September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶುಭಾರಂಭ

ಉಜಿರೆಯ ಬೆನಕ ಆಸ್ಪತ್ರೆಯಲ್ಲಿ ರೇಡಿಯೋಲಜಿ ವಿಭಾಗ ಮತ್ತು ನೂತನ ಸಿ.ಟಿ. ಸ್ಕ್ಯಾನಿಂಗ್ ಪ್ರಾರಂಭೋತ್ಸವ

ಉಜಿರೆ: ಗ್ರಾಮೀಣ ಪ್ರದೇಶದಲ್ಲಿ ಗುಣಮಟ್ಟದ ಆರೋಗ್ಯ ಸೇವೆಯನ್ನು ಒದಗಿಸುವ ಬದ್ಧತೆಯೊಂದಿಗೆ ಆರಂಭವಾದ ಉಜಿರೆಯ ಬೆನಕ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯು ಸಮಾಜದ ಅಗತ್ಯತೆಗಳಿಗೆ ಸದಾ ಸ್ಪಂದಿಸುತ್ತಾ ಬಂದಿದೆ. ಈ ನಿಟ್ಟಿನಲ್ಲಿ ಪಟ್ಟಣಗಳಿಗೆ ಸೀಮಿತವಾದ ಬೆನಕ ಆಸ್ಪತ್ರೆಯ ಉನ್ನತೀಕರಿಸಿದ ರೇಡಿಯೋಲಜಿ ವಿಭಾಗ ಮತ್ತು ಸಿ.ಟಿ.ಸ್ಕ್ಯಾನಿಂಗ್ ಸೇವೆಯು ಎ.30ರಂದು ಶುಭಾರಂಭಗೊಂಡಿದೆ.

ಉಡುಪಿ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿಯವರ ದಿವ್ಯ ಹಸ್ತದಿಂದ ಉದ್ಘಾಟಿಸಿ ಶುಭಹಾರೈಸಿದರು.

ಅಧ್ಯಕ್ಷತೆಯನ್ನು ಬೆನಕ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ.ಗೋಪಾಲಕೃಷ್ಣ ಭಟ್ ವಹಿಸಿದರು.

ಮುಖ್ಯ ಅತಿಥಿಯಾಗಿ ಮಂಗಳೂರಿನ ಖ್ಯಾತ ರೇಡಿಯೊಲಾಗಿಸ್ಟ್ ಹಾಗೂ ಬಲ್ಮಠ ಡಯಾಗ್ನಿಸ್ಟಿಕ್ ಮತ್ತು ಸಂಶೋಧನಾ ಕೇಂದ್ರದ ವ್ಯವಸ್ಥಾಪನಾ ನಿರ್ದೇಶಕರಾದ ಡಾ.ಅತೀಂದ್ರ ಭಟ್ ಉಪಸ್ಥಿತರಿದ್ದರು.

ವೇದಿಕೆಯಲ್ಲಿ ಹಿರಿಯರಾದ ಸೀತರಾಮ್ ಭಟ್, ಡಾ.ಭಾರತಿ ಗೋಪಾಲಕೃಷ್ಣ ಭಟ್ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಶಾಸಕರಾದ ಪ್ರತಾಪಸಿಂಹ ನಾಯಕ್, ಪ್ರಮುಖರಾದ ಡಾ.ಪ್ರದೀಪ್ ಕುಮಾರ್, ಅನಂತ್ ಭಟ್ ಮಚ್ಚಿಮಲೆ, ಡಾ.ಎಂ.ಎಂ ದಯಾಕರ್, ಸೀತರಾಮ ತೋಳ್ಪಡಿತ್ತಾಯ, ಡಾ.ಜಯಕುಮಾರ್ ಶೆಟ್ಟಿ, ವಿನಾಯಕ್ ರಾವ್, ಬ್ಯಾಂಕ್ ಬರೋಡದ ಪ್ರಬಂಧಕ ಸುಖೇಶ್ ಹಾಗೂ ವೈದ್ಯರು, ವಿವಿಧ ಕ್ಷೇತ್ರದ ಗಣ್ಯರು ಉಪಸ್ಥಿತರಿದ್ದರು.

ಎಸ್.ಜಿ ಭಟ್ ಸ್ವಾಗತಿಸಿದರು, ಡಾ.ಅಂಕಿತಾ ಭಟ್ ಪ್ರಾರ್ಥಿಸಿದರು.

Related posts

ಬೆಳ್ತಂಗಡಿ: ಎಸ್.ಐ.ಟಿ. ಪೊಲೀಸ್ ಠಾಣೆಗೆ ದೂರುದಾರ ಜಯಂತ್ ಟಿ. ಭೇಟಿ

Suddi Udaya

ಉಜಿರೆ : ಬೆನಕ ಹೆಲ್ತ್ ಸೆಂಟರ್ ನಲ್ಲಿ ಯಶಸ್ವಿನಿ ಯೋಜನೆಯಲ್ಲಿ ಯಶಸ್ವಿ ಮೊಣಕಾಲಿನ ಬದಲಿ ಶಸ್ತ್ರ ಚಿಕಿತ್ಸೆ

Suddi Udaya

ಆರಂಬೋಡಿ ಗ್ರಾಮ‌ ಪಂಚಾಯತ್ 2024-25ನೇ ಸಾಲಿನ ಪ್ರಥಮ‌ ಸುತ್ತಿನ ಗ್ರಾಮ ಸಭೆ

Suddi Udaya

ಮರೋಡಿ: ಗ್ರಾ.ಪಂ ಮಾಜಿ ಸದಸ್ಯ ರವಿರಾಜ್ ಬಳ್ಳಾಲ್ ಕಾಂಗ್ರೇಸ್ ಸೇರ್ಪಡೆ

Suddi Udaya

ಪೆರಿಂಜೆ ಎಸ್‌ಡಿಎಂ ಅನುದಾನಿತ ಪ್ರೌಢಶಾಲೆಗೆ ಶೇ.96 ಫಲಿತಾಂಶ

Suddi Udaya

ವಿಧಾನಸಭೆ ಚುನಾವಣೆ ಹಿನ್ನೆಲೆ ವಿವಿಧ ಚೆಕ್ ಪೋಸ್ಟ್ ಗಳಿಗೆ ಮತ್ತು ನಕ್ಸಲ್ ಪೀಡಿತ ಪ್ರದೇಶಗಳಿಗೆಭೇಟಿ

Suddi Udaya
error: Content is protected !!