಾಲನೆ

Suddi Udaya

ಕರ್ನಾಟಕ ಪಬ್ಲಿಕ್ ಸ್ಕೂಲ್, ಪುಂಜಾಲಕಟ್ಟೆಯ ಪ್ರಥಮ ದರ್ಜೆ ಸಹಾಯಕ ಪ್ರವೀಣ್ ಕುಮಾರ್ ರವರಿಗೆ ಬೀಳ್ಕೊಡುಗೆ

Suddi Udaya

ಬೆಳ್ತಂಗಡಿ ಕೋಟಿ-ಚೆನ್ನಯ ಕ್ರೀಡಾಕೂಟ: ಮಹಿಳೆಯರ ಹಗ್ಗ ಜಗ್ಗಾಟ ಪಂದ್ಯಾವಳಿ ಜಿಲ್ಲಾ ರಾಜ್ಯೋತ್ಸವ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಪ್ರಥಮ ಪ್ರಶಸ್ತಿ

Suddi Udaya

ಮುಗೇರಡ್ಕ ಮೊಗ್ರು ಯುವ ವೇದಿಕೆ ವತಿಯಿಂದ ವಿದ್ಯಾನಿಧಿಗೆ ದೇಣಿಗೆ ಹಸ್ತಾಂತರ

Suddi Udaya

ಕಣಿಯೂರು ಶೌರ್ಯ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ಸ್ವಚ್ಛತಾ ಶ್ರಮದಾನ

Suddi Udaya

ಯಕ್ಷಭಾರತಿಯಿಂದ ಶೋಭಾ ಸುರೇಶ ಕುದ್ರೆಂತ್ತಾಯರಿಗೆ ಗೌರವಾರ್ಪಣೆ ಮತ್ತು ತಾಳಮದ್ದಳೆ

Suddi Udaya
error: Content is protected !!