July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿ

ಚುನಾವಣಾ ಕೇಂದ್ರದ ಎಡವಟ್ಟು: ಮತಗಟ್ಟೆ ಸಂಖ್ಯೆ ಬದಲಾವಣೆ: ಕೊಕ್ಕಡದಿಂದ ಮರ್ಕಂಜದ ಮಿತ್ತಡ್ಕಕ್ಕೆ ಬಂದು ಮತ ಚಲಾಯಿಸಿದ ಮತದಾರ

ಕೊಕ್ಕಡದಲ್ಲಿ ಮತ ಚಲಾಯಿಸಬೇಕಿದ್ದ ಮತದಾರರೊಬ್ಬರು ಮತಗಟ್ಟೆ ಸಂಖ್ಯೆ ಬದಲಾಗಿ ಮರ್ಕಂಜದ ಮಿತ್ತಡ್ಕಕ್ಕೆ ಬಂದು ಮತ ಚಲಾಯಿಸಬೇಕಾಗಿ ಬಂದ ಘಟನೆ ಎ.26ರಂದು ನಡೆದಿದೆ.

ಸುಳ್ಯ ವಿಧಾನಸಭಾ ಕ್ಷೇತ್ರದ ಕೊಕ್ಕಡ ಬಳಿಯ ಅಶೋಕ ಎಂಬವರಿಗೆ ಮತಗಟ್ಟೆ ಸಂಖ್ಯೆ 23ರಲ್ಲಿ (ಕಾಪಿನಬಾಗಿಲು ಸೈಂಟ್ ಜೋನ್ ಅನುದಾನಿತ ಹಿ.ಪ್ರಾ.ಶಾಲೆ ಕೌಕ್ರಾಡಿ) ಮತ ಚಲಾಯಿಸಬೇಕಿತ್ತು. ಅಶೋಕರವರು ಈ ಹಿಂದೆ ಪುಣೆಯಲ್ಲಿ ಉದ್ಯೋಗ ಮಾಡಿಕೊಂಡು ಅಲ್ಲೇ ಇದ್ದ ಕಾರಣ ಮತ ಚಲಾಯಿಸಲು ಅಲ್ಲಿಯ ಮತದಾನ ಕೇಂದ್ರವನ್ನು ಆಶ್ರಯಿಸಿದ್ದರು. ಆದರೆ ಅವರು ಇತ್ತೀಚೆಗೆ ಕೊಕ್ಕಡದ ತನ್ನ ಊರಿಗೆ ಬಂದು ನೆಲೆಸಿದ ಕಾರಣ ಮತದಾನ ಕೇಂದ್ರವನ್ನು ಊರಿಗೆ ಬದಲಾಯಿಸಿದ್ದರು. ಮತದಾನ ಕೇಂದ್ರ ಬದಲಾಯಿಸುವ ಸಂದರ್ಭದಲ್ಲಿ ಚುನಾವಣಾ ಕೇಂದ್ರದಲ್ಲಿ ಮತಗಟ್ಟೆ ಸಂಖ್ಯೆ 23ರ ಬದಲು 213 ಎಂದು ನಮೂದಾಗಿ ಎಡವಟ್ಟಾಯಿತು. ಇದರಿಂದಾಗಿ ಅಶೋಕರವರಿಗೆ 23ರ ಮತಗಟ್ಟೆ ಯಲ್ಲಿ ಮತ ಚಲಾಯಿಸಲು ಸಾಧ್ಯವಾಗಲಿಲ್ಲ. ಹೀಗಾಗಿ ಅವರು ವೆಬ್ ಸೈಟ್ ಮೂಲಕ ಸರ್ಚ್ ಮಾಡಿ 213 ಮತಗಟ್ಟೆ ಕೇಂದ್ರವು ಮರ್ಕಂಜದಲ್ಲಿ ಮಿತ್ತಡ್ಕದಲ್ಲಿ ಬರುವುದನ್ನು ಖಚಿತಪಡಿಸಿ ಸುಮಾರು 52ಕಿ.ಮೀ. ದೂರ ಬಂದು ಮಿತ್ತಡ್ಕ ದ.ಕ.ಜಿ.ಪ.ಹಿ.ಪ್ರಾ.ಶಾಲೆಯಲ್ಲಿ ಮತ ಚಲಾಯಿಸಿದರು.

ಅಶೋಕರವರ ಮನೆಯವರು 23ನೇ ಮತಗಟ್ಟೆಯಲ್ಲಿಯೇ ಮತ ಚಲಾಯಿಸಿದ್ದಾರೆ. “ನಾನು ದೇಶಕ್ಕಾಗಿ ಇಲ್ಲಿಗೆ ಬಂದು ಮತ ಚಲಾಯಿಸಿದ್ದೇನೆ” ಎಂದು ಅಲ್ಲಿ ಸೇರಿದ್ದ ಕಾರ್ಯಕರ್ತರೊಡನೆ ತನ್ನ ಮಾತನ್ನು ಹಂಚಿಕೊಂಡಿದ್ದಾರೆ.

Related posts

ಎನ್.ಎಂ.ಎಂ.ಎಸ್. ಪರೀಕ್ಷೆ: ಶಿರ್ಲಾಲು ಶಾಲೆಯ ಕೆ.ಪುಣ್ಯಶ್ರೀ ವಿದ್ಯಾರ್ಥಿ ವೇತನಕ್ಕೆ ಆಯ್ಕೆ

Suddi Udaya

ಕೃಷಿಕರ ಒಕ್ಕಲು ಎಬ್ಬಿಸಿ ತೊಂದರೆ ಮಾಡುವ ಅಧಿಕಾರಿಗಳ ವಿರುದ್ಧ ಸರಕಾರ ಕಠಿಣ ಕ್ರಮಕೈಗೊಳ್ಳಬೇಕು : ಮೋಹನ್ ಗೌಡ

Suddi Udaya

ಕೊಕ್ಕಡ: ಕಾಪಿನಬಾಗಿಲುನಲ್ಲಿ ಒಂಟಿ ಸಲಗದ ಹಾವಳಿ: ಅಪಾರ ಅಡಿಕೆ ಗಿಡ, ಬಾಳೆ ಗಿಡಗಳಿಗೆ ಹಾನಿ

Suddi Udaya

ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಯವರಿಗೆ ಅಯೋಧ್ಯೆ ಶ್ರೀ ರಾಮ ಮಂತ್ರಾಕ್ಷತೆ ವಿತರಣೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಇಂದಿರಾ ಗಾಂಧಿಯವರ ಪುಣ್ಯ ಸ್ಮರಣೆ ಹಾಗೂ ಸರ್ದಾರ್ ವಲ್ಲಭಭಾಯಿ ಪಟೇಲ್ ರವರ ಜನ್ಮ ದಿನಾಚರಣೆ

Suddi Udaya

ನಾರಾವಿ ಉ.ಪ್ರಾಥಮಿಕ ಶಾಲೆ: ಪುಸ್ತಕ ವಿತರಣೆ

Suddi Udaya
error: Content is protected !!