ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವಾಟರ್ ಬೆಡ್ ವಿತರಣೆ

Suddi Udaya

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ನಡ ಕಾರ್ಯಕ್ಷೇತ್ರದಲ್ಲಿ ವಾಸವಾಗಿರುವ ಶ್ರೀಮತಿ ಲೋಕಮ್ಮ ಭಟ್ಯ ನಾಯ್ಕ್ ಇವರ ತಾಯಿ ಐದು ವರ್ಷದಿಂದ ಅನಾರೋಗ್ಯ ದಿಂದ ತೀವ್ರ ಸಂಕಷ್ಟದಲ್ಲಿದ್ದು ಇವರ ಪರಿಸ್ಥಿತಿ ಯನ್ನು ಗಮನಿಸಿದ ಯೋಜನೆಯ ಕಾರ್ಯಕರ್ತರು ತಾಲೂಕಿನ ಯೋಜನಾಧಿಕಾರಿ ಸುರೇಂದ್ರ ರವರ ಮಾರ್ಗದರ್ಶನ ದಂತೆ ಲಾಯಿಲ ವಲಯದ ಮೇಲ್ವಿಚಾರಕ ಸುಶಾಂತ್ , ನಡ ಕಾರ್ಯಕ್ಷೇತ್ರದ ಸೇವಾಪ್ರತಿನಿಧಿ ಶ್ರೀಮತಿ ಶಕುಂತಳ, ನಡ ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸಂಯೋಜಕಿ ಕು ವಸಂತಿ. ನಡ ಒಕ್ಕೂಟದ ಪದಾಧಿಕಾರಿಗಳಾದ ಶ್ರೀಮತಿ ಗೀತಾ ಇವರೆಲ್ಲರ ಉಪಸ್ಥಿತಿಯಲ್ಲಿ ಎ.30ರಂದು ಮನೆಗೆ ಭೇಟಿ ಮಾಡಿ ವಾಟರ್ ಬೆಡ್ ವಿತರಣೆ ಮಾಡಲಾಯಿತು.

Leave a Comment

error: Content is protected !!