23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿ

ಚುನಾವಣಾ ಕೇಂದ್ರದ ಎಡವಟ್ಟು: ಮತಗಟ್ಟೆ ಸಂಖ್ಯೆ ಬದಲಾವಣೆ: ಕೊಕ್ಕಡದಿಂದ ಮರ್ಕಂಜದ ಮಿತ್ತಡ್ಕಕ್ಕೆ ಬಂದು ಮತ ಚಲಾಯಿಸಿದ ಮತದಾರ

ಕೊಕ್ಕಡದಲ್ಲಿ ಮತ ಚಲಾಯಿಸಬೇಕಿದ್ದ ಮತದಾರರೊಬ್ಬರು ಮತಗಟ್ಟೆ ಸಂಖ್ಯೆ ಬದಲಾಗಿ ಮರ್ಕಂಜದ ಮಿತ್ತಡ್ಕಕ್ಕೆ ಬಂದು ಮತ ಚಲಾಯಿಸಬೇಕಾಗಿ ಬಂದ ಘಟನೆ ಎ.26ರಂದು ನಡೆದಿದೆ.

ಸುಳ್ಯ ವಿಧಾನಸಭಾ ಕ್ಷೇತ್ರದ ಕೊಕ್ಕಡ ಬಳಿಯ ಅಶೋಕ ಎಂಬವರಿಗೆ ಮತಗಟ್ಟೆ ಸಂಖ್ಯೆ 23ರಲ್ಲಿ (ಕಾಪಿನಬಾಗಿಲು ಸೈಂಟ್ ಜೋನ್ ಅನುದಾನಿತ ಹಿ.ಪ್ರಾ.ಶಾಲೆ ಕೌಕ್ರಾಡಿ) ಮತ ಚಲಾಯಿಸಬೇಕಿತ್ತು. ಅಶೋಕರವರು ಈ ಹಿಂದೆ ಪುಣೆಯಲ್ಲಿ ಉದ್ಯೋಗ ಮಾಡಿಕೊಂಡು ಅಲ್ಲೇ ಇದ್ದ ಕಾರಣ ಮತ ಚಲಾಯಿಸಲು ಅಲ್ಲಿಯ ಮತದಾನ ಕೇಂದ್ರವನ್ನು ಆಶ್ರಯಿಸಿದ್ದರು. ಆದರೆ ಅವರು ಇತ್ತೀಚೆಗೆ ಕೊಕ್ಕಡದ ತನ್ನ ಊರಿಗೆ ಬಂದು ನೆಲೆಸಿದ ಕಾರಣ ಮತದಾನ ಕೇಂದ್ರವನ್ನು ಊರಿಗೆ ಬದಲಾಯಿಸಿದ್ದರು. ಮತದಾನ ಕೇಂದ್ರ ಬದಲಾಯಿಸುವ ಸಂದರ್ಭದಲ್ಲಿ ಚುನಾವಣಾ ಕೇಂದ್ರದಲ್ಲಿ ಮತಗಟ್ಟೆ ಸಂಖ್ಯೆ 23ರ ಬದಲು 213 ಎಂದು ನಮೂದಾಗಿ ಎಡವಟ್ಟಾಯಿತು. ಇದರಿಂದಾಗಿ ಅಶೋಕರವರಿಗೆ 23ರ ಮತಗಟ್ಟೆ ಯಲ್ಲಿ ಮತ ಚಲಾಯಿಸಲು ಸಾಧ್ಯವಾಗಲಿಲ್ಲ. ಹೀಗಾಗಿ ಅವರು ವೆಬ್ ಸೈಟ್ ಮೂಲಕ ಸರ್ಚ್ ಮಾಡಿ 213 ಮತಗಟ್ಟೆ ಕೇಂದ್ರವು ಮರ್ಕಂಜದಲ್ಲಿ ಮಿತ್ತಡ್ಕದಲ್ಲಿ ಬರುವುದನ್ನು ಖಚಿತಪಡಿಸಿ ಸುಮಾರು 52ಕಿ.ಮೀ. ದೂರ ಬಂದು ಮಿತ್ತಡ್ಕ ದ.ಕ.ಜಿ.ಪ.ಹಿ.ಪ್ರಾ.ಶಾಲೆಯಲ್ಲಿ ಮತ ಚಲಾಯಿಸಿದರು.

ಅಶೋಕರವರ ಮನೆಯವರು 23ನೇ ಮತಗಟ್ಟೆಯಲ್ಲಿಯೇ ಮತ ಚಲಾಯಿಸಿದ್ದಾರೆ. “ನಾನು ದೇಶಕ್ಕಾಗಿ ಇಲ್ಲಿಗೆ ಬಂದು ಮತ ಚಲಾಯಿಸಿದ್ದೇನೆ” ಎಂದು ಅಲ್ಲಿ ಸೇರಿದ್ದ ಕಾರ್ಯಕರ್ತರೊಡನೆ ತನ್ನ ಮಾತನ್ನು ಹಂಚಿಕೊಂಡಿದ್ದಾರೆ.

Related posts

ಸಕಾಲದಲ್ಲಿ ತಾಲೂಕಿನ ಶಿಕ್ಷಕರ ವೇತನ ಪಾವತಿಗೆ ಅಗತ್ಯ ಕ್ರಮ ಕೈಗೊಳ್ಳಿ -ಜಿಪಿಟಿ ಶಿಕ್ಷಕರ ಸಂಘದ ಅಧ್ಯಕ್ಷ ಯೋಗೇಶ ಹೆಚ್ ಆರ್

Suddi Udaya

ಸೆ.26: ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಪ್ರಯುಕ್ತ ಮಡಂತ್ಯಾರು ಹಾಗೂ ಬಳ್ಳಮಂಜ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಗೆ ಶೇ.100 ಫಲಿತಾಂಶ

Suddi Udaya

ಧರ್ಮಸ್ಥಳ ಬೂತ್ ಸಂಖ್ಯೆ 163ರ ಅಧ್ಯಕ್ಷ ಉಮಾನಾಥ್ ರವರ ಮನೆಗೆ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

Suddi Udaya

ಮಹಾಭಾರತ ಸರಣಿ ತಾಳಮದ್ಧಳೆಯುವ ಕಲಾವಿದ ಪ್ರವೀತ ಆಚಾರ್ಯರಿಗೆ ಶ್ರದ್ದಾಂಜಲಿ ಅರ್ಪಣೆ

Suddi Udaya

ಇಚ್ಚುರಲ್ಲಿ ಶ್ರೀ ಮಹಾಭಾರತ ಸರಣಿ ತಾಳ ಮದ್ದಳೆಯ ಮೂರನೇ ಹಂತದ ಕಾರ್ಯಕ್ರಮ

Suddi Udaya
error: Content is protected !!