27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶುಭಾರಂಭ

ಉಜಿರೆಯ ಬೆನಕ ಆಸ್ಪತ್ರೆಯಲ್ಲಿ ರೇಡಿಯೋಲಜಿ ವಿಭಾಗ ಮತ್ತು ನೂತನ ಸಿ.ಟಿ. ಸ್ಕ್ಯಾನಿಂಗ್ ಪ್ರಾರಂಭೋತ್ಸವ

ಉಜಿರೆ: ಗ್ರಾಮೀಣ ಪ್ರದೇಶದಲ್ಲಿ ಗುಣಮಟ್ಟದ ಆರೋಗ್ಯ ಸೇವೆಯನ್ನು ಒದಗಿಸುವ ಬದ್ಧತೆಯೊಂದಿಗೆ ಆರಂಭವಾದ ಉಜಿರೆಯ ಬೆನಕ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯು ಸಮಾಜದ ಅಗತ್ಯತೆಗಳಿಗೆ ಸದಾ ಸ್ಪಂದಿಸುತ್ತಾ ಬಂದಿದೆ. ಈ ನಿಟ್ಟಿನಲ್ಲಿ ಪಟ್ಟಣಗಳಿಗೆ ಸೀಮಿತವಾದ ಬೆನಕ ಆಸ್ಪತ್ರೆಯ ಉನ್ನತೀಕರಿಸಿದ ರೇಡಿಯೋಲಜಿ ವಿಭಾಗ ಮತ್ತು ಸಿ.ಟಿ.ಸ್ಕ್ಯಾನಿಂಗ್ ಸೇವೆಯು ಎ.30ರಂದು ಶುಭಾರಂಭಗೊಂಡಿದೆ.

ಉಡುಪಿ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿಯವರ ದಿವ್ಯ ಹಸ್ತದಿಂದ ಉದ್ಘಾಟಿಸಿ ಶುಭಹಾರೈಸಿದರು.

ಅಧ್ಯಕ್ಷತೆಯನ್ನು ಬೆನಕ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ.ಗೋಪಾಲಕೃಷ್ಣ ಭಟ್ ವಹಿಸಿದರು.

ಮುಖ್ಯ ಅತಿಥಿಯಾಗಿ ಮಂಗಳೂರಿನ ಖ್ಯಾತ ರೇಡಿಯೊಲಾಗಿಸ್ಟ್ ಹಾಗೂ ಬಲ್ಮಠ ಡಯಾಗ್ನಿಸ್ಟಿಕ್ ಮತ್ತು ಸಂಶೋಧನಾ ಕೇಂದ್ರದ ವ್ಯವಸ್ಥಾಪನಾ ನಿರ್ದೇಶಕರಾದ ಡಾ.ಅತೀಂದ್ರ ಭಟ್ ಉಪಸ್ಥಿತರಿದ್ದರು.

ವೇದಿಕೆಯಲ್ಲಿ ಹಿರಿಯರಾದ ಸೀತರಾಮ್ ಭಟ್, ಡಾ.ಭಾರತಿ ಗೋಪಾಲಕೃಷ್ಣ ಭಟ್ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಶಾಸಕರಾದ ಪ್ರತಾಪಸಿಂಹ ನಾಯಕ್, ಪ್ರಮುಖರಾದ ಡಾ.ಪ್ರದೀಪ್ ಕುಮಾರ್, ಅನಂತ್ ಭಟ್ ಮಚ್ಚಿಮಲೆ, ಡಾ.ಎಂ.ಎಂ ದಯಾಕರ್, ಸೀತರಾಮ ತೋಳ್ಪಡಿತ್ತಾಯ, ಡಾ.ಜಯಕುಮಾರ್ ಶೆಟ್ಟಿ, ವಿನಾಯಕ್ ರಾವ್, ಬ್ಯಾಂಕ್ ಬರೋಡದ ಪ್ರಬಂಧಕ ಸುಖೇಶ್ ಹಾಗೂ ವೈದ್ಯರು, ವಿವಿಧ ಕ್ಷೇತ್ರದ ಗಣ್ಯರು ಉಪಸ್ಥಿತರಿದ್ದರು.

ಎಸ್.ಜಿ ಭಟ್ ಸ್ವಾಗತಿಸಿದರು, ಡಾ.ಅಂಕಿತಾ ಭಟ್ ಪ್ರಾರ್ಥಿಸಿದರು.

Related posts

ಆರಂಬೋಡಿ: ಪಾಣಿಮೇರುನಲ್ಲಿ ಅಕ್ರಮ ಮರಳು ಸಾಗಾಟ: ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಜ.29 (ಇಂದು): ಬದ್ಯಾರಿನಲ್ಲಿ “ಹಿಬರೋಡಿ ಯಕ್ಷೋತ್ಸವ”‌ -“ಸಹಸ್ರ ಕವಚ ಮೋಕ್ಷ” ಯಕ್ಷಗಾನ ಬಯಲಾಟ”

Suddi Udaya

ಪೆರ್ಲ ಬೈಪಾಡಿ ಹಿ.ಪ್ರಾ. ಶಾಲೆಯ ಬಳಿ ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಗಾತ್ರದ ಮರ

Suddi Udaya

ಗುರುವಾಯನಕೆರೆ ಶ್ರೀ ಕ್ಷೇ.ಧ.ಗ್ರಾ.ಯೋಜನೆಯಿಂದ ಸಹಾಯಧನ ಹಸ್ತಾಂತರ

Suddi Udaya

ಬರೆಂಗಾಯ ಸ.ಉ.ಹಿ.ಪ್ರಾ. ಶಾಲೆಯಲ್ಲಿ 75ನೇ ವರ್ಷದ ಅಮೃತ ಮಹೋತ್ಸವದ ಉದ್ಘಾಟನಾ ಸಮಾರಂಭ

Suddi Udaya

ಬೆಳ್ತಂಗಡಿ ಬಿಜೆಪಿ ಕಚೇರಿಗೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

Suddi Udaya
error: Content is protected !!