25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ಹಾಗೂ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಘಟಕ ಸುಬ್ರಹ್ಮಣ್ಯ ಇದರ ವತಿಯಿಂದ ದಿಶಾ ಎಸ್. ರವರಿಗೆ ಸನ್ಮಾನ.

ಕುಕ್ಕೆ ಸುಬ್ರಮಣ್ಯ ಏ.27: ಕುಕ್ಕೆ ಸುಬ್ರಮಣ್ಯದ ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ಹಾಗೂ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಘಟಕ ಸುಬ್ರಮಣ್ಯ ವತಿಯಿಂದ ಕಡಬ ತಾಲೂಕಿನ ಕುಮಾರಸ್ವಾಮಿ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿಯಾದ ದಿಶಾ ಎಸ್ ರವರು ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ಪರೀಕ್ಷೆಯಲ್ಲಿ ಉತ್ತಮ ಅಂಕವನ್ನು ಗಳಿಸಿ ಜಿಲ್ಲೆಗೆ ನಾಲ್ಕನೇ ಸ್ಥಾನವನ್ನು ಗಳಿಸಿರುತ್ತಾರೆ. ಇವರ ಸಾಧನೆಯನ್ನು ಗೌರವಿಸಿ ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ಹಾಗೂ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಘಟಕ ಸುಬ್ರಮಣ್ಯ ಇವರ ವತಿಯಿಂದ ಶಾಲು ಹೊದಿಸಿ ಸ್ಮರಣಿಕೆ ನೀಡಿ ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟಿನ ಸಂಸ್ಥಾಪಕರಾದ ಡಾ. ರವಿ ಕಕ್ಕೆ ಪದವು, ರಾಘವೇಂದ್ರ ಹೋಟೆಲ್ ಮಾಲಕರಾದ ಯಜ್ಞೇಶ್ ಆಚಾರ್ಯ, ರೋಟರಿ ಕ್ಲಬ್ಬಿನ ಪೂರ್ವ ವಲಯದ ಅಧ್ಯಕ್ಷರಾದ ಗೋಪಾಲ್ ಎಣ್ಣೆ ಮಜಲ್, ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಇದರ ಅಧ್ಯಕ್ಷರಾದ ವಿಶ್ವನಾಥ ನಡು ತೋಟ, ಗೀತಾ ರವಿ ಕಕ್ಕೆ ಪದವು, ಗಣೇಶ್, ಚಿನ್ಮಯ, ಅಮೃತಾ ಲಕ್ಷ್ಮಿ, ಬಿ.ಎಂ.ಎಸ್ ಆಟೋ ಚಾಲಕಮಾಲಕ ಸಂಘದ ಅಧ್ಯಕ್ಷರಾದ ದಿನೇಶ್ ಶಿರಾಡಿ, ಷಣ್ಮುಖ ಉಪ್ಪರ್ನ, ರೂಪ, ರೋಟರಿ ಕ್ಲಬ್ ನ ನಿಕಟ ಪೂರ್ವ ಅಧ್ಯಕ್ಷರಾದ ವಿಜಯ್ ಕುಮಾರ್ ಅಮೈ ಮತ್ತಿತರರು ಉಪಸ್ಥಿತರಿದ್ದರು.

Related posts

ಜೀವನದಲ್ಲಿ ಜಿಗುಪ್ಸೆ : ಕೊಕ್ಕಡದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಪದ್ಮುಂಜ ಸರ್ಕಾರಿ ಪ್ರೌಢಶಾಲೆಯಲ್ಲಿ 78 ನೇ ಸ್ವಾತಂತ್ರ್ಯ ಆಚರಣೆ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಸಾಮೂಹಿಕ ವಿಷ್ಣುಸಹಸ್ರನಾಮ ಪಠಣ

Suddi Udaya

ಯುವ ಉದ್ಯಮಿ ಅಶ್ರಫ್ ರವರ ಪ್ರಾಯೋಜಕತ್ವದಲ್ಲಿ ಕೋಟ್ಯಾನ್ ರಾಕರ್ಸ್ ತಂಡಕ್ಕೆ ಸಮವಸ್ತ್ರ

Suddi Udaya

ಬೆಳ್ತಂಗಡಿಗೆ ಲಗ್ಗೆ ಇಟ್ಟ ಅತ್ಯಾಧುನಿಕ ‘ಫೋರ್ಸ್ ಅರ್ಬಾನಿಯಾ’-ಐಷಾರಾಮಿ ಪ್ರಯಾಣದ ಹೊಸ ಪರ್ವ ಆರಂಭ

Suddi Udaya

ಉಜಿರೆ: ಸೀತಾಪಹಾರ – ಜಟಾಯು ಮೋಕ್ಷ ತಾಳಮದ್ದಳೆ

Suddi Udaya
error: Content is protected !!