July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದೊಡ್ಡ ಕರಳು ಹಾಗೂ ಮೇದೋಜಿರಕ ಗ್ರಂಥಿ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿರುವ ಖಾಸಗಿ ಕಾಲೇಜಿನ ಉಪನ್ಯಾಸಕ ನಂದಕುಮಾರ್ ರವರ ಚಿಕಿತ್ಸೆಗೆ ನೆರವಾಗಿ

ಬೆಳ್ತಂಗಡಿ : ಖಾಸಗಿ ಕಾಲೇಜಿನ ಉಪನ್ಯಾಸಕರೋರ್ವರು ಕಳೆದ ಅನೇಕ ದಿನಗಳಿಂದ ದೊಡ್ಡ ಕರಳು ಹಾಗು ಮೇದೋಜಿರಕ ಗ್ರಂಥಿ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಾ ಮಂಗಳೂರು ಕೆ ಎಂ ಸಿ ಆಸ್ಪತ್ರೆಯಲ್ಲಿ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಚಿಕಿತ್ಸೆಗಾಗಿ ಸಾರ್ವಜನಿಕರ ಸಹಾಯಧನವನ್ನು ಯಾಚಿಸಿದ್ದಾರೆ.

ಪುದುವೆಟ್ಟು ಗ್ರಾಮದ ನಂದಕುಮಾರ್ (40) ಈ ಕಾಯಿಲೆಯಿಂದ ಬಳಲುತ್ತಿರುವವರು. ವೃತ್ತಿಯಲ್ಲಿ ಉಪನ್ಯಾಸಕರಾಗಿ ಖಾಸಗಿ ಕಾಲೇಜಿನಲ್ಲಿ ದುಡಿಯುತ್ತಿರುವ ಇವರು ತೀರಾ ಬಡ ಕುಟುಂಬದವರು. ಖಾಸಗಿ ಸಂಸ್ಥೆಯಲ್ಲಿ ದುಡಿಯುತ್ತಾ ಬಂದ ಆದಾಯದಲ್ಲಿ ಅಪ್ಪ ಅಮ್ಮ ಹೆಂಡತಿ ಹಾಗೂ 3 ಮತ್ತು 6 ವರ್ಷದ 2 ಹೆಣ್ಣು ಮಕ್ಕಳ ಕುಟುಂಬವನ್ನು ನಿಭಾಯಿಸಿಕೊಂಡು ಹೋಗುತ್ತಿದ್ದರು. ಆದರೆ ಇದೀಗ ತನ್ನ ಪಾಲಿಗೆ ಬಂದ ಕಾಯಿಲೆಯಿಂದಾಗಿ ಇಡೀ ಕುಟುಂಬವೇ ದಿಕ್ಕು ಕಾಣದಂತಾಗಿದೆ.

ಈಗಾಗಲೇ 5 ಲಕ್ಷ ಕ್ಕೂ ಹೆಚ್ಚಿನ ಹಣ ಖರ್ಚಾಗಿದ್ದು ಇನ್ನೂ ಹೆಚ್ಚಿನ ಚಿಕಿತ್ಸೆಗೆ 6 ರಿಂದ 8 ಲಕ್ಷಕ್ಕೂ ಅಧಿಕ ಹಣ ಬೇಕಾಗಿದೆ. ಒಂದೆಡೆ ಕಾಯಿಲೆ, ಇನ್ನೊಂದೆಡೆ ಕುಟುಂಬ ನಿರ್ವಹಣೆ ಈ ಎಲ್ಲದರ ಮಧ್ಯೆ ನಿತ್ಯ ಕಣ್ಣೀರನ್ನು ಸುರಿಸಬೇಕಾದ ಸ್ಥಿತಿಯಲ್ಲಿ ಈ ಕುಟುಂಬವಿದೆ. ಕುಟುಂಬಕ್ಕೆ ಆದಾಯ ಮೂಲವಾಗಿದ್ದ ನಂದಕುಮಾರ್ ಕಳೆದ 2 ತಿಂಗಳಿನಿಂದ ಆಸ್ಪತ್ರೆಯಲ್ಲೇ ಇರುವಂತಾಗಿದೆ. ಈಗಾಗಲೇ ಖರ್ಚಾದ ಸುಮಾರು 5 ಲಕ್ಷ ದ ಚಿಕಿತ್ಸಾ ವೆಚ್ಚಕ್ಕೆ ಅವರ ಕಾಲೇಜು ವಿದ್ಯಾರ್ಥಿಗಳು, ಉಪನ್ಯಾಸಕರು ಹಾಗೂ ಊರಿನ ಅನೇಕ ದಾನಿಗಳು ಸಹಾಯ ಹಸ್ತ ನೀಡಿದ್ದು ಇನ್ನುಳಿದ ಚಿಕಿತ್ಸೆಯ ಖರ್ಚಿಗೆ ದಾನಿಗಳ ನೆರವು ಇಡೀ ಕುಟುಂಬವೇ ಬಯಸುತ್ತಿದೆ.

ಸಹಾಯಧನ ನೀಡುವವರು ಅವರ ಪತ್ನಿ ದಿವ್ಯಾ ನಂದಕುಮಾರ್ ಅವರ ಗೂಗಲ್ ಪೇ ನಂಬರ್ 94811 65791 ಅಥವಾ ದಿವ್ಯಾ ಕೆ ಜೆ ಹೆಸರಿನಲ್ಲಿರುವ ಬ್ಯಾಂಕ್ ಆಫ್ ಬರೋಡ ಖಾತೆ ಸಂಖ್ಯೆ 45150100005291(IFSC CODE – BARBOVJBTHA) ಗೆ ಕಳುಹಿಸಿಕೊಡುವಂತೆ ವಿನಂತಿಯನ್ನು ಮಾಡಿದ್ದಾರೆ.

Related posts

ಜಿಲ್ಲಾ ರಾಜ್ಯೋತ್ಸವ ಪುರಸ್ಕೃತರಾದ ಎಲ್ಲರಿಗೂ ಅಭಿನಂದನೆಗಳು – ಹರೀಶ್ ಪೂಂಜ

Suddi Udaya

ನಾರಾವಿ ಸರಕಾರಿ ಪ್ರೌಢ ಶಾಲೆಯಲ್ಲಿ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳಿಗೆ ಉಚಿತ ಟ್ಯೂಷನ್ ತರಬೇತಿ

Suddi Udaya

ನಡ ಸರಕಾರಿ ಪ.ಪೂ. ಕಾಲೇಜಿಗೆ ಶೇ.85.2 ಫಲಿತಾಂಶ

Suddi Udaya

ಬೆಳ್ತಂಗಡಿ ತಾಲೂಕು ಹಿಂದುಳಿದ ವರ್ಗ ಮೋರ್ಚಾದ ಪೂರ್ಣ ಪ್ರಮಾಣದ ಸಭೆ

Suddi Udaya

ಉಜಿರೆ ಶ್ರೀ ಧ.ಮಂ. ಪದವಿ ಕಾಲೇಜಿನ ಎಂಟರ್ಪ್ರಿನಾರ್ಶಿಪ್ ಡೆವಲಪ್ಮೆಂಟ್ ಸೆಲ್ಲ್ ವಿಭಾಗದ ವತಿಯಿಂದ ಪ್ರೋಡಕ್ಟ್ ಲಾಂಚ್

Suddi Udaya

ಮಾ.23-27: ನಿಡಿಗಲ್ ಲೋಕನಾಡು ಶ್ರೀ ಲೋಕನಾಥೇಶ್ವರ ದೇವರ ವರ್ಷಾವಧಿ ಜಾತ್ರೆ-ನಡ್ವಾಲ್ ಸಿರಿಜಾತ್ರೆ

Suddi Udaya
error: Content is protected !!