July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಲಾಯಿಲ: ಸ.ಹಿ.ಪ್ರಾ. ಶಾಲಾ ಮುಖ್ಯ ಶಿಕ್ಷಕಿ ರಾಜೇಶ್ವರಿ ಬಿ.ಎಸ್. ಸೇವಾ ನಿವೃತ್ತಿ

ಲಾಯಿಲ: ಲಾಯಿಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ರಾಜೇಶ್ವರಿ ಬಿ.ಎಸ್ ಎ.30ರಂದು ಸೇವಾ ನಿವೃತ್ತಿ ಹೊಂದಿದರು.

ಇವರು ಬಾಜಿಮಾರು ನಿವೃತ್ತ ಮುಖ್ಯ ಶಿಕ್ಷಕ ಸೇಸಪ್ಪ ಗೌಡ ಮತ್ತು ವಸುಮತಿ ದಂಪತಿ ಪುತ್ರಿ.ಬದನಾಜೆ ಶಾಲೆಯಲ್ಲಿ ಕಿರಿಯ ಪ್ರಾಥಮಿಕ ಶಿಕ್ಷಣ, ಉಜಿರೆ ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳಲ್ಲಿ ಮುಂದಿನ ಶಿಕ್ಷಣ ಮುಗಿಸಿ 1985ರಿಂದ 1998ರ ವರೆಗೆ ಬದನಾಜೆ ಅಂಗನವಾಡಿ ಕಾರ್ಯಕರ್ತೆಯಾಗಿ ದುಡಿದು ತಾಲೂಕಿನಲ್ಲಿ ಉತ್ತಮ ಅಂಗನವಾಡಿ ಕಾರ್ಯಕರ್ತೆ ಪ್ರಶಸ್ತಿಯನ್ನು ಪಡೆದು ನಂತರ, 1998ರಿಂದ ಪ್ರಾಥಮಿಕ ಶಾಲಾ ಶಿಕ್ಷಕಿಯಾಗಿ ಸರಕಾರಿ ಉನ್ನತೀಕರಿಸಿದ ಶಾಲೆ ಕೊಯ್ಯೂರು ಕಸಬಾದಲ್ಲಿ ಪ್ರಾರಂಭಿಸಿ ಸ್ಕೌಡ್-ಗೈಡ್ಸ್ನಲ್ಲಿ ಹಿಮಾಲಯ ಉಡುಬ್ಯಾಜ್ ಪ್ರಶಸ್ತಿಯನ್ನು ಪಡೆದಿರುತ್ತಾರೆ.

ಬಳಿಕ ಲಾಯಿಲ ಪಡ್ಲಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೇವೆ ಸಲ್ಲಿಸಿ ಎ.30ರಂದು ಸೇವಾ ನಿವೃತ್ತ ಹೊಂದಿರುತ್ತಾರೆ. ೧೯೮೪-೮೫ನೇ ಎರಡು ವರ್ಷದಲ್ಲಿ ಮಹಿಳಾ ಯಕ್ಷಗಾನದಲ್ಲಿ ಭಾಗವಹಿಸಿ ಅನೇಕ ಕಡೆ ಪ್ರದರ್ಶನ, ಗಮಕ, ನೃತ್ಯ, ರಂಗಕಲೆ, ನಾಟಕಗಳಲ್ಲಿ ಸೇವೆಯಲ್ಲಿ ತಮ್ಮನ್ನು ಗುರುತಿಸಿಕೊಂಡವರು.

Related posts

ಶ್ರೀರಾಮ ಜನ್ಮ ಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಆಯೋಧ್ಯೆಯಲ್ಲಿ ಶ್ರೀರಾಮ ದೇವರ ಪ್ರತಿಷ್ಠಾ ಮಹೋತ್ಸವ ಆಮಂತ್ರಣ ಹಾಗೂ ಮನೆ ಮನೆಗೆ ಮಂತ್ರಾಕ್ಷತೆ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ನ ವತಿಯಿಂದ ವೈದ್ಯಕೀಯ ನೆರವು

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಕೃಷಿ ಉದ್ಯಮಿ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಗರ್ಡಾಡಿ: ಹಳ್ಳಿಂಜದಲ್ಲಿ ಗುಡ್ಡ ಕುಸಿದು ಮನೆಗೆ ಹಾನಿ, ಅಧಿಕಾರಿಗಳ ಭೇಟಿ

Suddi Udaya

ಪಜಿರಡ್ಕ ಸೇತುವೆಯ ಡ್ಯಾಮ್ ಸ್ವಚ್ಛಗೊಳಿಸಿದ ಸ್ಥಳೀಯರು

Suddi Udaya

ಶುಭ ಗೋಲ್ಡ್ ಸ್ಕೀಮ್ ಯೋಜನೆಯ ಗಿಫ್ಟ್ ವೋಚರ್ ಡ್ರಾ

Suddi Udaya
error: Content is protected !!