25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ (ಶ್ರೀ ದುರ್ಗಾದೇವಿ) ದೇವಸ್ಥಾನಕ್ಕೆ ಶ್ರೀ ಮಜ್ಜಗದ್ಗುರು ಶ್ರೀ ವಿಧುಶೇಖರಭಾರತೀ ಸ್ವಾಮೀಜಿ ಭೇಟಿ: ಚಂಡಿಕಾ ಹೋಮ, ಪ್ರಸನ್ನಪೂಜೆ, ಪಾದಪೂಜೆ

ಮಿತ್ತಬಾಗಿಲು: ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಭಾರತೀತೀರ್ಥಮಹಾಸ್ವಾಮಿ ಪರಮಾನುಗ್ರಹಪುರಸ್ಸರ ಆಶೀರ್ವಾದಗಳಿಂದ ತತ್ಕರ ಕಮಲ ಸಂಜತರಾದ ಶ್ರೀ ಮಜ್ಜಗದ್ಗುರು ಶ್ರೀ ವಿಧುಶೇಖರಭಾರತೀ ಸ್ವಾಮೀಜಿರವರು ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ (ಶ್ರೀ ದುರ್ಗಾದೇವಿ) ದೇವಸ್ಥಾನಕ್ಕೆ ಎ.30 ರಂದು ಭೇಟಿ ನೀಡಿ ಚಂಡಿಕಾ ಹೋಮದ ಪೂರ್ಣಾಹುತಿ ಹಾಗೂ ಶ್ರೀ ದುರ್ಗಾಪರಮೇಶ್ವರೀ ದೇವರ ಪೂಜೆಯನ್ನು ಮಾಡಿ ಆಶೀರ್ವದಿಸಿದರು.

ಬೆಳಿಗ್ಗೆ ಶ್ರೀ ಚಂಡಿಕಾ ಹೋಮ, ಶ್ರೀ ಜಗದ್ಗುರುಗಳ ಆಗಮನ, ಸ್ವಾಗತ, ಮೆರವಣಿಗೆ, ಚಂಡಿಕಾ ಹೋಮದ ಪೂರ್ಣಾಹುತಿ, ಶ್ರೀ ದುರ್ಗಾಪರಮೇಶ್ವರೀ ದೇವರಿಗೆ ಶ್ರೀ ಜಗದ್ಗುತುಗಳಿಂದ ಪ್ರಸನ್ನಪೂಜೆ, ಕ್ಷೇತ್ರದರ್ಶನ, ಧೂಳಿ ಪಾದಪೂಜೆ, ಫಲಸಮರ್ಪಣೆ, , ಪಾದಪೂಜಾ-ಭಿಕ್ಷಾವಂದನೆ ಸೇವೆಗಳು, ಸಮಸ್ತ ಭಕ್ತಜನರಿಗೆ ಶ್ರೀ ಜಗದ್ಗುತುಗಳಿಂದ ಫಲಮಂತ್ರಾಕ್ಷತೆಯು ನಡೆಯಿತು.

ಈ ಸಂದರ್ಭದಲ್ಲಿ ಬ್ರಹ್ಮ ಕಲಶೋತ್ಸವ ಸಮಿತಿಯ ಅಧ್ಯಕ್ಷ ಬಿಕೆ ಧನಂಜಯ ರಾವ್, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಬಿಕೆ ಲೋಕೇಶ್ ರಾವ್, ಬ್ರಹ್ಮ ಕಲಶೋತ್ಸವದ ಸಮಿತಿಯ ಪ್ರಧಾನ ಕಾರ್ಯದರ್ಶಿ ದಾಸಪ್ಪಗೌಡ ಕಾಂಜಾನು, ಪ್ರಧಾನ ಸಂಘಟನಾ ಕಾರ್ಯದರ್ಶಿ ವಿನಯ ಚಂದ್ರ ಸೇನರಬೆಟ್ಟು, ಆಡಳಿತ ಅಧಿಕಾರಿ ಮೋಹನ್ ಬಂಗೇರ, ಕೋಶಾಧಿಕಾರಿ ವಾಸುದೇವ ರಾವ್ ಕಕ್ಕೆನೇಜಿ, ಜೀರ್ಣೋದ್ಧಾರ ಮಹಿಳಾ ಸಮಿತಿಯ ಅಧ್ಯಕ್ಷೆ ಜ್ಯೋತಿಲಕ್ಷ್ಮಿ ಕಿಲ್ಲೂರು, ಹಾಗೂ ಬ್ರಹ್ಮಕಲಶೋತ್ಸವ ಮತ್ತು ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿಗಳು, ಭಕ್ತರು ಉಪಸ್ಥಿತರಿದ್ದರು.

Related posts

ಚಾರ್ಮಾಡಿ ಗ್ರಾಮ ಪಂಚಾಯತ್ ನಲ್ಲಿ ಜನಸ್ಪಂದನ ಕಾರ್ಯಕ್ರಮ

Suddi Udaya

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಕಳೆಂಜ ಕ್ರಿಶ್ಚಿಯನ್  ಬ್ರದರ್‍ಸ್ ಸಂಘದ ವತಿಯಿಂದ ವೈದ್ಯಕೀಯ ನೆರವು

Suddi Udaya

ಪಣೆಜಾಲು ಶ್ರೀ ಸ್ಟಾರ್ ಯುವಕ ಮಂಡಲದಿಂದ 31ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಮತ್ತು ಮೊಸರು ಕುಡಿಕೆ ಉತ್ಸವ

Suddi Udaya

ಲಾಯಿಲ: ಪ್ರಸನ್ನ ಆಯುರ್ವೇದ ಮತ್ತು ಆಸ್ಪತ್ರೆ ಕಾಲೇಜು ಹಾಗೂ ಪ್ರಸನ್ನ ನರ್ಸಿಂಗ್ ಕಾಲೇಜಿನ ಪದವಿ ಪ್ರದಾನ ಸಮಾರಂಭ

Suddi Udaya

ಸುಯ೯ ಕ್ಷೇತ್ರಕ್ಕೆ ಕೃಷಿ ಸಚಿವ ಚೆಲುವರಾಯಸ್ವಾಮಿ ಭೇಟಿ: ವಿಶೇಷ ಪೂಜೆ ಸಲ್ಲಿಸಿದ ಸಚಿವ ದಂಪತಿ

Suddi Udaya
error: Content is protected !!