ಗ್ರಾಮಾಂತರ ಸುದ್ದಿಚಿತ್ರ ವರದಿ

ಕಾಜೂರು ಉರೂಸ್ ಪ್ರಯುಕ್ತ ಕಾನೂನು ಸುವ್ಯವಸ್ಥೆ ಬಗ್ಗೆ ಪೊಲೀಸ್ ಅಧಿಕಾರಿಗಳ ಜೊತೆ ಸಭೆ

ಬೆಳ್ತಂಗಡಿ; ಇತಿಹಾಸ ಪ್ರಸಿದ್ಧ ಧಾರ್ಮಿಕ ಸಮನ್ವಯ ಕೇಂದ್ರ, ದಕ್ಷಿಣ ಭಾರತದ ಅಜ್ಮೀರ್ ಎಂದೇ ಪ್ರಸಿದ್ಧಿ ಪಡೆದಿರುವ ಕಾಜೂರು ಮಖಾಂ ಶರೀಫ್ ನಲ್ಲಿ ಈ‌ ವರ್ಷದ ಉರೂಸ್ ಮಹಾ ಸಂಭ್ರಮವು ಮೇ.3 ರಿಂದ ಆರಂಭಗೊಂಡು ಮೇ.12 ರವರೆಗೆ ನಡೆಯಲಿದ್ದು, ಇದರ ಕಾನೂನು ಸುವ್ಯವಸ್ಥೆ ಬಗ್ಗೆ ಚರ್ಚಿಸಲು ಪೊಲೀಸ್ ಅಧಿಕಾರಿಗಳ ವಿಶೇಷ ಸಭೆಯು ಏ.30 ರಂದು ಕಾಜೂರಿನ ಆಡಳಿತ ಕಚೇರಿಯಲ್ಲಿ ನಡೆಯಿತು.

ಅಧ್ಯಕ್ಷತೆ ವಹಿಸಿದ್ದ ಕಾಜೂರು ಉರೂಸ್ ಸಮಿತಿ ಅಧ್ಯಕ್ಷ ಕೆ.ಯು ಇಬ್ರಾಹಿಂ ಅವರು ಮಾತನಾಡಿ, ಕಾಜೂರು ಉರೂಸ್ ಸಂಭ್ರಮಕ್ಕೆ ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಅಲ್ಲದೆ ಕೇರಳ, ತಮಿಳುನಾಡು ಮೊದಲಾದೆಡೆಗಳಿಂದಲೂ ಅನೇಕ ಭಕ್ತರು ಜಾತಿ ಧರ್ಮದ ಭೇದವಿಲ್ಲದೆ ಆಗಮಿಸುತ್ತಾರೆ. ಅವರಿಗೆ ತೊಂದರೆಯಾಗದ ರೀತಿಯಲ್ಲಿ ನಾವು ವ್ಯವಸ್ಥೆ ರೂಪಿಸಲಿದ್ದೇವೆ. ಈ‌ ವೇಳೆ ಪೊಲೀಸ್ ಇಲಾಖೆಯಿಂದಲೂ ನಮಗೆ ಹೆಚ್ಚಿನ ಸಹಕಾರ ಬೇಕಾಗಿದೆ ಎಂದರು.


ಸಭೆ ನಡೆಸಿಕೊಟ್ಟ ಬೆಳ್ತಂಗಡಿ ಪೊಲೀಸ್ ಇನ್ಸ್‌ಪೆಕ್ಟರ್ ಬಿ.ಜಿ ಸುಬ್ಬಾಪುರಮಠ್ ಅವರು ಮಾತನಾಡಿ, ಕಾಜೂರು ಕ್ಷೇತ್ರದ ಬಗ್ಗೆ ಅನೇಕ ಕಡೆಗಳಲ್ಲಿ ಪ್ರಸಿದ್ಧಿ ಇರುವುದನ್ನು ನಾನು ಮನಗಂಡಿದ್ದೇನೆ. ಇಲ್ಲಿನ ಅಭಿಮಾನಿಗಳು ಹಾಗೂ ಭಕ್ತರು ಇರುವುದನ್ನೂ ನಾನು ಕೇಳಿ ತಿಳಿದುಕೊಂಡಿದ್ದೇನೆ.
ಇಲ್ಲಿನ ಉರೂಸ್ ಕಾರ್ಯಕ್ರಮ ಸುಸೂತ್ರವಾಗಿ ನಡೆಯಬೇಕಾಗಿದೆ. ಅದಕ್ಕೆ ಪೊಲೀಸ್ ಇಲಾಖೆ ಕಡೆಯಿಂದ ಹೆಚ್ಚಿನ ಕಾಳಜಿ ವಹಿಸಲಾಗುವುದು. ಸಮಿತಿ ಮತ್ತು‌ ಈ ಊರಿನವರ ಸಹಕಾರ ಇದ್ದರೆ ಮಾತ್ರ ಈ ಕಾರ್ಯ ಯಶಸ್ವಿಯಾಗಿ ಮಾಡಬಹುದು. ಒಟ್ಟಿನಲ್ಲಿ ಈ ವರ್ಷದ ಉರೂಸ್ ಕಾರ್ಯಕ್ರಮಗಳನ್ನು ಕಾನೂನು ಸುವ್ಯವಸ್ಥೆಯ ದೃಷ್ಟಿಯಿಂದ ಹಳಿ ತಪ್ಪದಂತೆ ನಾವೆಲ್ಲ ನಡೆಸಿಕೊಡೋಣ ಎಂದರು.


ಈ ಸಂದರ್ಭ ಉರೂಸ್ ಸಮಿತಿ ವತಿಯಿಂದ ಇನ್ಸ್‌ಪೆಕ್ಟರ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಪೊಲೀಸ್ ಇಲಾಖೆಯಿಂದ ರೈಟರ್ ಧನಂಜಯ್, ಎಸ್.ಬಿ ಆನಂದ್ ಭಾಗಿಯಾಗಿದ್ದರು.
ಉರೂಸ್ ಸಮಿತಿ ಉಪಾಧ್ಯಕ್ಷ ಅಬ್ದುಲ್ ಅಝೀಝ್ ಝುಹುರಿ ಕಿಲ್ಲೂರು, ಪ್ರಧಾನ ಕಾರ್ಯದರ್ಶಿ ಜೆ‌.ಹೆಚ್ ಅಬೂಬಕ್ಕರ್ ಸಿದ್ದೀಕ್ ಕಾಜೂರು, ಜೊತೆ ಕಾರ್ಯದರ್ಶಿ ಶಾಹುಲ್ ಹಮೀದ್ ಕಿಲ್ಲೂರು, ಕೋಶಾಧಿಕಾರಿ ಕೆ.ಎಮ್ ಕಮಾಲ್ ಕಾಜೂರು ಹಾಗೂ ಕಾಜೂರು ಕಿಲ್ಲೂರು ಜಂಟಿ ಉರೂಸ್ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ದ.ಕ ಜಿಲ್ಲೆಯಲ್ಲಿ ಕಾಡಿದ ಕುಡಿಯುವ ನೀರಿನ ಸಮಸ್ಯೆ ಜಿಲ್ಲಾಡಳಿತ ಕೂಡಲೇ ಶಾಸಕರುಗಳ ಸಭೆ ಕರೆಯುವಂತೆ ಎಂಎಲ್‌ಸಿ ಪ್ರತಾಪಸಿಂಹ ನಾಯಕ್ ಆಗ್ರಹ

Suddi Udaya

ಧರ್ಮಸ್ಥಳದಿಂದ ಮೂರು ಹೊಸ ರೂಟ್ ಬಸ್ ಗಳಿಗೆ ಶಾಸಕ ಹರೀಶ್ ಪೂಂಜರಿಂದ ಚಾಲನೆ

Suddi Udaya

ಬೆಳ್ತಂಗಡಿ ವಿ.ಹಿಂ.ಪ ಬಜರಂಗದಳ ಪ್ರಖಂಡದ ವತಿಯಿಂದ ಬಕ್ರೀದ್ ಹಬ್ಬದ ಸಂದರ್ಭ ಗೋ ಹತ್ಯೆಯನ್ನು ಖಂಡಿಸಿ ಪೋಲಿಸ್ ಠಾಣೆ ಮತ್ತು ಗೋ ಆಸ್ಪತ್ರೆಯ ಅಧಿಕಾರಿಗಳಿಗೆ ಮನವಿ

Suddi Udaya

ಉಜಿರೆ ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೇವಸ್ಥಾನ ಶ್ರೀ ಕ್ಷೇತ್ರ ಎರ್ನೋಡಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಅರಿಕೆಗುಡ್ಡೆ ವನದುರ್ಗ ದೇವಳದ ಆವರಣದಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಗಿಡ ನಾಟಿ ಕಾರ್ಯಕ್ರಮ

Suddi Udaya

ತೆಂಕಕಾರಂದೂರು : ಗಿಂಡಾಡಿ ಎಂಬಲ್ಲಿ ಚಿರತೆ ಪ್ರತ್ಯಕ್ಷ

Suddi Udaya
error: Content is protected !!