30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿಸರ್ಕಾರಿ ಇಲಾಖಾ ಸುದ್ದಿ

ನಾಳೆ (ಎ.30) ನಾರಾವಿ ಉಪ ವಲಯಾರಣ್ಯಾಧಿಕಾರಿ ಕುಶಾಲಪ್ಪ ಗೌಡರವರಿಗೆ ಸೇವಾ ನಿವೃತ್ತಿ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಅರಣ್ಯ ಇಲಾಖೆಯಲ್ಲಿ ಕಳೆದ 38 ವರ್ಷಗಳಿಂದ ಹಲವು ಹುದ್ದೆಗಳನ್ನು ಅಲಂಕರಿಸಿ ಕರ್ತವ್ಯ ನಿರ್ವಹಿಸಿದ ಉಪ ವಲಯಾರಣ್ಯಧಿಕಾರಿ ಕುಶಾಲಪ್ಪ ಗೌಡರವರು ಎ.30 ರಂದು ಸೇವೆಯಿಂದ ನಿವೃತ್ತಿ ಹೊಂದಲಿದ್ದಾರೆ.

ಕುಶಾಲಪ್ಪ ಗೌಡರವರು 1986 ಜೂನ್ ತಿಂಗಳಲ್ಲಿ ಅರಣ್ಯ ವೀಕ್ಷಕರಾಗಿ ಹೆಬ್ರಿ ವಲಯದಲ್ಲಿ ಸೇರ್ಪೆಡೆಗೊಂಡು ನಂತರ ಹಂತ ಹಂತವಾಗಿ ಮುಂಭಡ್ತಿಗೊಂಡು ಉಪವಲಯ ಅರಣ್ಯ ಅಧಿಕಾರಿಯಾಗಿ ಸೇವೆ ಸಲ್ಲಿಸಿ 2024 ಎಪ್ರಿಲ್ 30 ರಂದು ಸೇವಾ ನಿವೃತ್ತಿ ಹೊಂದಲಿದ್ದಾರೆ.

ಹೆಬ್ರಿ, ಶಂಕರನಾರಾಯಣ, ಅರಣ್ಯ ರಕ್ಷಕ ತರಬೇತಿ ಶಾಲೆ ಮಡಿಕೇರಿ ಕುಶಾಲನಗರ, ಕುದುರೆಮುಖ ರಾಷ್ಟ್ರೀಯ ಉದ್ಯನವನ ಬೆಳ್ತಂಗಡಿ ವನ್ಯಜೀವಿ ವಿಭಾಗ, ಹೆಬ್ರಿ ವಲಯ ಪೆರ್ಡೂರು, ಕುಕ್ಕೆಹಳ್ಳಿ, ಪ್ರಸ್ತುತ 2021 ರಿಂದ ವೇಣೂರು ಅರಣ್ಯ ವಲಯದಲ್ಲಿ ಉಪ ಅರಣ್ಯ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ.

ಒರ್ವ ದಕ್ಷ, ಪ್ರಾಮಾಣಿಕ ಅಧಿಕಾರಿಯಾಗಿ ಸಮಾಜದಲ್ಲಿ ಗುರುತಿಸಿಕೊಂಡಿದ್ದರು. ಇವರ ಸೇವೆಯನ್ನು ಗುರುತಿಸಿ ಹಲವಾರು ಪ್ರಶಸ್ತಿ ಸಮ್ಮಾನಗಳು ದೊರಕಿದೆ.

ಮೂಲತ ಸುಳ್ಯ ತಾಲೂಕಿನ ಕೊಡಿಯಾಳ ಗ್ರಾಮದ ಕಲ್ಪಡ ನಿವಾಸಿಯಾಗಿ ಪತ್ನಿ ಟಿ. ತಾರದೇವಿ ಮತ್ತು ಇಬ್ಬರು ಪುತ್ರಿಯರಾದ ವಿದ್ಯಾಶ್ರೀ ಮತ್ತು ಭವ್ಯಶ್ರೀ ಅವರೊಂದಿಗೆ ಸುಖಿ ಸಂಸಾರ ನಡೆಸುತ್ತಿದ್ದಾರೆ.

Related posts

ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿ: ರಾಷ್ಟ್ರದ ಚೈತನ್ಯದ ಮೇಲಿನ ದಾಳಿ: ಅನಿಲ್ ಕುಮಾರ್ ಯು.

Suddi Udaya

ತಾಲೂಕು ಮಟ್ಟದ ಖೋ-ಖೋ ಸ್ಪರ್ಧೆ: ನಡ ಸರಕಾರಿ ಪಿ.ಯು. ಕಾಲೇಜು ಬಾಲಕರ ಹಾಗೂ ಬಾಲಕಿಯರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ತಣ್ಣೀರುಪಂತ: ನವಚೇತನಾ ತೋಟಗಾರಿಕಾ ರೈತ ಉತ್ಪಾದಕರ ಕಂಪೆನಿ ನೂತನ ಕಟ್ಟಡದ ಉದ್ಘಾಟನೆ

Suddi Udaya

ಗೋಳಿಯಂಗಡಿ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಈದ್ ಆಚರಣೆ

Suddi Udaya

ಕುಂದಾಪುರ ಲೋಕೋಪಯೋಗಿ ಇಲಾಖೆ: ಎ.ಇ.ಇ.ಯಾಗಿ ರಾಮಣ್ಣಗೌಡ ಮುಂಭಡ್ತಿ – ಅಧಿಕಾರ ಸ್ವೀಕಾರ

Suddi Udaya

8 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ವಾಜಿದ್ ಪಾಷನನ್ನು ಹೊಳೆನರಸೀಪುರದಲ್ಲಿ ಬಂಧಿಸಿದ ಧಮ೯ಸ್ಥಳ ಪೊಲೀಸರು

Suddi Udaya
error: Content is protected !!