23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಸಂತಾನ ಪ್ರದ ನಾಗಕ್ಷೇತ್ರದಲ್ಲಿ ಶ್ರೀ ನಾಗದೇವರ ಬಿಂಬ ಹಾಗೂ ದೈವಗಳ ಪುನರ್ ಪ್ರತಿಷ್ಠೆ ಮಹೋತ್ಸವ

ಧರ್ಮಸ್ಥಳ: ಸಂತಾನ ಪ್ರದ ನಾಗಕ್ಷೇತ್ರ ಕಟ್ಟದಬೈಲು ಇಲ್ಲಿ ಎ. 26ರಂದು ನಡೆದ ಶ್ರೀ ನಾಗದೇವರ ಬಿಂಬ ಹಾಗೂ ನಾಗರಕ್ತೇಶ್ವರಿ ಪ್ರತಿಷ್ಠೆ ಹಾಗೂ ಡೆಕ್ಕರತ್ತಾಯ (ರಕ್ತೇಶ್ವರಿ ), ಪಂಜುರ್ಲಿ ದೈವಗಳ ಪುನರ್ ಪ್ರತಿಷ್ಠೆ ವಿಜೃಂಭಣೆಯಿಂದ ನೆರವೇರಿತು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ರವರಿಗೆ ಶ್ರೀ ನಾಗದೇವರ ಪ್ರಸಾದವನ್ನು ಅರ್ಚಕರಾದ ರವಿ ಕುಮಾರ್ ಭಟ್ ಪಜೀರಡ್ಕ ಇವರು ನೀಡಿ ಗೌರವಿಸಿದರು. ನಂತರ ಮಾತನಾಡಿ ಮುಂದೆಯೂ ನನಗೆ ಶ್ರೀ ನಾಗಸನ್ನಿದಿ ಕಟ್ಟದಬೈಲು ಇಲ್ಲಿಗೆ ಬರುವ ಭಾಗ್ಯ ಸಿಗಲಿ ಎಂದು ದೇವರಲ್ಲಿ ಕೇಳಿಕೊಂಡರು.

ಈ ಸಂದರ್ಭದಲ್ಲಿ ಹಿರಿಯರು ಮತ್ತು ರಾಷ್ಟ್ರೀಯ ತುಳು ಗುಡಿಗಾರ ಸಂಘ ಇದರ ಗೌರವಾಧ್ಯಕ್ಷ ಕೃಷ್ಣಪ್ಪ ಗುಡಿಗಾರ್ ಅಲೆಕ್ಕಿ ಮತ್ತು ಊರ ಸಮಸ್ತ ಬಾಂಧವರು ಉಪಸ್ಥಿತರಿದ್ದರು.

Related posts

ಜ.24: ಗುರುವಾಯನಕೆರೆ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದಲ್ಲಿ ಸನ್ಯಾಸಿ ಹಾಗೂ ಗುಳಿಗ ದೈವದ ಆರೂಢ ಶಿಲಾನ್ಯಾಸ

Suddi Udaya

ಉಜಿರೆ ಎಸ್. ಡಿ. ಎಂ. ಪದವಿ ಪೂರ್ವ ಕಾಲೇಜು, :ಸ್ಪೆಕ್ಟ್ರಾ ಅಸೋಸಿಯೇಷನ್ ಚಟುವಟಿಕೆಗಳ ಉದ್ಘಾಟನೆ.

Suddi Udaya

ಬೆಳ್ತಂಗಡಿ ಸರಕಾರಿ ಪ್ರೌಢಶಾಲೆಯಲ್ಲಿ ವ್ಯಕ್ತಿತ್ವ ವಿಕಸನ ತರಬೇತಿ

Suddi Udaya

ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರೋತ್ಸವ: ಧ್ವಜಾರೋಹಣ

Suddi Udaya

ನಿಟ್ಟಡೆ ಕುಂಭಶ್ರೀ ಪ.ಪೂ. ಕಾಲೇಜಿಗೆ ಶೇ.100 ಫಲಿತಾಂಶ

Suddi Udaya

ಉರುವಾಲುಪದವು ಶ್ರೀ ಮಹಮ್ಮಾಯಿ ದೇವಸ್ಥಾನದ ಪುನರ್ ಪ್ರತಿಷ್ಠಾ ಮಹೋತ್ಸವ : ಡಾ ಡಿ ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!