25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಳಿಯ ಗ್ರಾ.ಪಂ. ವ್ಯಾಪಿಯಲ್ಲಿ ಬಿರುಸಿನ ಮತದಾನ: ಗಮನಸೆಳೆದ ಪಿಂಕ್(ಸಖಿ) ಮತಗಟ್ಟೆ : ಮತಗಟ್ಟೆ ಕೇಂದ್ರದಲ್ಲಿ ಮತದಾರರ ವಿವಿಧ ಬೇಡಿಕೆ

ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊರಂಜ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬೂತ್ ಸಂಖ್ಯೆ 150, 151, 152 ರಲ್ಲಿ
ಮತದಾರರು ಮತ ಚಲಾಯಿಸುವ ಉತ್ಸಾಹದಿಂದ ಪೂರ್ವಾಹ್ನ 6 ಗಂಟೆಗೆ ಮೊದಲು ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದರು.

ಬೆಳಿಗ್ಗೆ ಮಹಿಳೆಯರು ಮತ್ತು ಪ್ರಥಮ ಬಾರಿಗೆ ಮತ ಚಲಾಯಿಸುವ ಯುವ ಪೀಳಿಗೆ ಸರತಿ ಸಾಲಿನಲ್ಲಿ ನಿಂತು ಶಾಂತಿಯುತ ರೀತಿಯಲ್ಲಿ ಮತ ಚಲಾಯಿಸುತ್ತಿದ್ದಾರೆ.

ಕಳಿಯ ಗ್ರಾಮ ಬೂತ್ ಸಂಖ್ಯೆ 152 ರಲ್ಲಿ ಸಖೀ (ಪಿಂಕ್‌) ಮತಗಟ್ಟೆ ಕೇಂದ್ರವನ್ನು ಶೃಂಗಾರ ಮಾಡಿ ಸ್ಥಾಪಿಸಿದ್ದಾರೆ.

ಮತದಾರರ ಬೇಡಿಕೆ:
ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೂತ್ ಸಂಖ್ಯೆ ಸುಮಾರು 1369 ಮತದಾರರಿದ್ದು ಮತದಾರರು ಕಡಿಮ ಸಂಖ್ಯೆ ಜಾಸ್ತಿಯಾಗಿದೆ. ಇಲ್ಲಿ ಮತ್ತೊಂದು ಬೂತ್ ಮಾಡಬೇಕು. ಹಿರಿಯ ನಾಗರಿಕರಿಗೆ ಮತ್ತು ಕೃಷಿಕರು ಹೆಚ್ಚು ಸಮಯ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಲು ಕಷ್ಟವಾಗುತ್ತದೆ. ಜನ ಪ್ರತಿನಿಧಿಗಳು ಮತ ಹಾಕಲು ಒತ್ತಾಯ ಮಾಡುತ್ತಾರೆ. ಅದರೆ ನಮ್ಮ ಈ ಬೇಡಿಕೆಯನ್ನು ಮುಂದಿನ ದಿನಗಳಲ್ಲಿ ನೇರವೇರಿಸಬೇಕು. ತಪ್ಪಿದಲ್ಲಿ ಮುಂದಿನ ದಿನಗಳಲ್ಲಿ ನಾವು ಮತ ಚಲಾವಣೆಗೆ ಬರುವುದಿಲ್ಲ. ಕಡಿಮೆ ಪಕ್ಷ ಸುಮಾರು 2 ರಿಂದ 3 ಗಂಟೆಗಳ ಕಾಲ ಮಳೆ, ಬಿಸಿಲಿನೊಂದಿಗೆ ಸರತಿ ಸಾಲಿನಲ್ಲಿ ನಿಲ್ಲುವುದಕ್ಕೆ ಕಷ್ಟವಾಗುತ್ತದೆ ಎಂದು ಹಿರಿಯ ನಾಗರಿಕರು ಬೇಸರ ವ್ಯಕ್ತಪಡಿಸಿದರು.

ಪೋಲಿಸ್ ಭದ್ರತೆ ಮತ್ತು ಚುನಾವಣಾ ಸಿಬ್ಬಂದಿಗಳು ಕಟ್ಟುನಿಟ್ಟಾಗಿ ಮತ ಚಲಾಯಿಸುವುದಕ್ಕೆ ಮತದಾರೊಂದಿಗೆ ಸ್ಪಂದಿಸುತ್ತಿದ್ದಾರೆ. ಶಾಂತಿಯುತವಾಗಿ ಮತದಾನ ನಡೆಯುತ್ತದೆ.

ಹಿರಿಯ ನಾಗರಿಕರು ಮತ ಚಲಾವಣೆಗೆ :
ಗೇರುಕಟ್ಟೆ ಜನತಾ ಕಾಲೋನಿ ನಿವಾಸಿಗಳಾದ ಮಹಮ್ಮದ್ ಕೆ.ಎಮ್ (86 ವರ್ಷ) ಮತ್ತು ಅಲಿಯಮ್ಮ(76 ವರ್ಷ) ದಂಪತಿಗಳು ಮತ ಚಲಾಯಿಸಿದರು. ಶ್ರೀಮತಿ ಕೆ.ಆರ್.ಶಾಂತ ಭಟ್ (80 ವರ್ಷ) ಕುಂಠಿನಿ, ಶ್ರೀಮತಿ ಲಕ್ಷ್ಮಿ ನಾಯ್ಕ್(88 ವರ್ಷ) ಹೀರ್ಯ, ಶ್ರೀಮತಿ ಹತಿಜಮ್ಮ ಮುಳ್ಳಗುಡ್ಡೆ(80 ವರ್ಷ) ಮತ್ತು ಗರ್ಭಿಣಿ, ಬಾಣಂತಿಯರು ಮತದಾನದ ಮೂಲಕ ಹಕ್ಕನ್ನು ಜವಾಬ್ದಾರಿಯಿಂದ ಮಾಡಿದರು.

Related posts

ಸೆ.26-27: ಬೆಳ್ತಂಗಡಿಯಲ್ಲಿ ಊದು ಪೂಜೆ ಮತ್ತು ಬೋಳ್ತೆರ್ದ ಪಿಲಿಕುಲೆನ ಅಬ್ಬರದ ನಲಿಕೆ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದ ಸಾಮಾನ್ಯ ಸಭೆ

Suddi Udaya

ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್ ನಲ್ಲಿ ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಂದ ನವೀನ ಗೋ-ಕಾರ್ಟ್ ಅಭಿವೃದ್ಧಿ

Suddi Udaya

ಧರ್ಮಸ್ಥಳ: ಮೃತ ದೇಹಗಳನ್ನು ಹೂತು ಹಾಕಿದ ದೂರು ಪ್ರಕರಣ ಕೇಸ್ ಫೈಲ್ ಪಡೆಯಲು ಧರ್ಮಸ್ಥಳ ಠಾಣೆಗೆ ಬಂದ ಎಸ್.ಐ.ಟಿ. ತನಿಖಾಧಿಕಾರಿ ಜಿತೇಂದ್ರ ದಯಾಮ

Suddi Udaya

ಬೀಡಿ ಬ್ರಾಂಚ್ ನ ಕಟ್ಟಡದ ಅಡ್ಡಕ್ಕೆ ವ್ಯಕ್ತಿ ನೇಣು ಹಾಕಿಕೊಂಡು ಆತ್ಮಹತ್ಯೆ

Suddi Udaya

ಮದ್ದಡ್ಕದಿಂದ ಬಸ್ಸು ಇಲ್ಲದೆ ಪ್ರಯಾಣಿಕರು ನೇತಾಡಿ‌ಕೊಂಡು ಹೋಗುವ ಪರಿಸ್ಥಿತಿ: ಅಧಿಕಾರಿಗಳು ಸಮಸ್ಯೆ ಬಗೆಹರಿಸುವಂತೆ ಜನರ ಮನವಿ

Suddi Udaya
error: Content is protected !!