23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿ

ಚುನಾವಣಾ ಕೇಂದ್ರದ ಎಡವಟ್ಟು: ಮತಗಟ್ಟೆ ಸಂಖ್ಯೆ ಬದಲಾವಣೆ: ಕೊಕ್ಕಡದಿಂದ ಮರ್ಕಂಜದ ಮಿತ್ತಡ್ಕಕ್ಕೆ ಬಂದು ಮತ ಚಲಾಯಿಸಿದ ಮತದಾರ

ಕೊಕ್ಕಡದಲ್ಲಿ ಮತ ಚಲಾಯಿಸಬೇಕಿದ್ದ ಮತದಾರರೊಬ್ಬರು ಮತಗಟ್ಟೆ ಸಂಖ್ಯೆ ಬದಲಾಗಿ ಮರ್ಕಂಜದ ಮಿತ್ತಡ್ಕಕ್ಕೆ ಬಂದು ಮತ ಚಲಾಯಿಸಬೇಕಾಗಿ ಬಂದ ಘಟನೆ ಎ.26ರಂದು ನಡೆದಿದೆ.

ಸುಳ್ಯ ವಿಧಾನಸಭಾ ಕ್ಷೇತ್ರದ ಕೊಕ್ಕಡ ಬಳಿಯ ಅಶೋಕ ಎಂಬವರಿಗೆ ಮತಗಟ್ಟೆ ಸಂಖ್ಯೆ 23ರಲ್ಲಿ (ಕಾಪಿನಬಾಗಿಲು ಸೈಂಟ್ ಜೋನ್ ಅನುದಾನಿತ ಹಿ.ಪ್ರಾ.ಶಾಲೆ ಕೌಕ್ರಾಡಿ) ಮತ ಚಲಾಯಿಸಬೇಕಿತ್ತು. ಅಶೋಕರವರು ಈ ಹಿಂದೆ ಪುಣೆಯಲ್ಲಿ ಉದ್ಯೋಗ ಮಾಡಿಕೊಂಡು ಅಲ್ಲೇ ಇದ್ದ ಕಾರಣ ಮತ ಚಲಾಯಿಸಲು ಅಲ್ಲಿಯ ಮತದಾನ ಕೇಂದ್ರವನ್ನು ಆಶ್ರಯಿಸಿದ್ದರು. ಆದರೆ ಅವರು ಇತ್ತೀಚೆಗೆ ಕೊಕ್ಕಡದ ತನ್ನ ಊರಿಗೆ ಬಂದು ನೆಲೆಸಿದ ಕಾರಣ ಮತದಾನ ಕೇಂದ್ರವನ್ನು ಊರಿಗೆ ಬದಲಾಯಿಸಿದ್ದರು. ಮತದಾನ ಕೇಂದ್ರ ಬದಲಾಯಿಸುವ ಸಂದರ್ಭದಲ್ಲಿ ಚುನಾವಣಾ ಕೇಂದ್ರದಲ್ಲಿ ಮತಗಟ್ಟೆ ಸಂಖ್ಯೆ 23ರ ಬದಲು 213 ಎಂದು ನಮೂದಾಗಿ ಎಡವಟ್ಟಾಯಿತು. ಇದರಿಂದಾಗಿ ಅಶೋಕರವರಿಗೆ 23ರ ಮತಗಟ್ಟೆ ಯಲ್ಲಿ ಮತ ಚಲಾಯಿಸಲು ಸಾಧ್ಯವಾಗಲಿಲ್ಲ. ಹೀಗಾಗಿ ಅವರು ವೆಬ್ ಸೈಟ್ ಮೂಲಕ ಸರ್ಚ್ ಮಾಡಿ 213 ಮತಗಟ್ಟೆ ಕೇಂದ್ರವು ಮರ್ಕಂಜದಲ್ಲಿ ಮಿತ್ತಡ್ಕದಲ್ಲಿ ಬರುವುದನ್ನು ಖಚಿತಪಡಿಸಿ ಸುಮಾರು 52ಕಿ.ಮೀ. ದೂರ ಬಂದು ಮಿತ್ತಡ್ಕ ದ.ಕ.ಜಿ.ಪ.ಹಿ.ಪ್ರಾ.ಶಾಲೆಯಲ್ಲಿ ಮತ ಚಲಾಯಿಸಿದರು.

ಅಶೋಕರವರ ಮನೆಯವರು 23ನೇ ಮತಗಟ್ಟೆಯಲ್ಲಿಯೇ ಮತ ಚಲಾಯಿಸಿದ್ದಾರೆ. “ನಾನು ದೇಶಕ್ಕಾಗಿ ಇಲ್ಲಿಗೆ ಬಂದು ಮತ ಚಲಾಯಿಸಿದ್ದೇನೆ” ಎಂದು ಅಲ್ಲಿ ಸೇರಿದ್ದ ಕಾರ್ಯಕರ್ತರೊಡನೆ ತನ್ನ ಮಾತನ್ನು ಹಂಚಿಕೊಂಡಿದ್ದಾರೆ.

Related posts

ವೇಣೂರು ಶ್ರೀ ಮಹಾಲಿಂಗೇಶ್ವರ ದೇವರ ಬ್ರಹ್ಮ ಕಲಶೋತ್ಸವ

Suddi Udaya

ನಕ್ಸಲ್ ವಿಕ್ರಮ್ ಗೌಡ ಎನ್ ಕೌಂಟರ್ ಪ್ರಕರಣ: ತಕ್ಷಣ ಸರ್ಕಾರ ನ್ಯಾಯಾಂಗ ತನಿಖೆಗೆ ಆದೇಶಿಸಬೇಕು: ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಸಂಚಾಲಕ ಶೇಖರ್ ಲಾಯಿಲ ಒತ್ತಾಯ

Suddi Udaya

ಕಲ್ಲೇರಿಯಲ್ಲಿ ಜನಔಷಧಿ ಕೇಂದ್ರ ಶುಭಾರಂಭ

Suddi Udaya

ತಣ್ಣೀರುಪಂತ ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ ಸಾಧನಾ ಪ್ರಶಸ್ತಿ

Suddi Udaya

ಶಾಸಕ ಹರೀಶ್ ಪೂಂಜರಿಗೆ ನೋಟಿಸ್ ನೀಡಿ, ಬಂಧನ ಕೈ ಬಿಟ್ಟು ಸಂಜೆ ಹಿಂದಿರುಗಿದ ಪೊಲೀಸರು; ರಾತ್ರಿ ಹೇಳಿಕೆ ನೀಡಲು ಬೆಳ್ತಂಗಡಿ ಠಾಣೆಗೆ ಬಂದ ಶಾಸಕ ಹರೀಶ್ ಪೂಂಜ

Suddi Udaya

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಕೆ ಪಿ ಸಿ ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವಾರಂ ರಿಂದ ಸಭಾಧ್ಯಕ್ಷ ಯು ಟಿ ಖಾದರ್ ಗೆ ಮನವಿ

Suddi Udaya
error: Content is protected !!