23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಾಧಕರು

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ” ಸಲ್ಯೂಟ್ ದಿ ಸೈಲೆಂಟ್ ಸ್ಟಾರ್ ” ಕಾರ್ಯಕ್ರಮ

ಜೆಸಿಐ ಭಾರತದ ವಲಯ 15 ಹಮ್ಮಿಕೊಂಡಿರುವ ವಿನೂತನ ಕಾರ್ಯಕ್ರಮವಾದ “ಸಲ್ಯೂಟ್ ದಿ ಸೈಲೆಂಟ್ ಸ್ಟಾರ್ ” ನ ವಿಭಾಗದಲ್ಲಿ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ, ಬಳಂಜ ಇಲ್ಲಿಯ ನಿವೃತ್ತ ಮುಖ್ಯೋಪಾಧ್ಯಾಯರಾದ ಶ್ರೀಮತಿ ಧರ್ನಮ್ಮ ಟೀಚರ್ ಮತ್ತು ವೇಣೂರು ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಶ್ರೀಮತಿ ಕೇಶವತಿ ಡಿ ಇವರನ್ನು ಎ.23ರಂದು ಬೆಳ್ತಂಗಡಿ ಜೆಸಿಐ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗುರುತಿಸಿ ಸನ್ಮಾನಿಸಲಾಯಿತು.

ಜೆಸಿಐ ಬೆಳ್ತಂಗಡಿಯ ಅಧ್ಯಕ್ಷರಾದ ರಂಜಿತ್ ಎಚ್ ಡಿ ಕಾರ್ಯಕ್ರಮ ದ ಅಧ್ಯಕ್ಷತೆಯನ್ನು ವಹಿಸಿ, ಎಲ್ಲರನ್ನು ಸ್ವಾಗತಿಸಿದರು.

ಬೆಳ್ತಂಗಡಿ ತಾಲ್ಲೂಕು ಚುನಾವಣಾಧಿಕಾರಿ ಹಾಗೂ ತಾಲ್ಲೂಕು ಪಂಚಾಯತ್ ಬೆಳ್ತಂಗಡಿಯ ಕಾರ್ಯನಿರ್ವಹಣಾಧಿಕಾರಿ ವೈಜಣ್ಣ ಹಾಗೂ ತಾಲ್ಲೂಕು ಪಂಚಾಯತ್ ಬೆಳ್ತಂಗಡಿಯ ವ್ಯವಸ್ಥಾಪಕ ಪ್ರಶಾಂತ್ ಡಿ, ಮಾಯಾ ಹಿರಿಯ ಪ್ರಾಥಮಿಕ ಶಾಲೆ ಬೆಳಾಲಿನ ಶಿಕ್ಷಕರು ಹಾಗೂ ಜಿಲ್ಲಾ ಸ್ವೀಪ್ ಸಮಿತಿಯ ಮುಖ್ಯ ತರಬೇತುದಾರ ಯೋಗೇಶ್ ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು.

ವೇದಿಕೆಯಲ್ಲಿ ವಲಯ ಉಪಾಧ್ಯಕ್ಷರಾದ ಶಂಕರ್ ರಾವ್ ಉಪಸ್ಥಿತರಿದ್ದರು. ತಾಲ್ಲೂಕು ಪಂಚಾಯತ್ ಅಧಿಕಾರಿ ಮಂಜು, SKDRDP ಯೋಜನಾಧಿಕಾರಿ ಜಯಾನಂದ ಬಳಂಜ, ಜೆಸಿಐ ಬೆಳ್ತಂಗಡಿಯ ಪೂರ್ವ ಅಧ್ಯಕ್ಷರುಗಳಾದ ನಾರಾಯಣ ಶೆಟ್ಟಿ, ಪ್ರಶಾಂತ್ ಲಾಯಿಲ, ಉಪಾಧ್ಯಕ್ಷರುಗಳಾದ ಆಶಾ ಪ್ರಶಾಂತ್, ಶೈಲೇಶ್, ಸದಸ್ಯರಾದ ರಜತ್, ಜೆಜೆಸಿ ತ್ರಿಷಾ ಹಾಗೂ ಸದಸ್ಯರು ಉಪಸ್ಥಿತರಿದ್ದರು.

ವೇದಿಕೆ ಆಹ್ವಾನವನ್ನು ಉಪಾಧ್ಯಕ್ಷರಾದ ಸುಧೀರ್ ಕೆ ನ್ ಹಾಗೂ ಜೆಸಿ ವಾಣಿಯನ್ನು ಜೆಜೆಸಿ ಸದಸ್ಯರಾದ ದೀಪ್ತಿ, ಸನ್ಮಾನ ಪತ್ರವನ್ನು ಲೇಡಿ ಜೆಸಿ ಸಂಯೋಜಕರಾದ ಶ್ರುತಿ ರಂಜಿತ್ ಮತ್ತು ಜೆಜೆಸಿ ಅಧ್ಯಕ್ಷರಾದ ಸಮನ್ವೀತ್ ಕುಮಾರ್ ಇವರು ವಾಚಿಸಿದರು. ನಿಕಟ ಪೂರ್ವ ಅಧ್ಯಕ್ಷರಾದ ಶಂಕರ್ ರಾವ್ ತಮ್ಮ ಅನಿಸಿಕೆಗಳೊಂದಿಗೆ ಧನ್ಯವಾದ ಸಲ್ಲಿಸಿದರು.

Related posts

ಬೆಳಾಲು ಪ್ರೌಢಶಾಲೆ ಪೋಷಕರ ಸಮಾವೇಶ

Suddi Udaya

ಸೆ.15 ರಂದು ನಡೆಯಲಿರುವ ಮಾನವ ಸರಪಳಿ ಕಾರ್ಯಕ್ರಮದ ಅಂಗವಾಗಿ ಪ.ಪಂ. ಅಧ್ಯಕ್ಷ ಜಯಾನಂದ ಗೌಡರಿಂದ ಪ್ರಚಾರಕ್ಕೆ ಚಾಲನೆ

Suddi Udaya

ಉಜಿರೆ ಶ್ರೀ. ಧ.ಮಂ. ವಸತಿ ಪದವಿ ಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಶ್ರವಣ ಮತ್ತು ಮಾತು ಪರಿಶೀಲನಾ ಶಿಬಿರ

Suddi Udaya

ಪುಂಜಾಲಕಟ್ಟೆ ಸರಕಾರಿ ಪ.ಪೂ. ಕಾಲೇಜಿಗೆ ಶೇ. 95.7 ಫಲಿತಾಂಶ

Suddi Udaya

ಕನ್ಯಾಡಿ: ಎಸ್.ವೈ. ಎಸ್ ಕನ್ಯಾಡಿ ಯುನಿಟ್ ಕೋಶಾಧಿಕಾರಿ ಇದ್ರೀಸ್ ನಿಧನ

Suddi Udaya
error: Content is protected !!