July 24, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳಂಜ ಜ್ಯೋತಿ ಮಹಿಳಾ ಮಂಡಲದ ಪದಾಧಿಕಾರಿಗಳ ಆಯ್ಕೆ ಸಭೆ: ಅಧ್ಯಕ್ಷರಾಗಿ ಚೇತನಾ ಜೈನ್, ಪ್ರ.ಕಾರ್ಯದರ್ಶಿಯಾಗಿ ಯಕ್ಷಿತಾ ದೇವಾಡಿಗ

ಬಳಂಜ: ಸಾಂಸ್ಕೃತಿಕ, ಕಲೆ, ಕ್ರೀಡೆ ಹಾಗೂ ಸಾಮಾಜಿಕವಾಗಿ ಗುರುತಿಸಿಕೊಂಡಿರುವ ಜ್ಯೋತಿ ಮಹಿಳಾ ಮಂಡಲದ ಪದಾಧಿಕಾರಿಗಳ ಆಯ್ಕೆ ಸಭೆಯು ಬಳಂಜ ಶಾಲಾ ವಠಾರದಲ್ಲಿ ಎ.27 ರಂದು ನಡೆಯಿತು.

ಬಳಂಜ ಶ್ರೀ ಉಮಾಮಹೇಶ್ವರ ಯುವಕ ಮಂಡಲದ ಕಾರ್ಯಚಟುವಟಿಕೆಗಳಿಗೆ ಶಕ್ತಿಯಾಗಿ ಸಮಾಜಮುಖಿಯಾಗಿ ತೊಡಗಿಸಿಕೊಂಡು ರಾಜ್ಯಮಟ್ಟದಲ್ಲಿ ಪ್ರಶಸ್ತಿ ಗಳಿಸಿದ ಹೆಗ್ಗಳಿಕೆ ಜ್ಯೋತಿ ಮಹಿಳಾ ಮಂಡಲಕ್ಕೆ ಸಲ್ಲುತ್ತದೆ.

ಬಳಂಜ ಶಾಲಾ ಅಮೃತ ಮಹೋತ್ಸವ ಸಮಿತಿ‌ ಅಧ್ಯಕ್ಷ ಚಂದ್ರಶೇಖರ್ ಪಿ.ಕೆ, ಬಳಂಜ ಶಿಕ್ಷಣ ಟ್ರಸ್ಟ್ ಅಧ್ಯಕ್ಷ ಮನೋಹರ್ ಬಳಂಜ, ಟ್ರಸ್ಟಿಗಳಾದ ವಿನು ಬಳಂಜ, ರಾಕೇಶ್ ಹೆಗ್ಡೆ ಬಳಂಜ ಇವರ ಮುಂದಾಳತ್ವದಲ್ಲಿ ಜ್ಯೋತಿ ಮಹಿಳಾ ಮಂಡಲದ ಆಯ್ಕೆ ಪ್ರಕ್ರಿಯೆ ನಡೆಯಿತು.

ಅಧ್ಯಕ್ಷರರಾಗಿ ಚೇತನಾ ಸಂತೋಷ್ ಜೈನ್, ಉಪಾಧ್ಯಕ್ಷರಾಗಿ ಜೀವಿತಾ ಮತ್ತು ಸುನೀತಾ ಬಾರ್ದೊಟ್ಟು, ಪ್ರಧಾನ ಕಾರ್ಯದರ್ಶಿಯಾಗಿ ಯಕ್ಷಿತಾ ಗಣೇಶ್, ಜೊತೆ ಕಾರ್ಯದರ್ಶಿಯಾಗಿ ಅಮೃತಾ ಎಸ್ ಕೋಟ್ಯಾನ್ , ಸಂಧ್ಯಾ ಹೆಚ್.ಡಿ, ಕೋಶಾಧಿಕಾರಿ ಭಾರತಿ ಸಂತೋಷ್, ಜೊತೆ ಕೋಶಾಧಿಕಾರಿ ಸೌಭಾಗ್ಯ ದೇವಾಡಿಗ, ಕ್ರೀಡಾ ಕಾರ್ಯದರ್ಶಿ ಧನುಷ ರಾಕೇಶ್ ಹೆಗ್ಡೆ, ಸುಶೀಲಾ ಮೋಹನ್,
ಸಾಂಸ್ಕೃತಿಕ ಕಾರ್ಯದರ್ಶಿ ಪುಷ್ಪ ಗಿರೀಶ್ ಮತ್ತು ವಿಶಾಲ ಜಗದೀಶ್, ಸಂಘಟನಾ ಕಾರ್ಯದರ್ಶಿ ಪ್ರತೀಕ್ಷಾ ಮತ್ತು ಭಾರತಿ ಆಯ್ಕೆಯಾದರು.

ಕಾರ್ಯಕಾರಿ ಸಮಿತಿ ಸದಸ್ಯರಾಗಿ ಮಮತಾ ಯೋಗೀಶ್, ಕಲಾವತಿ, ಅಮಿತಾ ಪುರಂದರ, ಶೃತಿ ರಂಜಿತ್, ಸರಿತಾ ಪ್ರವೀಣ್,
ಜಯಶ್ರೀ ಅಂತರ, ಪ್ರಮೀಳಾ ಸುರೇಶ್, ಅನಿತಾ ಹೆಗ್ಡೆ ಬಳಂಜ, ಲಿಖಿತಾ ಮನೋಹರ್, ಅಮೃತಾ ಮಧುಕರ್, ಯಶೋಧ ಲಾಂತ್ಯಾರು, ನಂದಿನಿ ಸುರೇಶ್, ಅನರ್ಘ್ಯ ದೀಪಕ್, ಅಕ್ಷತಾ ಹೇವ ಆಯ್ಕೆಯಾದರು.

ಗೌರವ ಸಲಹೆಗಾರರಾಗಿ ಪದ್ಮಾವತಿ.ವಿ. ಜೈನ್,ಚಂದನ ಪಡಿವಾಳ್,ಜಲಜಾ ವಿ ಸಾಲಿಯಾನ್, ಲಲಿತಾ ಟೀಚರ್ ,
ರತ್ನ ಹೇವ,ಮಂಗಳ ದೇವಾಡಿಗ, ಸವಿತಾ ಶೆಟ್ಟಿ ಖಂಡಿಗ,ಶೋಭಾ ಕುಲಾಲ್,ಜಯಂತಿ ತಾರಿಪಡ್ಪು,ವೈಶಾಲಿ ಕುರೆಲ್ಯ,ಪುಷ್ಪಾ ಹೇವ ಆಯ್ಕೆಯಾದರು.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಜ್ಞಾನ ದಿನಾಚರಣೆ

Suddi Udaya

ಮೀನು ಹಿಡಿಯಲು ಹೋಗಿದ್ದ ವ್ಯಕ್ತಿ ನದಿಗೆ ಬಿದ್ದು ಸಾವು

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ವೈದ್ಯಕೀಯ ನೆರವು

Suddi Udaya

ಮೈಸೂರಿನಲ್ಲಿ ಬಾಲಕಿಯರ ವಿಭಾಗದ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟ: ಜಿದ್ದಾಜಿದ್ದಿನ ಪಂದ್ಯಾವಳಿಯಲ್ಲಿ ಸತತ 9ನೇ ಬಾರಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಬಂದಾರು ಶಾಲೆ

Suddi Udaya

ಬೆಳ್ತಂಗಡಿ ಯುವವಾಹಿನಿಯಿಂದ ‘ತುಳುನಾಡ ತುಡರ ಪರ್ಬ ‘

Suddi Udaya

ಎಸ್.ಡಿ.ಎಂ ಕಾಲೇಜು : ‘ಎ.ಸ್.ಡಿ.ಎಂ ನೆನಪಿನಂಗಳ’ ಕಾರ್ಯಕ್ರಮ: ಅರ್ಹ ವಿದ್ಯಾರ್ಥಿನಿಗೆ ವಿದ್ಯಾರ್ಥಿ ವೇತನ ವಿತರಣೆ, ನಿವೃತ್ತ ಡಾ. ಭಾಸ್ಕರ್ ಹೆಗಡೆಯವರಿಗೆ‌ ಸನ್ಮಾನ

Suddi Udaya
error: Content is protected !!