23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ಹಾಗೂ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಘಟಕ ಸುಬ್ರಹ್ಮಣ್ಯ ಇದರ ವತಿಯಿಂದ ದಿಶಾ ಎಸ್. ರವರಿಗೆ ಸನ್ಮಾನ.

ಕುಕ್ಕೆ ಸುಬ್ರಮಣ್ಯ ಏ.27: ಕುಕ್ಕೆ ಸುಬ್ರಮಣ್ಯದ ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ಹಾಗೂ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಘಟಕ ಸುಬ್ರಮಣ್ಯ ವತಿಯಿಂದ ಕಡಬ ತಾಲೂಕಿನ ಕುಮಾರಸ್ವಾಮಿ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿಯಾದ ದಿಶಾ ಎಸ್ ರವರು ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ಪರೀಕ್ಷೆಯಲ್ಲಿ ಉತ್ತಮ ಅಂಕವನ್ನು ಗಳಿಸಿ ಜಿಲ್ಲೆಗೆ ನಾಲ್ಕನೇ ಸ್ಥಾನವನ್ನು ಗಳಿಸಿರುತ್ತಾರೆ. ಇವರ ಸಾಧನೆಯನ್ನು ಗೌರವಿಸಿ ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ಹಾಗೂ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಘಟಕ ಸುಬ್ರಮಣ್ಯ ಇವರ ವತಿಯಿಂದ ಶಾಲು ಹೊದಿಸಿ ಸ್ಮರಣಿಕೆ ನೀಡಿ ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟಿನ ಸಂಸ್ಥಾಪಕರಾದ ಡಾ. ರವಿ ಕಕ್ಕೆ ಪದವು, ರಾಘವೇಂದ್ರ ಹೋಟೆಲ್ ಮಾಲಕರಾದ ಯಜ್ಞೇಶ್ ಆಚಾರ್ಯ, ರೋಟರಿ ಕ್ಲಬ್ಬಿನ ಪೂರ್ವ ವಲಯದ ಅಧ್ಯಕ್ಷರಾದ ಗೋಪಾಲ್ ಎಣ್ಣೆ ಮಜಲ್, ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಇದರ ಅಧ್ಯಕ್ಷರಾದ ವಿಶ್ವನಾಥ ನಡು ತೋಟ, ಗೀತಾ ರವಿ ಕಕ್ಕೆ ಪದವು, ಗಣೇಶ್, ಚಿನ್ಮಯ, ಅಮೃತಾ ಲಕ್ಷ್ಮಿ, ಬಿ.ಎಂ.ಎಸ್ ಆಟೋ ಚಾಲಕಮಾಲಕ ಸಂಘದ ಅಧ್ಯಕ್ಷರಾದ ದಿನೇಶ್ ಶಿರಾಡಿ, ಷಣ್ಮುಖ ಉಪ್ಪರ್ನ, ರೂಪ, ರೋಟರಿ ಕ್ಲಬ್ ನ ನಿಕಟ ಪೂರ್ವ ಅಧ್ಯಕ್ಷರಾದ ವಿಜಯ್ ಕುಮಾರ್ ಅಮೈ ಮತ್ತಿತರರು ಉಪಸ್ಥಿತರಿದ್ದರು.

Related posts

ಖೇಲೋ ಇಂಡಿಯಾ ವೇಟ್  ಲಿಫ್ಟಿಂಗ್ ಚಾಂಪಿಯನ್ ಷಿಪ್ ನಲ್ಲಿ: ನಿಡ್ಲೆಯ ಪ್ರತ್ಯುಶ್ ರವರಿಗೆ ಕಂಚಿನ ಪದಕ

Suddi Udaya

ಗ್ರಾಮ ಪಂಚಾಯತ್ ಆಸ್ತಿ ತೆರಿಗೆಯನ್ನು ಏಕಕಾಲಕ್ಕೆ ಪಾವತಿಸಿ: ಇಓ ಭವಾನಿಶಂಕರ್

Suddi Udaya

ಚಾಮುಂಡೇಶ್ವರಿ ಯುವಕ ಮಂಡಲ, ಶ್ರೀ ಕ್ಷೇತ್ರ ಮುಂಡೂರು ಪ್ರಾಯೋಜಕತ್ವದಲ್ಲಿ ಮೈರೊಳ್ತಡ್ಕ ವಿವೇಕಾನಂದನಗರದಲ್ಲಿ ನೂತನ ಬಸ್ ತಂಗುದಾಣ ಲೋಕಾರ್ಪಣೆ

Suddi Udaya

ಉಜಿರೆ: ಎಸ್.ಡಿ.ಎಂ ಜೂನಿಯರ್ ಇಂಡಿಯನ್ ರೆಡ್ ಕ್ರಾಸ್ ಹಾಗೂ ಯುತ್ ರೆಡ್ ಕ್ರಾಸ್ ನಿಂದ ಪ್ರಥಮ ಚಿಕಿತ್ಸೆಯ ಬಗ್ಗೆ ಕಾರ್ಯಾಗಾರ

Suddi Udaya

ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರಿಗೆ ಕುತ್ಲೂರು ಸರಕಾರಿ ಶಾಲೆಯ ಕೈತೋಟದಲ್ಲಿ ಬೆಳೆದ ತರಕಾರಿ ಹಸ್ತಾಂತರ

Suddi Udaya

ಮಡಂತ್ಯಾರು: ಬಿದ್ದ ಪರ್ಸ್ ಹಿಂದುರುಗಿಸಿ ಕೊಟ್ಟು ಮಾನವೀಯತೆ ಮೆರೆದ ಆಟೋ ಚಾಲಕ ಇರ್ಷಾದ್

Suddi Udaya
error: Content is protected !!