24 C
ಪುತ್ತೂರು, ಬೆಳ್ತಂಗಡಿ
June 8, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳಂಜ ಜ್ಯೋತಿ ಮಹಿಳಾ ಮಂಡಲದ ಪದಾಧಿಕಾರಿಗಳ ಆಯ್ಕೆ ಸಭೆ: ಅಧ್ಯಕ್ಷರಾಗಿ ಚೇತನಾ ಜೈನ್, ಪ್ರ.ಕಾರ್ಯದರ್ಶಿಯಾಗಿ ಯಕ್ಷಿತಾ ದೇವಾಡಿಗ

ಬಳಂಜ: ಸಾಂಸ್ಕೃತಿಕ, ಕಲೆ, ಕ್ರೀಡೆ ಹಾಗೂ ಸಾಮಾಜಿಕವಾಗಿ ಗುರುತಿಸಿಕೊಂಡಿರುವ ಜ್ಯೋತಿ ಮಹಿಳಾ ಮಂಡಲದ ಪದಾಧಿಕಾರಿಗಳ ಆಯ್ಕೆ ಸಭೆಯು ಬಳಂಜ ಶಾಲಾ ವಠಾರದಲ್ಲಿ ಎ.27 ರಂದು ನಡೆಯಿತು.

ಬಳಂಜ ಶ್ರೀ ಉಮಾಮಹೇಶ್ವರ ಯುವಕ ಮಂಡಲದ ಕಾರ್ಯಚಟುವಟಿಕೆಗಳಿಗೆ ಶಕ್ತಿಯಾಗಿ ಸಮಾಜಮುಖಿಯಾಗಿ ತೊಡಗಿಸಿಕೊಂಡು ರಾಜ್ಯಮಟ್ಟದಲ್ಲಿ ಪ್ರಶಸ್ತಿ ಗಳಿಸಿದ ಹೆಗ್ಗಳಿಕೆ ಜ್ಯೋತಿ ಮಹಿಳಾ ಮಂಡಲಕ್ಕೆ ಸಲ್ಲುತ್ತದೆ.

ಬಳಂಜ ಶಾಲಾ ಅಮೃತ ಮಹೋತ್ಸವ ಸಮಿತಿ‌ ಅಧ್ಯಕ್ಷ ಚಂದ್ರಶೇಖರ್ ಪಿ.ಕೆ, ಬಳಂಜ ಶಿಕ್ಷಣ ಟ್ರಸ್ಟ್ ಅಧ್ಯಕ್ಷ ಮನೋಹರ್ ಬಳಂಜ, ಟ್ರಸ್ಟಿಗಳಾದ ವಿನು ಬಳಂಜ, ರಾಕೇಶ್ ಹೆಗ್ಡೆ ಬಳಂಜ ಇವರ ಮುಂದಾಳತ್ವದಲ್ಲಿ ಜ್ಯೋತಿ ಮಹಿಳಾ ಮಂಡಲದ ಆಯ್ಕೆ ಪ್ರಕ್ರಿಯೆ ನಡೆಯಿತು.

ಅಧ್ಯಕ್ಷರರಾಗಿ ಚೇತನಾ ಸಂತೋಷ್ ಜೈನ್, ಉಪಾಧ್ಯಕ್ಷರಾಗಿ ಜೀವಿತಾ ಮತ್ತು ಸುನೀತಾ ಬಾರ್ದೊಟ್ಟು, ಪ್ರಧಾನ ಕಾರ್ಯದರ್ಶಿಯಾಗಿ ಯಕ್ಷಿತಾ ಗಣೇಶ್, ಜೊತೆ ಕಾರ್ಯದರ್ಶಿಯಾಗಿ ಅಮೃತಾ ಎಸ್ ಕೋಟ್ಯಾನ್ , ಸಂಧ್ಯಾ ಹೆಚ್.ಡಿ, ಕೋಶಾಧಿಕಾರಿ ಭಾರತಿ ಸಂತೋಷ್, ಜೊತೆ ಕೋಶಾಧಿಕಾರಿ ಸೌಭಾಗ್ಯ ದೇವಾಡಿಗ, ಕ್ರೀಡಾ ಕಾರ್ಯದರ್ಶಿ ಧನುಷ ರಾಕೇಶ್ ಹೆಗ್ಡೆ, ಸುಶೀಲಾ ಮೋಹನ್,
ಸಾಂಸ್ಕೃತಿಕ ಕಾರ್ಯದರ್ಶಿ ಪುಷ್ಪ ಗಿರೀಶ್ ಮತ್ತು ವಿಶಾಲ ಜಗದೀಶ್, ಸಂಘಟನಾ ಕಾರ್ಯದರ್ಶಿ ಪ್ರತೀಕ್ಷಾ ಮತ್ತು ಭಾರತಿ ಆಯ್ಕೆಯಾದರು.

ಕಾರ್ಯಕಾರಿ ಸಮಿತಿ ಸದಸ್ಯರಾಗಿ ಮಮತಾ ಯೋಗೀಶ್, ಕಲಾವತಿ, ಅಮಿತಾ ಪುರಂದರ, ಶೃತಿ ರಂಜಿತ್, ಸರಿತಾ ಪ್ರವೀಣ್,
ಜಯಶ್ರೀ ಅಂತರ, ಪ್ರಮೀಳಾ ಸುರೇಶ್, ಅನಿತಾ ಹೆಗ್ಡೆ ಬಳಂಜ, ಲಿಖಿತಾ ಮನೋಹರ್, ಅಮೃತಾ ಮಧುಕರ್, ಯಶೋಧ ಲಾಂತ್ಯಾರು, ನಂದಿನಿ ಸುರೇಶ್, ಅನರ್ಘ್ಯ ದೀಪಕ್, ಅಕ್ಷತಾ ಹೇವ ಆಯ್ಕೆಯಾದರು.

ಗೌರವ ಸಲಹೆಗಾರರಾಗಿ ಪದ್ಮಾವತಿ.ವಿ. ಜೈನ್,ಚಂದನ ಪಡಿವಾಳ್,ಜಲಜಾ ವಿ ಸಾಲಿಯಾನ್, ಲಲಿತಾ ಟೀಚರ್ ,
ರತ್ನ ಹೇವ,ಮಂಗಳ ದೇವಾಡಿಗ, ಸವಿತಾ ಶೆಟ್ಟಿ ಖಂಡಿಗ,ಶೋಭಾ ಕುಲಾಲ್,ಜಯಂತಿ ತಾರಿಪಡ್ಪು,ವೈಶಾಲಿ ಕುರೆಲ್ಯ,ಪುಷ್ಪಾ ಹೇವ ಆಯ್ಕೆಯಾದರು.

Related posts

ಉಜಿರೆ ಪ್ರಾ.ಕೃ.ಪ. ಸಹಕಾರಿ ಸೇವಾ ಸಂಘದ ನೂತನ ಕಟ್ಟಡ ‘ಉತ್ಥಾನ’ ಇದರ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಾಂಗ್ರೇಸ್ ನಾಯಕ ಜಿನ್ನಪ್ಪ ಪೂಜಾರಿ ಕಾಪಿನಡ್ಕ ಬಿಜೆಪಿ ಸೇರ್ಪಡೆ

Suddi Udaya

ಸಾವಿರಾರು ರೈತರ ಕೃಷಿ ಜಮೀನು ಆರ್.ಟಿ.ಸಿ ಯಲ್ಲಿ ವಕ್ಫ್ ಅಸ್ತಿ ಎಂದು ದಾಖಲು: ಕಾಂಗ್ರೆಸ್ ಸರಕಾರದ ಮುಸ್ಲಿಂ ತುಷ್ಟೀಕರಣ ನೀತಿಯಿಂದ ರೈತರು ಆತ್ಮಹತ್ಯೆ ಮಾಡಬೇಕಾದ ಸ್ಥಿತಿ ನಿಮಾ೯ಣ : ಹರೀಶ್ ಪೂಂಜ

Suddi Udaya

ಬೆಳ್ತಂಗಡಿ ರೋಟರೀ ಕ್ಲಬ್ ನಿಂದ ರೂ. 40 ಲಕ್ಷ ಮೌಲ್ಯದ ಕೊಡುಗೆ

Suddi Udaya

ಮಾಲಾಡಿ ಅಂಬೇಡ್ಕರ್ ಜನ್ಮ‌ದಿನಾಚರಣಾ ಸಮಿತಿ ಆಶ್ರಯದಲ್ಲಿ ಬುದ್ದ, ಬಸವ, ಮತ್ತು ಅಂಬೇಡ್ಕರ್ ಜನ್ಮ‌ದಿನಾಚರಣೆ

Suddi Udaya

ಧರ್ಮಸ್ಥಳ ಗ್ರಾಮವನ್ನು ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ಗ್ರಾಮವೆಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಘೋಷಣೆ: ರಾಜ್ಯದ 5 ನಗರದಲ್ಲಿ, ಸುಮಾರು 6078 ಗ್ರಾ.ಪಂ ಗಳಲ್ಲಿ ಮೊದಲ ಗ್ರಾಮವಾಗಿ ಧರ್ಮಸ್ಥಳ ಗ್ರಾಮ ಆಯ್ಕೆ

Suddi Udaya
error: Content is protected !!