22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿಸರ್ಕಾರಿ ಇಲಾಖಾ ಸುದ್ದಿ

ನಾಳೆ (ಎ.30) ನಾರಾವಿ ಉಪ ವಲಯಾರಣ್ಯಾಧಿಕಾರಿ ಕುಶಾಲಪ್ಪ ಗೌಡರವರಿಗೆ ಸೇವಾ ನಿವೃತ್ತಿ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಅರಣ್ಯ ಇಲಾಖೆಯಲ್ಲಿ ಕಳೆದ 38 ವರ್ಷಗಳಿಂದ ಹಲವು ಹುದ್ದೆಗಳನ್ನು ಅಲಂಕರಿಸಿ ಕರ್ತವ್ಯ ನಿರ್ವಹಿಸಿದ ಉಪ ವಲಯಾರಣ್ಯಧಿಕಾರಿ ಕುಶಾಲಪ್ಪ ಗೌಡರವರು ಎ.30 ರಂದು ಸೇವೆಯಿಂದ ನಿವೃತ್ತಿ ಹೊಂದಲಿದ್ದಾರೆ.

ಕುಶಾಲಪ್ಪ ಗೌಡರವರು 1986 ಜೂನ್ ತಿಂಗಳಲ್ಲಿ ಅರಣ್ಯ ವೀಕ್ಷಕರಾಗಿ ಹೆಬ್ರಿ ವಲಯದಲ್ಲಿ ಸೇರ್ಪೆಡೆಗೊಂಡು ನಂತರ ಹಂತ ಹಂತವಾಗಿ ಮುಂಭಡ್ತಿಗೊಂಡು ಉಪವಲಯ ಅರಣ್ಯ ಅಧಿಕಾರಿಯಾಗಿ ಸೇವೆ ಸಲ್ಲಿಸಿ 2024 ಎಪ್ರಿಲ್ 30 ರಂದು ಸೇವಾ ನಿವೃತ್ತಿ ಹೊಂದಲಿದ್ದಾರೆ.

ಹೆಬ್ರಿ, ಶಂಕರನಾರಾಯಣ, ಅರಣ್ಯ ರಕ್ಷಕ ತರಬೇತಿ ಶಾಲೆ ಮಡಿಕೇರಿ ಕುಶಾಲನಗರ, ಕುದುರೆಮುಖ ರಾಷ್ಟ್ರೀಯ ಉದ್ಯನವನ ಬೆಳ್ತಂಗಡಿ ವನ್ಯಜೀವಿ ವಿಭಾಗ, ಹೆಬ್ರಿ ವಲಯ ಪೆರ್ಡೂರು, ಕುಕ್ಕೆಹಳ್ಳಿ, ಪ್ರಸ್ತುತ 2021 ರಿಂದ ವೇಣೂರು ಅರಣ್ಯ ವಲಯದಲ್ಲಿ ಉಪ ಅರಣ್ಯ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ.

ಒರ್ವ ದಕ್ಷ, ಪ್ರಾಮಾಣಿಕ ಅಧಿಕಾರಿಯಾಗಿ ಸಮಾಜದಲ್ಲಿ ಗುರುತಿಸಿಕೊಂಡಿದ್ದರು. ಇವರ ಸೇವೆಯನ್ನು ಗುರುತಿಸಿ ಹಲವಾರು ಪ್ರಶಸ್ತಿ ಸಮ್ಮಾನಗಳು ದೊರಕಿದೆ.

ಮೂಲತ ಸುಳ್ಯ ತಾಲೂಕಿನ ಕೊಡಿಯಾಳ ಗ್ರಾಮದ ಕಲ್ಪಡ ನಿವಾಸಿಯಾಗಿ ಪತ್ನಿ ಟಿ. ತಾರದೇವಿ ಮತ್ತು ಇಬ್ಬರು ಪುತ್ರಿಯರಾದ ವಿದ್ಯಾಶ್ರೀ ಮತ್ತು ಭವ್ಯಶ್ರೀ ಅವರೊಂದಿಗೆ ಸುಖಿ ಸಂಸಾರ ನಡೆಸುತ್ತಿದ್ದಾರೆ.

Related posts

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವದ ಚಪ್ಪರ ಮೂಹೂರ್ತ

Suddi Udaya

ನಿಡ್ಲೆ 18ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿ ರಚನೆ: ಅಧ್ಯಕ್ಷರಾಗಿ ತಿಮ್ಮಪ್ಪ ಗೌಡ ನೂಜಿಲ

Suddi Udaya

ಅರಸಿನಮಕ್ಕಿಯ ಪ್ರಮುಖ್ ತುಳುಪುಳೆ ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ 4ನೇ ಸ್ಥಾನ

Suddi Udaya

ಪಾಲೇದು: ಮನೆ ಮನೆಗಳಲ್ಲಿ ಪರಿಸರ ದಿನ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ಸಭೆ

Suddi Udaya

ಬೆಳಾಲು ಎನ್ ಎಸ್ ಎಸ್ ಶಿಬಿರಾರ್ಥಿ ಮತ್ತು ಪಂಚಾಯತ್ ವತಿಯಿಂದ ಸ್ವಚ್ಛತಾ ಅಭಿಯಾನ

Suddi Udaya
error: Content is protected !!