April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿಸರ್ಕಾರಿ ಇಲಾಖಾ ಸುದ್ದಿ

ನಾಳೆ (ಎ.30) ನಾರಾವಿ ಉಪ ವಲಯಾರಣ್ಯಾಧಿಕಾರಿ ಕುಶಾಲಪ್ಪ ಗೌಡರವರಿಗೆ ಸೇವಾ ನಿವೃತ್ತಿ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಅರಣ್ಯ ಇಲಾಖೆಯಲ್ಲಿ ಕಳೆದ 38 ವರ್ಷಗಳಿಂದ ಹಲವು ಹುದ್ದೆಗಳನ್ನು ಅಲಂಕರಿಸಿ ಕರ್ತವ್ಯ ನಿರ್ವಹಿಸಿದ ಉಪ ವಲಯಾರಣ್ಯಧಿಕಾರಿ ಕುಶಾಲಪ್ಪ ಗೌಡರವರು ಎ.30 ರಂದು ಸೇವೆಯಿಂದ ನಿವೃತ್ತಿ ಹೊಂದಲಿದ್ದಾರೆ.

ಕುಶಾಲಪ್ಪ ಗೌಡರವರು 1986 ಜೂನ್ ತಿಂಗಳಲ್ಲಿ ಅರಣ್ಯ ವೀಕ್ಷಕರಾಗಿ ಹೆಬ್ರಿ ವಲಯದಲ್ಲಿ ಸೇರ್ಪೆಡೆಗೊಂಡು ನಂತರ ಹಂತ ಹಂತವಾಗಿ ಮುಂಭಡ್ತಿಗೊಂಡು ಉಪವಲಯ ಅರಣ್ಯ ಅಧಿಕಾರಿಯಾಗಿ ಸೇವೆ ಸಲ್ಲಿಸಿ 2024 ಎಪ್ರಿಲ್ 30 ರಂದು ಸೇವಾ ನಿವೃತ್ತಿ ಹೊಂದಲಿದ್ದಾರೆ.

ಹೆಬ್ರಿ, ಶಂಕರನಾರಾಯಣ, ಅರಣ್ಯ ರಕ್ಷಕ ತರಬೇತಿ ಶಾಲೆ ಮಡಿಕೇರಿ ಕುಶಾಲನಗರ, ಕುದುರೆಮುಖ ರಾಷ್ಟ್ರೀಯ ಉದ್ಯನವನ ಬೆಳ್ತಂಗಡಿ ವನ್ಯಜೀವಿ ವಿಭಾಗ, ಹೆಬ್ರಿ ವಲಯ ಪೆರ್ಡೂರು, ಕುಕ್ಕೆಹಳ್ಳಿ, ಪ್ರಸ್ತುತ 2021 ರಿಂದ ವೇಣೂರು ಅರಣ್ಯ ವಲಯದಲ್ಲಿ ಉಪ ಅರಣ್ಯ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ.

ಒರ್ವ ದಕ್ಷ, ಪ್ರಾಮಾಣಿಕ ಅಧಿಕಾರಿಯಾಗಿ ಸಮಾಜದಲ್ಲಿ ಗುರುತಿಸಿಕೊಂಡಿದ್ದರು. ಇವರ ಸೇವೆಯನ್ನು ಗುರುತಿಸಿ ಹಲವಾರು ಪ್ರಶಸ್ತಿ ಸಮ್ಮಾನಗಳು ದೊರಕಿದೆ.

ಮೂಲತ ಸುಳ್ಯ ತಾಲೂಕಿನ ಕೊಡಿಯಾಳ ಗ್ರಾಮದ ಕಲ್ಪಡ ನಿವಾಸಿಯಾಗಿ ಪತ್ನಿ ಟಿ. ತಾರದೇವಿ ಮತ್ತು ಇಬ್ಬರು ಪುತ್ರಿಯರಾದ ವಿದ್ಯಾಶ್ರೀ ಮತ್ತು ಭವ್ಯಶ್ರೀ ಅವರೊಂದಿಗೆ ಸುಖಿ ಸಂಸಾರ ನಡೆಸುತ್ತಿದ್ದಾರೆ.

Related posts

ಧರ್ಮಸ್ಥಳ ಅಶೋಕನಗರದಲ್ಲಿ 75 ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಕಾಜೂರು ಶಿಕ್ಷಣ ಸಂಸ್ಥೆಯಲ್ಲಿ “ಅಲೀಫ್ ಡೇ” ಸಮಾರಂಭ

Suddi Udaya

ಬಿಜೆಪಿ ಶಿರ್ಲಾಲು ಬೂತ್ ಸಂಖ್ಯೆ 9ರ ಅಧ್ಯಕ್ಷರಾಗಿ ವಿಜಯಕುಮಾರ್, ಕಾರ್ಯದರ್ಶಿಯಾಗಿ ರಮೇಶ್ ಎನ್ ಆಯ್ಕೆ

Suddi Udaya

ನ.19: ಬೆಳ್ತಂಗಡಿಯಲ್ಲಿ ದೇಸಿ ನಾಯಿ ಮತ್ತು ಬೆಕ್ಕಿನ ಮರಿಗಳ ಉಚಿತ ದತ್ತು ಕೊಡುವ ಶಿಬಿರ

Suddi Udaya

ಇಳಂತಿಲ ಗ್ರಾ.ಪಂ. ನಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಬೆಳ್ತಂಗಡಿ: ಗಣೇಶ್ ಕ್ಲಿನಿಕಲ್ ಲ್ಯಾಬೋರೇಟರಿ ರಕ್ತಪರೀಕ್ಷಾ ಕೇಂದ್ರ ಸ್ಥಳಾಂತರಗೊಂಡು ಶುಭಾರಂಭ

Suddi Udaya
error: Content is protected !!