September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಲಾಯಿಲ: ಸ.ಹಿ.ಪ್ರಾ. ಶಾಲಾ ಮುಖ್ಯ ಶಿಕ್ಷಕಿ ರಾಜೇಶ್ವರಿ ಬಿ.ಎಸ್. ಸೇವಾ ನಿವೃತ್ತಿ

ಲಾಯಿಲ: ಲಾಯಿಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ರಾಜೇಶ್ವರಿ ಬಿ.ಎಸ್ ಎ.30ರಂದು ಸೇವಾ ನಿವೃತ್ತಿ ಹೊಂದಿದರು.

ಇವರು ಬಾಜಿಮಾರು ನಿವೃತ್ತ ಮುಖ್ಯ ಶಿಕ್ಷಕ ಸೇಸಪ್ಪ ಗೌಡ ಮತ್ತು ವಸುಮತಿ ದಂಪತಿ ಪುತ್ರಿ.ಬದನಾಜೆ ಶಾಲೆಯಲ್ಲಿ ಕಿರಿಯ ಪ್ರಾಥಮಿಕ ಶಿಕ್ಷಣ, ಉಜಿರೆ ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳಲ್ಲಿ ಮುಂದಿನ ಶಿಕ್ಷಣ ಮುಗಿಸಿ 1985ರಿಂದ 1998ರ ವರೆಗೆ ಬದನಾಜೆ ಅಂಗನವಾಡಿ ಕಾರ್ಯಕರ್ತೆಯಾಗಿ ದುಡಿದು ತಾಲೂಕಿನಲ್ಲಿ ಉತ್ತಮ ಅಂಗನವಾಡಿ ಕಾರ್ಯಕರ್ತೆ ಪ್ರಶಸ್ತಿಯನ್ನು ಪಡೆದು ನಂತರ, 1998ರಿಂದ ಪ್ರಾಥಮಿಕ ಶಾಲಾ ಶಿಕ್ಷಕಿಯಾಗಿ ಸರಕಾರಿ ಉನ್ನತೀಕರಿಸಿದ ಶಾಲೆ ಕೊಯ್ಯೂರು ಕಸಬಾದಲ್ಲಿ ಪ್ರಾರಂಭಿಸಿ ಸ್ಕೌಡ್-ಗೈಡ್ಸ್ನಲ್ಲಿ ಹಿಮಾಲಯ ಉಡುಬ್ಯಾಜ್ ಪ್ರಶಸ್ತಿಯನ್ನು ಪಡೆದಿರುತ್ತಾರೆ.

ಬಳಿಕ ಲಾಯಿಲ ಪಡ್ಲಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೇವೆ ಸಲ್ಲಿಸಿ ಎ.30ರಂದು ಸೇವಾ ನಿವೃತ್ತ ಹೊಂದಿರುತ್ತಾರೆ. ೧೯೮೪-೮೫ನೇ ಎರಡು ವರ್ಷದಲ್ಲಿ ಮಹಿಳಾ ಯಕ್ಷಗಾನದಲ್ಲಿ ಭಾಗವಹಿಸಿ ಅನೇಕ ಕಡೆ ಪ್ರದರ್ಶನ, ಗಮಕ, ನೃತ್ಯ, ರಂಗಕಲೆ, ನಾಟಕಗಳಲ್ಲಿ ಸೇವೆಯಲ್ಲಿ ತಮ್ಮನ್ನು ಗುರುತಿಸಿಕೊಂಡವರು.

Related posts

ಬೆಳ್ತಂಗಡಿ ಪತ್ರಕರ್ತರ ಸಂಘಕ್ಕೆ ವಾರ್ತಾಧಿಕಾರಿ ಖಾದರ್‌ಷಾ ಭೇಟಿ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ಪ್ರ.ದ. ಕಾಲೇಜಿನಲ್ಲಿ ರೋವರ್ಸ್ ರೇಂಜರ್ಸ್ ಘಟಕ ಉದ್ಘಾಟನೆ

Suddi Udaya

ಕಾಪಿನಡ್ಕ: ಧಾರಕಾರವಾಗಿ ಸುರಿದ ಮಳೆಯಿಂದ ಮನೆಯಂಗಳಕ್ಕೆ ನುಗ್ಗಿದ ನೀರು

Suddi Udaya

ಯೋಗಾಸನ ಸ್ಪರ್ಧೆ: ವಾಣಿ ಕಾಲೇಜಿನ ವಿದ್ಯಾರ್ಥಿ ಮೋಹಿತ್ ಏಷ್ಯನ್ ಗೇಮ್ಸ್ ಗೆ ಆಯ್ಕೆ

Suddi Udaya

ಮಾಜಿ ಶಾಸಕ ಬಂಗೇರರ ನಿಧನಕ್ಕೆ ಬೆಳ್ತಂಗಡಿ ಮೊಬೈಲ್ ರಿಟೇಲರ್ ಅಸೋಸಿಯೇಷನ್ ನಿಂದ ನಾಳೆ ಅಂಗಡಿ ಮುಂಗಟ್ಟು ಬಂದ್ ಮಾಡಿ ಶ್ರದ್ಧಾಂಜಲಿ ಅರ್ಪಣೆ

Suddi Udaya

ಬಲ್ಲಾಳರಾಯನ ದುರ್ಗಕ್ಕೆ ಟ್ರಕ್ಕಿಂಗ್ ಬಂದು ಕಾಡಿನ ಮಧ್ಯೆ ದಾರಿ ತಪ್ಪಿದ ಕಾಲೇಜು ವಿದ್ಯಾರ್ಥಿಗಳ ತಂಡ

Suddi Udaya
error: Content is protected !!