September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿ

ಚುನಾವಣಾ ಕೇಂದ್ರದ ಎಡವಟ್ಟು: ಮತಗಟ್ಟೆ ಸಂಖ್ಯೆ ಬದಲಾವಣೆ: ಕೊಕ್ಕಡದಿಂದ ಮರ್ಕಂಜದ ಮಿತ್ತಡ್ಕಕ್ಕೆ ಬಂದು ಮತ ಚಲಾಯಿಸಿದ ಮತದಾರ

ಕೊಕ್ಕಡದಲ್ಲಿ ಮತ ಚಲಾಯಿಸಬೇಕಿದ್ದ ಮತದಾರರೊಬ್ಬರು ಮತಗಟ್ಟೆ ಸಂಖ್ಯೆ ಬದಲಾಗಿ ಮರ್ಕಂಜದ ಮಿತ್ತಡ್ಕಕ್ಕೆ ಬಂದು ಮತ ಚಲಾಯಿಸಬೇಕಾಗಿ ಬಂದ ಘಟನೆ ಎ.26ರಂದು ನಡೆದಿದೆ.

ಸುಳ್ಯ ವಿಧಾನಸಭಾ ಕ್ಷೇತ್ರದ ಕೊಕ್ಕಡ ಬಳಿಯ ಅಶೋಕ ಎಂಬವರಿಗೆ ಮತಗಟ್ಟೆ ಸಂಖ್ಯೆ 23ರಲ್ಲಿ (ಕಾಪಿನಬಾಗಿಲು ಸೈಂಟ್ ಜೋನ್ ಅನುದಾನಿತ ಹಿ.ಪ್ರಾ.ಶಾಲೆ ಕೌಕ್ರಾಡಿ) ಮತ ಚಲಾಯಿಸಬೇಕಿತ್ತು. ಅಶೋಕರವರು ಈ ಹಿಂದೆ ಪುಣೆಯಲ್ಲಿ ಉದ್ಯೋಗ ಮಾಡಿಕೊಂಡು ಅಲ್ಲೇ ಇದ್ದ ಕಾರಣ ಮತ ಚಲಾಯಿಸಲು ಅಲ್ಲಿಯ ಮತದಾನ ಕೇಂದ್ರವನ್ನು ಆಶ್ರಯಿಸಿದ್ದರು. ಆದರೆ ಅವರು ಇತ್ತೀಚೆಗೆ ಕೊಕ್ಕಡದ ತನ್ನ ಊರಿಗೆ ಬಂದು ನೆಲೆಸಿದ ಕಾರಣ ಮತದಾನ ಕೇಂದ್ರವನ್ನು ಊರಿಗೆ ಬದಲಾಯಿಸಿದ್ದರು. ಮತದಾನ ಕೇಂದ್ರ ಬದಲಾಯಿಸುವ ಸಂದರ್ಭದಲ್ಲಿ ಚುನಾವಣಾ ಕೇಂದ್ರದಲ್ಲಿ ಮತಗಟ್ಟೆ ಸಂಖ್ಯೆ 23ರ ಬದಲು 213 ಎಂದು ನಮೂದಾಗಿ ಎಡವಟ್ಟಾಯಿತು. ಇದರಿಂದಾಗಿ ಅಶೋಕರವರಿಗೆ 23ರ ಮತಗಟ್ಟೆ ಯಲ್ಲಿ ಮತ ಚಲಾಯಿಸಲು ಸಾಧ್ಯವಾಗಲಿಲ್ಲ. ಹೀಗಾಗಿ ಅವರು ವೆಬ್ ಸೈಟ್ ಮೂಲಕ ಸರ್ಚ್ ಮಾಡಿ 213 ಮತಗಟ್ಟೆ ಕೇಂದ್ರವು ಮರ್ಕಂಜದಲ್ಲಿ ಮಿತ್ತಡ್ಕದಲ್ಲಿ ಬರುವುದನ್ನು ಖಚಿತಪಡಿಸಿ ಸುಮಾರು 52ಕಿ.ಮೀ. ದೂರ ಬಂದು ಮಿತ್ತಡ್ಕ ದ.ಕ.ಜಿ.ಪ.ಹಿ.ಪ್ರಾ.ಶಾಲೆಯಲ್ಲಿ ಮತ ಚಲಾಯಿಸಿದರು.

ಅಶೋಕರವರ ಮನೆಯವರು 23ನೇ ಮತಗಟ್ಟೆಯಲ್ಲಿಯೇ ಮತ ಚಲಾಯಿಸಿದ್ದಾರೆ. “ನಾನು ದೇಶಕ್ಕಾಗಿ ಇಲ್ಲಿಗೆ ಬಂದು ಮತ ಚಲಾಯಿಸಿದ್ದೇನೆ” ಎಂದು ಅಲ್ಲಿ ಸೇರಿದ್ದ ಕಾರ್ಯಕರ್ತರೊಡನೆ ತನ್ನ ಮಾತನ್ನು ಹಂಚಿಕೊಂಡಿದ್ದಾರೆ.

Related posts

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆಯಲ್ಲಿ ಗ್ರಾಮೀಣ ಆಸ್ಪತ್ರೆಯ ಮತ್ತೊಂದು ಸಾಧನೆ: ಸಂಕೀರ್ಣ ಬಾಯಿ ಕ್ಯಾನ್ಸರ್‌ಗೆ ಹೆಮಿ-ಮಂಡಿಬುಲೆಕ್ಟಮಿ ಶಸ್ತ್ರ ಚಿಕಿತ್ಸೆ

Suddi Udaya

ಬೆಳ್ತಂಗಡಿ : ತೋಟಗಾರಿಕೆ ಬೆಳೆಗಳಿಗೆ ರಿಯಾಯಿತಿ ದರದಲ್ಲಿ ಔಷಧಿಗಳು ಲಭ್ಯ

Suddi Udaya

ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ಇದರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಅಂಗವಾಗಿ ಸಾರ್ವಜನಿಕ ಮೊಸರು ಕುಡಿಕೆ ಉತ್ಸವ

Suddi Udaya

ಪೆರಾಲ್ದರಕಟ್ಟೆ ಬದ್ರಿಯಾ ಜುಮಾ ಮಸೀದಿ ಅಂಗ ಸಂಸ್ಥೆಯಾದ ಸ್ವಲಾತ್ ಕಮಿಟಿ ಪೆರಾಲ್ದರಕಟ್ಟೆ ಇದರ ವಾರ್ಷಿಕ ಮಹಾಸಭೆ ಹಾಗೂ ನೂತನ ಕಮಿಟಿ ರಚನೆ

Suddi Udaya

ಮಕ್ಕಳ ಪ್ರತಿಭೆಗೆ ವೇದಿಕೆ ಕಲ್ಪಿಸುವ ‘ಸ್ವಾತಂತ್ರ್ಯ ಸಂಭ್ರಮ’ — ಮುಳಿಯ ಗೋಲ್ಡ್ & ಡೈಮಂಡ್ಸ್‌ನಿಂದ ವಿಶೇಷ ವಿಡಿಯೋ ಸ್ಪರ್ಧೆ

Suddi Udaya

ಕಣಿಯೂರು ಮಹಾಶಕ್ತಿ ಕೇಂದ್ರದ ಚುನಾವಣಾ ಪೂರ್ವಭಾವಿ ಸಿದ್ಧತೆ

Suddi Udaya
error: Content is protected !!