25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಲಾಯಿಲ: ಓಡದಕರಿಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ : 12 ತೆಂಗಿನಕಾಯಿ ಗಣಹೋಮ, ತೋರಣ ಮುಹೂರ್ತ

ಲಾಯಿಲ: ಓಡದಕರಿಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವವು ಎ.27 ಮತ್ತು ಎ.28 ರಂದು ಇಂದಬೆಟ್ಟು-ಕುತ್ರೊಟ್ಟು ಅಸ್ರಣ್ಣರಾದ ಎಸ್. ಗೋಪಾಲಕೃಷ್ಣ ಉಪಾಧ್ಯಾಯ ರವರ ನೇತೃತ್ವದಲ್ಲಿ ಹಾಗೂ ವೇ.ಮೂ. ಶ್ರೀಕಾಂತ ಭಟ್ ರವರ ಪೌರೋಹಿತ್ಯದಲ್ಲಿ ಜರಗಲಿರುವುದು.


ಇಂದು(ಎ.27) ಬೆಳಿಗ್ಗೆ ದೇವತಾ ಪ್ರಾರ್ಥನೆ, ಪುಣ್ಯಾಹ, 12 ತೆಂಗಿನಕಾಯಿ ಗಣಹೋಮ, ತೋರಣ ಮುಹೂರ್ತ, ನಾಗ ಸಾನಿಧ್ಯದಲ್ಲಿ ತಂಬಿಲ, ಅಶ್ವಥ ಪೂಜೆ, ನವಕ ಪ್ರಧಾನ ಹೋಮ ಹಾಗೂ ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ, ನಡೆಯಿತು.

ಈ ಸಂದರ್ಭದಲ್ಲಿ ಊರ ಪರವೂರ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

ರಾತ್ರಿ ಆಶ್ಲೇಷಾ ಬಲಿ, ನಿತ್ಯ ಪೂಜೆ. ನಡೆಯಲಿದೆ.
ಎ.28 ರಂದು ಚಂಡಿಕಾ ಹೋಮ, ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಸಾನಿಧ್ಯದಲ್ಲಿ ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ, ಸಂಜೆ ಲಾಯಿಲ ಶ್ರೀ ಬಲಮುರಿ ಗಣಪತಿ ಭಜನಾ ಮಂಡಳಿಯವರಿಂದ ಕುಣಿತ ಭಜನಾ ಕಾರ್ಯಕ್ರಮ, ಶ್ರೀ ರಂಗ ಪೂಜೆ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ರಾತ್ರಿ ಮೈಸಂದಾಯ, ಲೆಕ್ಕೆಸಿರಿ, ಜುಮಾದಿ ಬಂಟ ಹಾಗೂ ಅಣ್ಣಪ್ಪ ಪಂಜುರ್ಲಿ ದೈವಗಳಿಗೆ ನೇಮೋತ್ಸವ ನಡೆಯಲಿದೆ.

Related posts

ಬ್ರಹ್ಮಶ್ರೀ ನಾರಾಯಣಗುರುಗಳ ಜನ್ಮ ದಿನಾಚರಣೆ ಪ್ರಯುಕ್ತ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆ: ಶ್ರೀ ಗುರುದೇವ ಪ್ರ.ದ. ಕಾಲೇಜಿನ ವಿದ್ಯಾರ್ಥಿನಿ ಹಸ್ತವಿ ಪ್ರಥಮ ಸ್ಥಾನ

Suddi Udaya

ಗೇರುಕಟ್ಟೆಯಲ್ಲಿ ಗಣೇಶ್ ಕ್ಲಿನಿಕಲ್ ಲ್ಯಾಬೋರೇಟರಿ ಶುಭಾರಂಭ

Suddi Udaya

ಕೊಕ್ಕಡ ಜೆಸಿಐ ಕಪಿಲ ಘಟಕ ಹಾಗೂ ನಾಡೋಳಿ ಡಯಾಗ್ನಸ್ಟಿಕ್ ಸೆಂಟರ್ ಕಡಬ ಆಶ್ರಯದಲ್ಲಿ “ಆರೋಗ್ಯ ಅರಿವು ಕಾರ್ಯಕ್ರಮ

Suddi Udaya

ವಿಮೆನ್ ಇಂಡಿಯಾ ಮೂವ್ಮೆಂಟ್ ಬೆಳ್ತಂಗಡಿ ನಗರ ಸಮಿತಿ ವತಿಯಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕೊಯ್ಯೂರು ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿವಿಧ ಆಟೋಟ ಸ್ಪರ್ಧೆ

Suddi Udaya

ನೆರಿಯ : ಬೆಂಕಿ ತಗುಲಿ ಹಾನಿಯಾದ ಮನೆಗೆ ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸಂಘ ಹಾಗೂ ವಾಣಿ ಶಿಕ್ಷಣ ಸಂಸ್ಥೆಯಿಂದ ಭೇಟಿ

Suddi Udaya
error: Content is protected !!