25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಲಾಯಿಲ: ಓಡದಕರಿಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ : 12 ತೆಂಗಿನಕಾಯಿ ಗಣಹೋಮ, ತೋರಣ ಮುಹೂರ್ತ

ಲಾಯಿಲ: ಓಡದಕರಿಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವವು ಎ.27 ಮತ್ತು ಎ.28 ರಂದು ಇಂದಬೆಟ್ಟು-ಕುತ್ರೊಟ್ಟು ಅಸ್ರಣ್ಣರಾದ ಎಸ್. ಗೋಪಾಲಕೃಷ್ಣ ಉಪಾಧ್ಯಾಯ ರವರ ನೇತೃತ್ವದಲ್ಲಿ ಹಾಗೂ ವೇ.ಮೂ. ಶ್ರೀಕಾಂತ ಭಟ್ ರವರ ಪೌರೋಹಿತ್ಯದಲ್ಲಿ ಜರಗಲಿರುವುದು.


ಇಂದು(ಎ.27) ಬೆಳಿಗ್ಗೆ ದೇವತಾ ಪ್ರಾರ್ಥನೆ, ಪುಣ್ಯಾಹ, 12 ತೆಂಗಿನಕಾಯಿ ಗಣಹೋಮ, ತೋರಣ ಮುಹೂರ್ತ, ನಾಗ ಸಾನಿಧ್ಯದಲ್ಲಿ ತಂಬಿಲ, ಅಶ್ವಥ ಪೂಜೆ, ನವಕ ಪ್ರಧಾನ ಹೋಮ ಹಾಗೂ ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ, ನಡೆಯಿತು.

ಈ ಸಂದರ್ಭದಲ್ಲಿ ಊರ ಪರವೂರ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

ರಾತ್ರಿ ಆಶ್ಲೇಷಾ ಬಲಿ, ನಿತ್ಯ ಪೂಜೆ. ನಡೆಯಲಿದೆ.
ಎ.28 ರಂದು ಚಂಡಿಕಾ ಹೋಮ, ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಸಾನಿಧ್ಯದಲ್ಲಿ ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ, ಸಂಜೆ ಲಾಯಿಲ ಶ್ರೀ ಬಲಮುರಿ ಗಣಪತಿ ಭಜನಾ ಮಂಡಳಿಯವರಿಂದ ಕುಣಿತ ಭಜನಾ ಕಾರ್ಯಕ್ರಮ, ಶ್ರೀ ರಂಗ ಪೂಜೆ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ರಾತ್ರಿ ಮೈಸಂದಾಯ, ಲೆಕ್ಕೆಸಿರಿ, ಜುಮಾದಿ ಬಂಟ ಹಾಗೂ ಅಣ್ಣಪ್ಪ ಪಂಜುರ್ಲಿ ದೈವಗಳಿಗೆ ನೇಮೋತ್ಸವ ನಡೆಯಲಿದೆ.

Related posts

ಬೆಳ್ತಂಗಡಿ ರೋಟರೀ ಕ್ಲಬ್ ನಿಂದ ರೂ. 40 ಲಕ್ಷ ಮೌಲ್ಯದ ಕೊಡುಗೆ

Suddi Udaya

ಚಾರ್ಮಾಡಿ: ಪರ್ಲಾಣಿ ಸ. ಹಿ.ಪ್ರಾ. ಶಾಲೆಯ ನೂತನ ವಿವೇಕ ಕೊಠಡಿ ಉದ್ಘಾಟನೆ

Suddi Udaya

ಬ್ರಿಜೇಶ್ ಚೌಟ ಗೆಲುವು, ಉಜಿರೆಯಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದ ಬಿಜೆಪಿ ಕಾರ್ಯಕರ್ತರು

Suddi Udaya

ಕರಾಯ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಬೊಮ್ಮಯ ಬಂಗೇರ ಆಯ್ಕೆ

Suddi Udaya

ಧರ್ಮಸ್ಥಳ: ಬೋಳಿಯರ್ ನಲ್ಲಿ ಪ್ರತ್ಯಕ್ಷವಾಗುತ್ತಿದೆ ಕಾಡಾನೆಗಳ ಹಿಂಡು

Suddi Udaya

ಜಮಲಾಬಾದ್ ಇದ್ಗದಲ್ಲಿ ಸಂಭ್ರಮದ ಈದ್ ಆಚರಣೆ

Suddi Udaya
error: Content is protected !!