25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಲಾಯಿಲ: ಸ.ಹಿ.ಪ್ರಾ. ಶಾಲಾ ಮುಖ್ಯ ಶಿಕ್ಷಕಿ ರಾಜೇಶ್ವರಿ ಬಿ.ಎಸ್. ಸೇವಾ ನಿವೃತ್ತಿ

ಲಾಯಿಲ: ಲಾಯಿಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ರಾಜೇಶ್ವರಿ ಬಿ.ಎಸ್ ಎ.30ರಂದು ಸೇವಾ ನಿವೃತ್ತಿ ಹೊಂದಿದರು.

ಇವರು ಬಾಜಿಮಾರು ನಿವೃತ್ತ ಮುಖ್ಯ ಶಿಕ್ಷಕ ಸೇಸಪ್ಪ ಗೌಡ ಮತ್ತು ವಸುಮತಿ ದಂಪತಿ ಪುತ್ರಿ.ಬದನಾಜೆ ಶಾಲೆಯಲ್ಲಿ ಕಿರಿಯ ಪ್ರಾಥಮಿಕ ಶಿಕ್ಷಣ, ಉಜಿರೆ ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳಲ್ಲಿ ಮುಂದಿನ ಶಿಕ್ಷಣ ಮುಗಿಸಿ 1985ರಿಂದ 1998ರ ವರೆಗೆ ಬದನಾಜೆ ಅಂಗನವಾಡಿ ಕಾರ್ಯಕರ್ತೆಯಾಗಿ ದುಡಿದು ತಾಲೂಕಿನಲ್ಲಿ ಉತ್ತಮ ಅಂಗನವಾಡಿ ಕಾರ್ಯಕರ್ತೆ ಪ್ರಶಸ್ತಿಯನ್ನು ಪಡೆದು ನಂತರ, 1998ರಿಂದ ಪ್ರಾಥಮಿಕ ಶಾಲಾ ಶಿಕ್ಷಕಿಯಾಗಿ ಸರಕಾರಿ ಉನ್ನತೀಕರಿಸಿದ ಶಾಲೆ ಕೊಯ್ಯೂರು ಕಸಬಾದಲ್ಲಿ ಪ್ರಾರಂಭಿಸಿ ಸ್ಕೌಡ್-ಗೈಡ್ಸ್ನಲ್ಲಿ ಹಿಮಾಲಯ ಉಡುಬ್ಯಾಜ್ ಪ್ರಶಸ್ತಿಯನ್ನು ಪಡೆದಿರುತ್ತಾರೆ.

ಬಳಿಕ ಲಾಯಿಲ ಪಡ್ಲಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೇವೆ ಸಲ್ಲಿಸಿ ಎ.30ರಂದು ಸೇವಾ ನಿವೃತ್ತ ಹೊಂದಿರುತ್ತಾರೆ. ೧೯೮೪-೮೫ನೇ ಎರಡು ವರ್ಷದಲ್ಲಿ ಮಹಿಳಾ ಯಕ್ಷಗಾನದಲ್ಲಿ ಭಾಗವಹಿಸಿ ಅನೇಕ ಕಡೆ ಪ್ರದರ್ಶನ, ಗಮಕ, ನೃತ್ಯ, ರಂಗಕಲೆ, ನಾಟಕಗಳಲ್ಲಿ ಸೇವೆಯಲ್ಲಿ ತಮ್ಮನ್ನು ಗುರುತಿಸಿಕೊಂಡವರು.

Related posts

ಬೆಳ್ತಂಗಡಿ: ಆಳ್ವಾಸ್ ಪ್ರಗತಿ, ಬೃಹತ್ ಉದ್ಯೋಗ ಮಾಹಿತಿ ಶಿಬಿರ; ಶಾಸಕ ಹರೀಶ್ ಪೂಂಜರವರಿಂದ ಚಾಲನೆ

Suddi Udaya

ಪಟ್ರಮೆ ಬಸ್ ನಿಲ್ದಾಣದ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅಂಚೆ ಕಛೇರಿ ಶ್ರೀ ವಿಷ್ಣು ಕಾಂಪ್ಲೆಕ್ಸ್‌ನ ಕಟ್ಟಡಕ್ಕೆ ಸ್ಥಳಾಂತರ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರ ಪತ್ತೆಗಾಗಿ ಪೊಲೀಸರ ಮನವಿ

Suddi Udaya

ಕೊಕ್ಕಡ: ತೆಂಕುಬೈಲು ಪತ್ತನಾಜೆಯ ವಾರ್ಷಿಕ ನೇಮೋತ್ಸವದ ಪೂರ್ವಭಾವಿ ಸಭೆ ಹಾಗೂ ಸೇವಾ ಸಮಿತಿ ರಚನೆ

Suddi Udaya

ನಾವೂರು ಗ್ರಾ.ಪಂ.ನಲ್ಲಿ ಮಹಾತ್ಮಾ ಗಾಂಧೀಜಿ ಜನ್ಮ ದಿನಾಚರಣೆ ಹಾಗೂ ಉದ್ಯೋಗ ಖಾತರಿ ಯೋಜನೆ ಗ್ರಾಮ ಸಭೆ

Suddi Udaya

ಫೆ.24: ಗುರುವಾಯನಕೆರೆಯಲ್ಲಿ ನಿಸರ್ಗ ಆರ್ಕೇಡ್ ಲೋಕಾರ್ಪಣೆ

Suddi Udaya
error: Content is protected !!