25.5 C
ಪುತ್ತೂರು, ಬೆಳ್ತಂಗಡಿ
April 24, 2026
ತಾಲೂಕು ಸುದ್ದಿರಾಜಕೀಯ

ಲೋಕಸಭಾ ಚುನಾವಣೆ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಮತದಾನ ಆರಂಭ

ಬೆಳ್ತಂಗಡಿ: ದ.ಕ ಲೋಕಸಭಾ ಕ್ಷೇತ್ರಕ್ಕೆ ಒಳಪಟ್ಟ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ೨೪೧ ಮತಗಟ್ಟೆಗಳಲ್ಲಿ ಇಂದು ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭಗೊಂಡಿದೆ.
ಕಳೆದ ಎರಡು ತಿಂಗಳಿನಿಂದ ಬಿರುಬಿಸಿಲು ಇರುವುದರಿಂದ ಬೆಳಗ್ಗಿನ ಹೊತ್ತು ಹಾಗೂ ಸಂಜೆಯ ಹೊತ್ತು ಮತಗಟ್ಟೆಗಳಲ್ಲಿ ಮತದಾರರು ಹೆಚ್ಚಿನ ಸಂಖೆಯಲ್ಲಿ ಆಗಮಿಸಿ ಮತದಾನ ಮಾಡಲಿದ್ದಾರೆ. ಬೆಳಗ್ಗಿನ ಹೊತ್ತಿನಲ್ಲಿ ಈ ಬಾರಿ ವಿವಿಧ ಮತಗಟ್ಟೆಗಳಿಗೆ ಅಧಿಕ ಸಂಖ್ಯೆಲ್ಲಿ ಮತದಾರರು ಆಗಮಿಸಿ ಮತದಾನ ಮಾಡುತ್ತಿದ್ದಾರೆ. ತಾಲೂಕು ಸಹಾಯಕ ಚುನಾವಣಾಧಿಕಾರಿಗಳ ನೇತೃತ್ವದಲ್ಲಿ ತಾಲೂಕಿನ ಎಲ್ಲಾ ಮತಗಟ್ಟೆಗಳಲ್ಲಿ ಮತದಾನಕ್ಕೆ ಬೇಕಾದ ಪೂರಕ ವ್ಯವಸ್ಥೆಗಳನ್ನು ಮಾಡಿರುವುದರಿಂದ ಮತದಾನಕ್ಕೆ ಹೆಚ್ಚಿನ ಅನುಕೂಲವಾಗಿದೆ.

ತಾಲೂಕಿನ ಎಲ್ಲಾ ಮತಗಟ್ಟೆಗಳಲ್ಲೂ ಪೊಲೀಸ್ ಇಲಾಖೆಯಿಂದ ಸೂಕ್ತ ಭದ್ರತೆಯನ್ನು ಒದಗಿಸಲಾಗಿದೆ. ನಕ್ಸಲ್ ಏರಿದ ಮತಗಳಲ್ಲಿ ವಿಶೇಷ ನಿಗ ವಹಿಸಲಾಗಿದೆ. ತಾಲೂಕಿನಲ್ಲಿ ಮತಗಟ್ಟೆಗಳಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಬೆಳಿಗ್ಗೆ 7 ಗಂಟೆಯಿಂದ ಮತದಾನ ಆರಂಭಗೊಂಡಿದ್ದು, ಸಂಜೆ ೬ರ ತನಕ ನಡೆಯಲಿದೆ

Related posts

ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳು ವಿಭಾಗಿಯ ಮಟ್ಟಕ್ಕೆ ಆಯ್ಕೆ

Suddi Udaya

ನಾಪತ್ತೆಯಾಗಿದ್ದ ತೋಟತ್ತಾಡಿ ಯುವಕನ ಮೃತದೇಹ ಅಣಿಯೂರು ನದಿಯಲ್ಲಿ ಪತ್ತೆ

Suddi Udaya

ಪುತ್ತೂರು ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲರವರು ಕೊಕ್ಕಡ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನ, ಸೌತಡ್ಕ ಮಹಾಗಣಪತಿ ದೇವಸ್ಥಾನ ಹಾಗೂ ಕಾವು ತ್ರಿಗುಣಾತ್ಮಿಕ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ

Suddi Udaya

ಕೂಟ ಮಹಾ ಜಗತ್ತು ಬೆಳ್ತಂಗಡಿ ಅಂಗ ಸಂಸ್ಥೆಯ ವಾರ್ಷಿಕ ಕ್ರೀಡಾಕೂಟ ಮತ್ತು ಕ್ಯಾಲೆಂಡರ್ ಬಿಡುಗಡೆ

Suddi Udaya

ಕೊಕ್ಕಡ: ಸಂಗಮ ಸಂಜೀವಿನಿ ಗ್ರಾ.ಪಂ. ಮಟ್ಟದ ಒಕ್ಕೂಟದ ಮಹಾಸಭೆ ಹಾಗೂ ಪದಾಧಿಕಾರಿಗಳ ಪದಗ್ರಹಣ

Suddi Udaya

ಮಂಗಳೂರಿನ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಇವರ ನೇತೃತ್ವದಲ್ಲಿ ನಡೆಯುವ ಗಣೇಶೋತ್ಸವಕ್ಕೆ ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದಿಂದ ಹೊರಕಾಣಿಕೆ ಸಮರ್ಪಣೆ

Suddi Udaya
error: Content is protected !!