23.5 C
ಪುತ್ತೂರು, ಬೆಳ್ತಂಗಡಿ
June 8, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳಂಜ ಜ್ಯೋತಿ ಮಹಿಳಾ ಮಂಡಲದ ಪದಾಧಿಕಾರಿಗಳ ಆಯ್ಕೆ ಸಭೆ: ಅಧ್ಯಕ್ಷರಾಗಿ ಚೇತನಾ ಜೈನ್, ಪ್ರ.ಕಾರ್ಯದರ್ಶಿಯಾಗಿ ಯಕ್ಷಿತಾ ದೇವಾಡಿಗ

ಬಳಂಜ: ಸಾಂಸ್ಕೃತಿಕ, ಕಲೆ, ಕ್ರೀಡೆ ಹಾಗೂ ಸಾಮಾಜಿಕವಾಗಿ ಗುರುತಿಸಿಕೊಂಡಿರುವ ಜ್ಯೋತಿ ಮಹಿಳಾ ಮಂಡಲದ ಪದಾಧಿಕಾರಿಗಳ ಆಯ್ಕೆ ಸಭೆಯು ಬಳಂಜ ಶಾಲಾ ವಠಾರದಲ್ಲಿ ಎ.27 ರಂದು ನಡೆಯಿತು.

ಬಳಂಜ ಶ್ರೀ ಉಮಾಮಹೇಶ್ವರ ಯುವಕ ಮಂಡಲದ ಕಾರ್ಯಚಟುವಟಿಕೆಗಳಿಗೆ ಶಕ್ತಿಯಾಗಿ ಸಮಾಜಮುಖಿಯಾಗಿ ತೊಡಗಿಸಿಕೊಂಡು ರಾಜ್ಯಮಟ್ಟದಲ್ಲಿ ಪ್ರಶಸ್ತಿ ಗಳಿಸಿದ ಹೆಗ್ಗಳಿಕೆ ಜ್ಯೋತಿ ಮಹಿಳಾ ಮಂಡಲಕ್ಕೆ ಸಲ್ಲುತ್ತದೆ.

ಬಳಂಜ ಶಾಲಾ ಅಮೃತ ಮಹೋತ್ಸವ ಸಮಿತಿ‌ ಅಧ್ಯಕ್ಷ ಚಂದ್ರಶೇಖರ್ ಪಿ.ಕೆ, ಬಳಂಜ ಶಿಕ್ಷಣ ಟ್ರಸ್ಟ್ ಅಧ್ಯಕ್ಷ ಮನೋಹರ್ ಬಳಂಜ, ಟ್ರಸ್ಟಿಗಳಾದ ವಿನು ಬಳಂಜ, ರಾಕೇಶ್ ಹೆಗ್ಡೆ ಬಳಂಜ ಇವರ ಮುಂದಾಳತ್ವದಲ್ಲಿ ಜ್ಯೋತಿ ಮಹಿಳಾ ಮಂಡಲದ ಆಯ್ಕೆ ಪ್ರಕ್ರಿಯೆ ನಡೆಯಿತು.

ಅಧ್ಯಕ್ಷರರಾಗಿ ಚೇತನಾ ಸಂತೋಷ್ ಜೈನ್, ಉಪಾಧ್ಯಕ್ಷರಾಗಿ ಜೀವಿತಾ ಮತ್ತು ಸುನೀತಾ ಬಾರ್ದೊಟ್ಟು, ಪ್ರಧಾನ ಕಾರ್ಯದರ್ಶಿಯಾಗಿ ಯಕ್ಷಿತಾ ಗಣೇಶ್, ಜೊತೆ ಕಾರ್ಯದರ್ಶಿಯಾಗಿ ಅಮೃತಾ ಎಸ್ ಕೋಟ್ಯಾನ್ , ಸಂಧ್ಯಾ ಹೆಚ್.ಡಿ, ಕೋಶಾಧಿಕಾರಿ ಭಾರತಿ ಸಂತೋಷ್, ಜೊತೆ ಕೋಶಾಧಿಕಾರಿ ಸೌಭಾಗ್ಯ ದೇವಾಡಿಗ, ಕ್ರೀಡಾ ಕಾರ್ಯದರ್ಶಿ ಧನುಷ ರಾಕೇಶ್ ಹೆಗ್ಡೆ, ಸುಶೀಲಾ ಮೋಹನ್,
ಸಾಂಸ್ಕೃತಿಕ ಕಾರ್ಯದರ್ಶಿ ಪುಷ್ಪ ಗಿರೀಶ್ ಮತ್ತು ವಿಶಾಲ ಜಗದೀಶ್, ಸಂಘಟನಾ ಕಾರ್ಯದರ್ಶಿ ಪ್ರತೀಕ್ಷಾ ಮತ್ತು ಭಾರತಿ ಆಯ್ಕೆಯಾದರು.

ಕಾರ್ಯಕಾರಿ ಸಮಿತಿ ಸದಸ್ಯರಾಗಿ ಮಮತಾ ಯೋಗೀಶ್, ಕಲಾವತಿ, ಅಮಿತಾ ಪುರಂದರ, ಶೃತಿ ರಂಜಿತ್, ಸರಿತಾ ಪ್ರವೀಣ್,
ಜಯಶ್ರೀ ಅಂತರ, ಪ್ರಮೀಳಾ ಸುರೇಶ್, ಅನಿತಾ ಹೆಗ್ಡೆ ಬಳಂಜ, ಲಿಖಿತಾ ಮನೋಹರ್, ಅಮೃತಾ ಮಧುಕರ್, ಯಶೋಧ ಲಾಂತ್ಯಾರು, ನಂದಿನಿ ಸುರೇಶ್, ಅನರ್ಘ್ಯ ದೀಪಕ್, ಅಕ್ಷತಾ ಹೇವ ಆಯ್ಕೆಯಾದರು.

ಗೌರವ ಸಲಹೆಗಾರರಾಗಿ ಪದ್ಮಾವತಿ.ವಿ. ಜೈನ್,ಚಂದನ ಪಡಿವಾಳ್,ಜಲಜಾ ವಿ ಸಾಲಿಯಾನ್, ಲಲಿತಾ ಟೀಚರ್ ,
ರತ್ನ ಹೇವ,ಮಂಗಳ ದೇವಾಡಿಗ, ಸವಿತಾ ಶೆಟ್ಟಿ ಖಂಡಿಗ,ಶೋಭಾ ಕುಲಾಲ್,ಜಯಂತಿ ತಾರಿಪಡ್ಪು,ವೈಶಾಲಿ ಕುರೆಲ್ಯ,ಪುಷ್ಪಾ ಹೇವ ಆಯ್ಕೆಯಾದರು.

Related posts

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ವತಿಯಿಂದ ಆರ್ಥಿಕ ನೆರವು

Suddi Udaya

ಕೊಯ್ಯೂರು ಸ .ಹಿ ಪ್ರಾ. ಶಾಲೆ ಮತ್ತು ಅರಣ್ಯ ಇಲಾಖೆಯ ವತಿಯಿಂದ ವನಮಹೋತ್ಸವ ಕಾರ್ಯಕ್ರಮ

Suddi Udaya

ಕರಾಯ: ಖಂಡಿಗ ನಿವಾಸಿ ಅಣ್ಣಿ ಗೌಡ ನಿಧನ

Suddi Udaya

ವಾಣಿ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನಾಚರಣೆ ಮತ್ತು ಎನ್ ಎಸ್ ಎಸ್ ದೈನಂದಿನ ಚಟುವಟಿಕೆಗಳ ಸಮಾರೋಪ

Suddi Udaya

ಮೇಲಂತಬೆಟ್ಟು ಯುವಕ ಜಾಂಡೀಸ್ ನಿಂದ ನಿಧನ

Suddi Udaya

ಕೊಯ್ಯೂರು : ಆದೂರು ಪೇರಲ್ ಶ್ರೀ ಕೃಷ್ಣ ಭಜನಾ ಮಂಡಳಿಯ ವತಿಯಿಂದ ನಗರ ಭಜನಾ ಕಾರ್ಯಕ್ರಮ

Suddi Udaya
error: Content is protected !!